ಬ್ರೇಕಿಂಗ್ ನ್ಯೂಸ್
29-10-25 03:57 pm Mangalore Correspondent ಕರಾವಳಿ
ಬೆಳ್ತಂಗಡಿ, ಅ.29 : ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶದ ವಿರುದ್ದ ಹಾಗೂ ಪೊಲೀಸರು ಹೋರಾಟಗಾರರ ಮೇಲೆ ವಿನಾಕಾರಣ ಸುಳ್ಳು ಕೇಸು ದಾಖಲಿಸುತ್ತಿದ್ದಾರೆ ಎಂದು ಬೆಳ್ತಂಗಡಿ ತಹಶಿಲ್ದಾರ್ ಗೆ ಮನವಿ ನೀಡಲು ಬಂದಿದ್ದವರ ಮೇಲೆಯೇ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರತಿಭಟನೆಗೆ ಅವಕಾಶ ಇಲ್ಲದಿದ್ದರೂ ಜನ ಸೇರಿಸಿದ ಆರೋಪದಲ್ಲಿ ಸೌಜನ್ಯಾ ತಾಯಿ ಕುಸುಮಾವತಿ, ಪ್ರಸನ್ನ ರವಿ ಸೇರಿದಂತೆ 20ಕ್ಕೂ ಅಧಿಕ ಮಂದಿ ವಿರುದ್ದ ಎಫ್ಐಆರ್ ದಾಖಲಾಗಿದೆ.
ಅಕ್ಟೋಬರ್ 27 ರಂದು ಬೆಳಗ್ಗೆ ಸೌಜನ್ಯಾ ಪರ ಹೋರಾಟಗಾರರ ವಿರುದ್ದ ಪೊಲೀಸರು ಸುಳ್ಳು ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ತಹಶಿಲ್ದಾರ್ ಗೆ ಮನವಿ ಸಲ್ಲಿಸಲು ಸಿದ್ಧತೆ ನಡೆದಿತ್ತು. ಈ ವೇಳೆ ಸಾಕಷ್ಟು ಜನ ಸೇರಿದ್ದರಿಂದ ಪೊಲೀಸರು ಅವರನ್ನು ತಡೆದಿದ್ದರಿಂದ ಹೈಡ್ರಾಮಾ ಆಗುವಂತಾಗಿತ್ತು. ಬಳಿಕ ಪೊಲೀಸರು ಮತ್ತು ಹೋರಾಟಗಾರರ ನಡುವೆ ವಾಗ್ವಾದ ನಡೆದಿತ್ತು. ಆನಂತರ, ನಾವು ಮನವಿ ಕೊಡುವುದಕ್ಕೂ ಪೊಲೀಸರ ಅನುಮತಿ ಯಾಕೆ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಕೊನೆಗೆ ಐದು ಮಂದಿ ತಾಲೂಕು ಕಚೇರಿಗೆ ತೆರಳಿ ಉಪ ತಹಸೀಲ್ದಾರ್ ಗೆ ಮನವಿ ಪತ್ರ ನೀಡಿ ಬಂದಿದ್ದರು.
ಆದರೆ ಇದನ್ನೇ ನೆಪವಾಗಿಸಿದ ಪೊಲೀಸರು ಬೆಳ್ತಂಗಡಿ ತಾಲೂಕು ಕಚೇರಿ ಆವರಣದಲ್ಲಿ ಅಕ್ರಮ ಕೂಟ ಸೇರಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ಆರೋಪಿಸಿ 20ಕ್ಕೂ ಅಧಿಕ ಮಂದಿ ವಿರುದ್ಧ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಂದು ಪ್ರತಿಭಟನೆಗೆ ಅನುಮತಿ ಕೇಳಿದ್ದ ಅನಿಲ್ ಕುಮಾರ್ ಅಂತರ, ಪ್ರಜ್ವಲ್ ಗೌಡ, ಪ್ರದೀಪ್ ಕುಲಾಲ್, ಶ್ರೀನಿವಾಸ ಗೌಡ, ರವೀಂದ್ರ ಶೆಟ್ಟಿ, ಪ್ರಸನ್ನ ರವಿ, ಉದಯಪ್ರಸಾದ್, ಕುಸುಮಾವತಿ, ವೆಂಕಪ್ಪ ಕೋಟ್ಯಾನ್, ತನುಷ್ ಶೆಟ್ಟಿ, ಮೋಹನ್ ಶೆಟ್ಟಿ, ಜಯರಾಮ ಗೌಡ, ಸಂತೋಷ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಯೋಗೇಶ್ ಕುಲಾಲ್, ನಾರಾವಿ ವಿಜಯ, ಶಶಿಕಲಾ ಶೆಟ್ಟಿ, ಪೂಜಾಶ್ರೀ, ಟಿಕ್ಕಿ ರವಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಬೆಳ್ತಂಗಡಿ ಎಎಸ್ಐ ದುರ್ಗಾದಾಸ್ ದೂರು ನೀಡಿದ್ದು ಪೊಲೀಸರ ಸೂಚನೆ ನಿರ್ಲಕ್ಷಿಸಿ ಬೆಳ್ತಂಗಡಿ ಮಿನಿವಿಧಾನ ಸೌಧದ ರಸ್ತೆ ಹಾಗೂ ಕಚೇರಿ ಎದುರು ಅಕ್ರಮ ಕೂಟ ಸೇರಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ್ದಾರೆಂದು ಪ್ರಕರಣ ದಾಖಲಿಸಿದ್ದಾರೆ.
In a controversial incident, Beltangady Police have registered a case against people who had come to submit a petition to the Tahsildar, alleging that the police were filing false cases against Soujanya case supporters and activists. The protesters claimed they were being targeted for supporting activist Mahesh Shetty Timarodi, who is currently facing an order of externment (banishment) from the region.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am