ಬ್ರೇಕಿಂಗ್ ನ್ಯೂಸ್
29-10-25 03:57 pm Mangalore Correspondent ಕರಾವಳಿ
ಬೆಳ್ತಂಗಡಿ, ಅ.29 : ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶದ ವಿರುದ್ದ ಹಾಗೂ ಪೊಲೀಸರು ಹೋರಾಟಗಾರರ ಮೇಲೆ ವಿನಾಕಾರಣ ಸುಳ್ಳು ಕೇಸು ದಾಖಲಿಸುತ್ತಿದ್ದಾರೆ ಎಂದು ಬೆಳ್ತಂಗಡಿ ತಹಶಿಲ್ದಾರ್ ಗೆ ಮನವಿ ನೀಡಲು ಬಂದಿದ್ದವರ ಮೇಲೆಯೇ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರತಿಭಟನೆಗೆ ಅವಕಾಶ ಇಲ್ಲದಿದ್ದರೂ ಜನ ಸೇರಿಸಿದ ಆರೋಪದಲ್ಲಿ ಸೌಜನ್ಯಾ ತಾಯಿ ಕುಸುಮಾವತಿ, ಪ್ರಸನ್ನ ರವಿ ಸೇರಿದಂತೆ 20ಕ್ಕೂ ಅಧಿಕ ಮಂದಿ ವಿರುದ್ದ ಎಫ್ಐಆರ್ ದಾಖಲಾಗಿದೆ.
ಅಕ್ಟೋಬರ್ 27 ರಂದು ಬೆಳಗ್ಗೆ ಸೌಜನ್ಯಾ ಪರ ಹೋರಾಟಗಾರರ ವಿರುದ್ದ ಪೊಲೀಸರು ಸುಳ್ಳು ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ತಹಶಿಲ್ದಾರ್ ಗೆ ಮನವಿ ಸಲ್ಲಿಸಲು ಸಿದ್ಧತೆ ನಡೆದಿತ್ತು. ಈ ವೇಳೆ ಸಾಕಷ್ಟು ಜನ ಸೇರಿದ್ದರಿಂದ ಪೊಲೀಸರು ಅವರನ್ನು ತಡೆದಿದ್ದರಿಂದ ಹೈಡ್ರಾಮಾ ಆಗುವಂತಾಗಿತ್ತು. ಬಳಿಕ ಪೊಲೀಸರು ಮತ್ತು ಹೋರಾಟಗಾರರ ನಡುವೆ ವಾಗ್ವಾದ ನಡೆದಿತ್ತು. ಆನಂತರ, ನಾವು ಮನವಿ ಕೊಡುವುದಕ್ಕೂ ಪೊಲೀಸರ ಅನುಮತಿ ಯಾಕೆ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಕೊನೆಗೆ ಐದು ಮಂದಿ ತಾಲೂಕು ಕಚೇರಿಗೆ ತೆರಳಿ ಉಪ ತಹಸೀಲ್ದಾರ್ ಗೆ ಮನವಿ ಪತ್ರ ನೀಡಿ ಬಂದಿದ್ದರು.
ಆದರೆ ಇದನ್ನೇ ನೆಪವಾಗಿಸಿದ ಪೊಲೀಸರು ಬೆಳ್ತಂಗಡಿ ತಾಲೂಕು ಕಚೇರಿ ಆವರಣದಲ್ಲಿ ಅಕ್ರಮ ಕೂಟ ಸೇರಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ಆರೋಪಿಸಿ 20ಕ್ಕೂ ಅಧಿಕ ಮಂದಿ ವಿರುದ್ಧ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಂದು ಪ್ರತಿಭಟನೆಗೆ ಅನುಮತಿ ಕೇಳಿದ್ದ ಅನಿಲ್ ಕುಮಾರ್ ಅಂತರ, ಪ್ರಜ್ವಲ್ ಗೌಡ, ಪ್ರದೀಪ್ ಕುಲಾಲ್, ಶ್ರೀನಿವಾಸ ಗೌಡ, ರವೀಂದ್ರ ಶೆಟ್ಟಿ, ಪ್ರಸನ್ನ ರವಿ, ಉದಯಪ್ರಸಾದ್, ಕುಸುಮಾವತಿ, ವೆಂಕಪ್ಪ ಕೋಟ್ಯಾನ್, ತನುಷ್ ಶೆಟ್ಟಿ, ಮೋಹನ್ ಶೆಟ್ಟಿ, ಜಯರಾಮ ಗೌಡ, ಸಂತೋಷ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಯೋಗೇಶ್ ಕುಲಾಲ್, ನಾರಾವಿ ವಿಜಯ, ಶಶಿಕಲಾ ಶೆಟ್ಟಿ, ಪೂಜಾಶ್ರೀ, ಟಿಕ್ಕಿ ರವಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಬೆಳ್ತಂಗಡಿ ಎಎಸ್ಐ ದುರ್ಗಾದಾಸ್ ದೂರು ನೀಡಿದ್ದು ಪೊಲೀಸರ ಸೂಚನೆ ನಿರ್ಲಕ್ಷಿಸಿ ಬೆಳ್ತಂಗಡಿ ಮಿನಿವಿಧಾನ ಸೌಧದ ರಸ್ತೆ ಹಾಗೂ ಕಚೇರಿ ಎದುರು ಅಕ್ರಮ ಕೂಟ ಸೇರಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ್ದಾರೆಂದು ಪ್ರಕರಣ ದಾಖಲಿಸಿದ್ದಾರೆ.
In a controversial incident, Beltangady Police have registered a case against people who had come to submit a petition to the Tahsildar, alleging that the police were filing false cases against Soujanya case supporters and activists. The protesters claimed they were being targeted for supporting activist Mahesh Shetty Timarodi, who is currently facing an order of externment (banishment) from the region.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am