ಬ್ರೇಕಿಂಗ್ ನ್ಯೂಸ್
30-10-25 08:06 pm Mangalore Correspondent ಕರಾವಳಿ
ಮಂಗಳೂರು, ಅ.30 : ಧರ್ಮಸ್ಥಳದಲ್ಲಿ ಶವ ಹೂತಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ತಂಡಕ್ಕೆ ಎಸ್ಐಟಿ ಮತ್ತೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ. ವಿಠಲ ಗೌಡ ಅವರಿಗೆ 31ಕ್ಕೆ, ಉಳಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ಅವರಿಗೆ ನವೆಂಬರ್ 3ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.
ಮಟ್ಟೆಣ್ಣನವರ್ ಮತ್ತು ಜಯಂತ್ ಅವರ ಬೆಂಗಳೂರು ಹಾಗೂ ಬೆಳ್ತಂಗಡಿಯಲ್ಲಿರುವ ಮನೆಗಳಿಗೆ ಖುದ್ದು ತೆರಳಿ ನೋಟಿಸ್ ನೀಡಲಾಗಿದೆ. ವಾಟ್ಸಾಪ್, ಮೈಲ್ ಮೂಲಕ ನೋಟಿಸ್ ಕೊಡುತ್ತಾರೆ, ಇದನ್ನೆಲ್ಲಾ ರದ್ದು ಮಾಡಬೇಕೆಂದು ತಿಮರೋಡಿ ಗ್ಯಾಂಗ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಮನೆಗೇ ತೆರಳಿ ನೋಟಿಸ್ ನೀಡಲಾಗಿದೆ. ನೋಟಿಸಿನಲ್ಲಿ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.
ಮೊದಲ ನೋಟಿಸ್ಗೆ ನಾಲ್ವರು ಗೈರಾದ ಕಾರಣ, ಪೊಲೀಸ್ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಮೊನ್ನೆ ಸುಜಾತ ಭಟ್ ಮಾತ್ರ ವಿಚಾರಣೆಗೆ ಹಾಜರಾಗಿದ್ದರು. ಬೆಂಗಳೂರಿನ ಸಹಕಾರ ನಗರದಲ್ಲಿರುವ ಗಿರೀಶ್ ಮಟ್ಟಣ್ಣವರ್, ಬೆಂಗಳೂರು ಹಾಗೂ ಮಂಗಳೂರಿನಲ್ಲಿರುವ ಜಯಂತ್ ಟಿ ನಿವಾಸ, ಧರ್ಮಸ್ಥಳದ ವಿಠಲ ಗೌಡ ನಿವಾಸ ಹಾಗೂ ಉಜಿರೆ ಬಳಿಯ ತಿಮರೋಡಿಯ ಮಹೇಶ್ ಶೆಟ್ಟಿ ಅವರ ಮನೆಗೆ ತೆರಳಿ, ಮನೆಯಲ್ಲಿ ಇಲ್ಲದ ಕಾರಣ ಗೋಡೆಗೆ ಅಂಟಿಸಿ ತೆರಳಿದ್ದಾರೆ.
ನೊಟಿಸ್ ನಲ್ಲಿ ವಿಠಲ ಗೌಡರಿಗೆ ಅ.31 ರಂದೇ ವಿಚಾರಣೆಗೆ ಹಾಜರಾಗಲು ಷರತ್ತು ಹಾಕಲಾಗಿದೆ. ಕಳೆದ ಸೋಮವಾರ ಐವರಿಗೂ ಒಂದೇ ದಿನ ಹಾಜರಾಗುವಂತೆ ಹೇಳಲಾಗಿತ್ತು. ಆಗ ವಕೀಲರ ಮೂಲಕ ಕಾಲಾವಕಾಶ ಕೇಳಿದ್ದರು. ಆದರೆ ಈ ನಡುವೆ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ನೋಟಿಸ್ ರದ್ದು ಮಾಡುವಂತೆ ಮತ್ತು ತಮ್ಮ ಮೇಲಿನ ಪ್ರಕರಣ ರದ್ದುಪಡಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಇದರ ನಡುವೆ ಮತ್ತೆ ಎಸ್ಐಟಿ 39/2025 ಕೇಸ್ ನಡಿ ವಿಚಾರಣೆಗೆ ಬರಲು ಎರಡನೇ ನೋಟಿಸ್ ನೀಡಿದೆ. ಈ ನೋಟಿಸ್ ತಪ್ಪಿಸಿದರೆ ವಶಕ್ಕೆ ಪಡೆದು ಕರೆತರುವ ಸಾಧ್ಯತೆಯಿದೆ.
In the case related to the alleged burial of a body in Dharmasthala, the Special Investigation Team (SIT) has once again issued summons to Mahesh Shetty Timarodi and his associates to appear for questioning.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am