ಬ್ರೇಕಿಂಗ್ ನ್ಯೂಸ್
 
            
                        31-10-25 03:05 pm Mangalore Correspondent ಕರಾವಳಿ
 
            ಮಂಗಳೂರು, ಅ.31 : ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಆರೆಸ್ಸೆಸ್ ನಾಯಕರೊಬ್ಬರು ಮಾತನಾಡಿರುವ ವಿಡಿಯೋ ಒಂದನ್ನು ತನ್ನ ಫೇಸ್ಬುಕ್ ಜಾಲತಾಣದಲ್ಲಿ ಹಂಚಿಕೊಂಡ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ. ಆನಂತರ, ಸೋಮವಾರ ವಿಚಾರಣೆಗೆ ಬರುವಂತೆ ನೋಟೀಸ್ ನೀಡಿ ಬಿಡಲಾಗಿದೆ.
ವ್ಯಕ್ತಿಯೊಬ್ಬರು ಮಾತನಾಡುವ ವಿಡಿಯೋದಲ್ಲಿ ಕಳೆದ ಎರಡು ವರ್ಷಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹುಟ್ಟಿದ ಮಕ್ಕಳ ಲೆಕ್ಕವನ್ನು ತೆಗೆದು ನೋಡಿದ್ದೇನೆ. ಅದರಲ್ಲಿ ಒಟ್ಟು 47,700 ಮಕ್ಕಳಲ್ಲಿ 23200 ಮಕ್ಕಳು ಹಿಂದು ಮತ್ತು 22300 ಮಕ್ಕಳು ಅಲ್ಪಸಂಖ್ಯಾತರದ್ದು. 78 ಶೇಕಡಾ ಜನರಿಗೆ ಹುಟ್ಟಿದ ಮಕ್ಕಳು 23 ಸಾವಿರ, ಆದರೆ 28 ಶೇಕಡಾ ಜನರಿಗೆ ಹುಟ್ಟಿದ ಮಕ್ಕಳು 22 ಸಾವಿರ. ಹೀಗಾದಲ್ಲಿ ಇನ್ನೊಂದು 10-15 ವರ್ಷದಲ್ಲಿ ನಮ್ಮ ಊರು ಎಲ್ಲಿಗೆ ಮುಟ್ಟುತ್ತದೆ. ನಮ್ಮ ಮಕ್ಕಳಿಗೆ ನಾವು ಬೇಗ ಮದುವೆ ಮಾಡ್ತೀವಾ.. 25, 26, 27ರ ವಯಸ್ಸಿನಲ್ಲಿ ಕನಿಷ್ಠ ಮೂರು ಮಕ್ಕಳಾದರೆ ನಮ್ಮ ದೇಶ ಉಳೀತದೆ, ಈ ಬಗ್ಗೆ ನಾವೆಲ್ಲ ಸೇರಿ ನಿಶ್ಚಯ ಮಾಡೋಣ ಎಂದು ಹೇಳುವ ವಿಚಾರ ಇದೆ.
ಈ ಭಾಷಣದ ತುಣುಕಿನ ವಿಡಿಯೋವನ್ನು ಮುಸ್ಲಿಂ ಜನಸಂಖ್ಯೆ ಜಿಹಾದ್ ಮೆಟ್ಟಿ ನಿಲ್ಲೋಣ ಎಂದು ಹೇಳಿ ಶರಣ್ ಪಂಪ್ವೆಲ್ ಮತ್ತು ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಜಾಲತಾಣದಲ್ಲಿ ಷೇರ್ ಮಾಡಿದ್ದಾರೆ. ಇದರ ಬಗ್ಗೆ ಕದ್ರಿ ಠಾಣೆಯ ಸಿಬಂದಿ ನಾಗರಾಜ್ ಮುಸ್ಲಿಮರ ಬಗ್ಗೆ ದ್ವೇಷ ಹುಟ್ಟುವ ರೀತಿ ಪೋಸ್ಟ್ ಷೇರ್ ಮಾಡಿದ್ದಾರೆಂದು ದೂರು ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ. ಇದರಂತೆ ಬಿಎನ್ಎಸ್ 353(2(), ಆರ್ ಡಬ್ಲ್ಯು 3(5) ಪ್ರಕಾರ ಕೇಸು ದಾಖಲಾಗಿದೆ. ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಠಾಣೆಗೆ ಬಂದು ಪೊಲೀಸರ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ, ಸೋಶಿಯಲ್ ಮೀಡಿಯಾದಲ್ಲಿ ಷೇರ್ ಮಾಡಿರುವ ವಿಡಿಯೋ ಬಗ್ಗೆ ಪ್ರಕರಣ ದಾಖಲಾಗಿದೆ. ಅವರು ತನ್ನ ಪೋಸ್ಟ್ ಡಿಲೀಟ್ ಮಾಡಿದ್ದು ಎಫ್ಐಆರ್ ವಿಚಾರ ತಿಳಿದು ಕದ್ರಿ ಠಾಣೆಗೆ ಬಂದಿದ್ದಾರೆ. ಸೋಮವಾರ ವಿಚಾರಣೆಗೆ ಬರುವಂತೆ ನೋಟೀಸ್ ನೀಡಿ ಕಳಿಸಲಾಗಿದೆ ಎಂದು ತಿಳಿಸಿದ್ದಾರೆ.
 
            
            
            An FIR has been registered at the Kadri police station against VHP leader Sharan Pumpwell and BJP leader Vikas Puttur for sharing a video clip of an RSS leader’s speech on Facebook that allegedly promotes communal disharmony.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm