ಬ್ರೇಕಿಂಗ್ ನ್ಯೂಸ್
30-10-25 08:06 pm Mangalore Correspondent ಕರಾವಳಿ
ಮಂಗಳೂರು, ಅ.30 : ಧರ್ಮಸ್ಥಳದಲ್ಲಿ ಶವ ಹೂತಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ತಂಡಕ್ಕೆ ಎಸ್ಐಟಿ ಮತ್ತೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ. ವಿಠಲ ಗೌಡ ಅವರಿಗೆ 31ಕ್ಕೆ, ಉಳಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ಅವರಿಗೆ ನವೆಂಬರ್ 3ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.
ಮಟ್ಟೆಣ್ಣನವರ್ ಮತ್ತು ಜಯಂತ್ ಅವರ ಬೆಂಗಳೂರು ಹಾಗೂ ಬೆಳ್ತಂಗಡಿಯಲ್ಲಿರುವ ಮನೆಗಳಿಗೆ ಖುದ್ದು ತೆರಳಿ ನೋಟಿಸ್ ನೀಡಲಾಗಿದೆ. ವಾಟ್ಸಾಪ್, ಮೈಲ್ ಮೂಲಕ ನೋಟಿಸ್ ಕೊಡುತ್ತಾರೆ, ಇದನ್ನೆಲ್ಲಾ ರದ್ದು ಮಾಡಬೇಕೆಂದು ತಿಮರೋಡಿ ಗ್ಯಾಂಗ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಮನೆಗೇ ತೆರಳಿ ನೋಟಿಸ್ ನೀಡಲಾಗಿದೆ. ನೋಟಿಸಿನಲ್ಲಿ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.
ಮೊದಲ ನೋಟಿಸ್ಗೆ ನಾಲ್ವರು ಗೈರಾದ ಕಾರಣ, ಪೊಲೀಸ್ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಮೊನ್ನೆ ಸುಜಾತ ಭಟ್ ಮಾತ್ರ ವಿಚಾರಣೆಗೆ ಹಾಜರಾಗಿದ್ದರು. ಬೆಂಗಳೂರಿನ ಸಹಕಾರ ನಗರದಲ್ಲಿರುವ ಗಿರೀಶ್ ಮಟ್ಟಣ್ಣವರ್, ಬೆಂಗಳೂರು ಹಾಗೂ ಮಂಗಳೂರಿನಲ್ಲಿರುವ ಜಯಂತ್ ಟಿ ನಿವಾಸ, ಧರ್ಮಸ್ಥಳದ ವಿಠಲ ಗೌಡ ನಿವಾಸ ಹಾಗೂ ಉಜಿರೆ ಬಳಿಯ ತಿಮರೋಡಿಯ ಮಹೇಶ್ ಶೆಟ್ಟಿ ಅವರ ಮನೆಗೆ ತೆರಳಿ, ಮನೆಯಲ್ಲಿ ಇಲ್ಲದ ಕಾರಣ ಗೋಡೆಗೆ ಅಂಟಿಸಿ ತೆರಳಿದ್ದಾರೆ.
ನೊಟಿಸ್ ನಲ್ಲಿ ವಿಠಲ ಗೌಡರಿಗೆ ಅ.31 ರಂದೇ ವಿಚಾರಣೆಗೆ ಹಾಜರಾಗಲು ಷರತ್ತು ಹಾಕಲಾಗಿದೆ. ಕಳೆದ ಸೋಮವಾರ ಐವರಿಗೂ ಒಂದೇ ದಿನ ಹಾಜರಾಗುವಂತೆ ಹೇಳಲಾಗಿತ್ತು. ಆಗ ವಕೀಲರ ಮೂಲಕ ಕಾಲಾವಕಾಶ ಕೇಳಿದ್ದರು. ಆದರೆ ಈ ನಡುವೆ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ನೋಟಿಸ್ ರದ್ದು ಮಾಡುವಂತೆ ಮತ್ತು ತಮ್ಮ ಮೇಲಿನ ಪ್ರಕರಣ ರದ್ದುಪಡಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಇದರ ನಡುವೆ ಮತ್ತೆ ಎಸ್ಐಟಿ 39/2025 ಕೇಸ್ ನಡಿ ವಿಚಾರಣೆಗೆ ಬರಲು ಎರಡನೇ ನೋಟಿಸ್ ನೀಡಿದೆ. ಈ ನೋಟಿಸ್ ತಪ್ಪಿಸಿದರೆ ವಶಕ್ಕೆ ಪಡೆದು ಕರೆತರುವ ಸಾಧ್ಯತೆಯಿದೆ.
In the case related to the alleged burial of a body in Dharmasthala, the Special Investigation Team (SIT) has once again issued summons to Mahesh Shetty Timarodi and his associates to appear for questioning.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 01:23 pm
HK News Desk
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm