ಬ್ರೇಕಿಂಗ್ ನ್ಯೂಸ್
01-11-25 11:02 pm Mangalore Correspondent ಕರಾವಳಿ
ಮಂಗಳೂರು, ನ.1 : ಉಡುಪಿ -ಕಾಸರಗೋಡು 440 ಕೆ.ವಿ. ವಿದ್ಯುತ್ ಲೈನ್ ಕಾಮಗಾರಿಯ ಸಂದರ್ಭದಲ್ಲಿ ರೈತರ ಕೃಷಿ ನಾಶ ಮಾಡಿದ್ದಲ್ಲದೆ ಪೊಲೀಸ್ ಬಲವನ್ನು ಬಳಸಿಕೊಂಡು ರೈತರ ಮೇಲೆ ದೌರ್ಜನ್ಯವೆಸಗಿದ್ದಾರೆಂದು ಸ್ಟಾರ್ ಲೈಟ್ ವಿದ್ಯುತ್ ಕಂಪೆನಿ ವಿರುದ್ಧ ಬೃಹತ್ ಸಂಖ್ಯೆಯಲ್ಲಿ ಸೇರಿದ ರೈತರು ಶನಿವಾರ ಮೂಡುಬಿದ್ರೆ ಬಳಿಯ ಅಶ್ವತ್ಥಪುರದಲ್ಲಿ ಪ್ರತಿಭಟನಾ ಜಾಥಾ, ಸಭೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಶ್ವತ್ಥಪುರ ಸೀತಾರಾಮ ದೇವಸ್ಥಾನದ ಬಳಿ ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿದ ರೈತರು ಕಂಪೆನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಒಂಟಿಮಾರ್ ಪ್ರದೇಶದಲ್ಲಿ ಬೆಳೆ ಹಾನಿಗೆ ಒಳಗಾದ ರೈತ ಭಾಸ್ಕರ ಶೆಟ್ಟಿ ಅವರ ಜಮೀನಿನ ವರೆಗೂ ಜಾಥಾ ನಡೆಸಿದರು. ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಕೇಮಾರು ಸಾಂದೀಪನಿ ಮಠದ ಈಶ ವಿಠಲದಾಸ ಸ್ವಾಮೀಜಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ಸರ್ಕಾರಗಳು ಕಸದ ಬುಟ್ಟಿಯಂತೆ ಭಾವಿಸಿದ್ದು ಇಲ್ಲಿನ ಜನರಿಗೆ ಅಗತ್ಯವೇ ಇಲ್ಲದ ಕಾರ್ಖಾನೆಗಳನ್ನು ಇಲ್ಲಿಗೆ ತಂದು ಹಾಕಿ ಜನರ ನೆಮ್ಮದಿ ಹಾಳು ಮಾಡುತ್ತಿದೆ. ಇದು ನಮ್ಮ ದುರಾದೃಷ್ಟ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಇತ್ತೀಚಿನ ದಿನಗಳಲ್ಲಿ ಕೋಟಿ ವಿದ್ಯೆಗಿಂತ ಲೂಟಿ ವಿದ್ಯೆಯೇ ಮೇಲು ಎಂಬಂತಾಗಿದ್ದು ರೈತರಿಗೆ ಅನ್ಯಾಯವಾಗುತ್ತಿದೆ. ರೈತನ ಅಭಿವೃದ್ಧಿಯೇ ದೇಶದ ಅಭಿವೃದ್ಧಿ. ಕೃಷಿ ಅಭಿವೃದ್ಧಿಯಾದರೆ ಮಾತ್ರ ಮನುಷ್ಯ ಪಾಣಿ ಪಕ್ಷಿ ಸಂಕುಲ ಅಭಿವೃದ್ಧಿಯಾಗುತ್ತದೆ. ಕೃಷಿ ನಾಶವಾದರೆ ಮನುಕುಲದ ಜೊತೆಗೆ ಸಂಬಂಧ ಹೊಂದಿರುವ ಎಲ್ಲವೂ ನಾಶವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಬಳಿಕ ಕಟೀಲು ದುರ್ಗಾಪರಮೇಶ್ವರಿ ದೇವಳದ ಅನುವಂಶಿಕ ಅರ್ಚಕರಾದ ಅನಂತ ಅಸ್ರಣ್ಣ ಮಾತನಾಡಿದರು. ಸಭೆಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಮುಖಂಡ ನಾರಾಯಣ ಸ್ವಾಮಿ, ಒಬ್ಬ ರೈತನ ಸಮಸ್ಯೆ ಎಲ್ಲ ರೈತರ ಸಮಸ್ಯೆ. ಒಬ್ಬರ ಸಮಸ್ಯೆಗೆ ಎಲ್ಲರೂ ಒಗ್ಗೂಡಿ ಹೋರಾಡಬೇಕಿದೆ. ರೈತರ ಅನುಮತಿ ಇಲ್ಲದೆ ಆಕ್ರಮಿಸಿಕೊಂಡು ಬೆಳೆ ನಾಶ ಮಾಡಿಕೊಂಡು ತಮ್ಮ ಕಾರ್ಯ ಸಾಧನೆ ಮಾಡುತ್ತಿದೆ. ಕಂಪೆನಿಗೆ ರೈತರ ಜಮೀನಿಗೆ ಅನಧಿಕೃತ ದಾಳಿ ಮಾಡಿ ಬೆಳೆ ಹಾನಿ ಮಾಡಲು ಪರವಾನಿಗೆ ನೀಡಿದವರು ಯಾರು ಎಂದು ಪ್ರಶ್ನಿಸಿದರು. ಸರಕಾರದ ಅವೈಜ್ಞಾನಿಕ ನಿರ್ಧಾರಗಳಿಂದ ರೈತರು ಕೃಷಿ ಬಿಟ್ಟು ಕಾರ್ಮಿಕರಾಗುತ್ತಿದ್ದಾರೆ. ಆದಷ್ಟು ಕೃಷಿ ಭೂಮಿಗಳಿಂದ ದೂರದಿಂದ ಈ ಕಾಮಗಾರಿ ನಡೆಸಬೇಕು. ಈ ಕಾಮಗಾರಿಗೆ ರೈತರು ಒಂದು ಇಂಚೂ ಜಾಗವನ್ನು ನೀಡುವುದಿಲ್ಲ ಎಂದು ಕಂಪೆನಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸುಚರಿತ ಶೆಟ್ಟಿ, ಕೃಷ್ಣಪ್ರಸಾದ್ ತಂತ್ರಿ, ಗ್ರಾ.ಪಂ. ಅಧ್ಯಕ್ಷೆ ಶಾಲಿನಿ, ಪ್ರವೀಣ್ ಭಂಡಾರಿ, ವಸಂತ ಭಟ್, ರವಿರಾಜ್, ಸುರೇಶ್ ಶೆಟ್ಟಿ ದೋಟ, ಬಾಲಕೃಷ್ಣ ದೇವಾಡಿಗ, ಭಾಸ್ಕರ ಶೆಟ್ಟಿ, ಅಲ್ಫೋನ್ಸ್ ನಿಡ್ಡೋಡಿ, ಇನ್ನಾ ಚಂದ್ರಹಾಸ ಶೆಟ್ಟಿ, ಹೊನ್ನಪ್ಪಗೌಡ, ಕೃಷ್ಣಮೂರ್ತಿ, ಜಾಕಿಂ ಪಿಂಟೊ, ಸುದೇಶ್ ದೇವಾಡಿಗ, ಹರೀಶ್ ಉಳ್ಳಾಲ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.
A large group of farmers staged a protest at Ashwatthapura near Moodbidri on Saturday against the Udupi–Kasaragod 440 kV power line project, accusing the Star Light Power Company of destroying agricultural lands and using police force to suppress farmers’ voices.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am