ಬ್ರೇಕಿಂಗ್ ನ್ಯೂಸ್
05-11-25 07:49 pm Mangalore Correspondent ಕರಾವಳಿ
ಮಂಗಳೂರು, ನ.5 : ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ ಅವರು ತನ್ನ ಜಾನಪದೀಯ ಸಂಶೋಧನೆಯ ಕ್ಷೇತ್ರ ಕಾರ್ಯದ ಅನುಭವಗಳನ್ನು ದಾಖಲಿಸುವ ಮೂಲಕ ಸಂಶೋಧನಾ ಕ್ಷೇತ್ರಕ್ಕೆ ಬರುವವರಿಗೆ ಬಹುದೊಡ್ಡ ಮಾರ್ಗದರ್ಶಿ ಕೊಡುಗೆಯನ್ನು ನೀಡಿದ್ದಾರೆ, ತುಳುವಿನಲ್ಲಿ ಇದೊಂದು ಮಹತ್ವದ ಕೃತಿಯಾಗಲಿದೆ ಎಂದು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಆಶಾಲತಾ ಸುವರ್ಣ ಹೇಳಿದರು.
ತುಳು ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ಡಾ.ಇಂದಿರಾ ಹೆಗ್ಗಡೆ ಅವರ ‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ತುಳು ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಜಾನಪದೀಯ ಅಧ್ಯಯನ ಕ್ಷೇತ್ರ ಕಾರ್ಯಗಳ ಸಂದರ್ಭದಲ್ಲಿ ಮಹಿಳೆಯರು ಸಾಕಷ್ಟು ಎಡರು ತೊಡಕುಗಳನ್ನು ಎದುರಿಸುವ ಸಂದರ್ಭ ಉಂಟಾಗುತ್ತಿತ್ತು. ಈ ಎಲ್ಲಾ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಮುನ್ನಡೆದು ಡಾ.ಇಂದಿರಾ ಹೆಗ್ಗಡೆ ಅವರು ಹಲವು ಮಹತ್ವದ ಕೃತಿಗಳನ್ನು ನೀಡಿರುವುದು ಪ್ರಶಂಸನೀಯ ಎಂದು ಡಾ.ಆಶಾಲತಾ ಸುವರ್ಣ ಅಭಿಪ್ರಾಯಪಟ್ಟರು.
ಲೇಖಕಿ ಡಾ.ಇಂದಿರಾ ಹೆಗ್ಗಡೆ ಮಾತನಾಡಿ, ತಾನು ಕನ್ನಡದಲ್ಲಿ ಹಲವು ಕೃತಿಗಳನ್ನು ಬರೆದರೂ ತುಳುವಿನಲ್ಲಿ ಬರೆದ ‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ಕೃತಿ ನನಗೆ ಹೃದಯಕ್ಕೆ ಹಾಗೂ ಮನಸ್ಸಿಗೆ ತುಂಬಾ ಆಪ್ತವಾಯಿತು, ತುಳುವಿನಲ್ಲಿ ಬರೆಯುವುದು ತುಂಬಾ ಆಪ್ತವಾದ ವಿಚಾರ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಡಾ.ಸಮೀರ್ ಮಾಡ, ಹಿರಿಯ ಲೇಖಕಿ ಪ್ರೇಮಾ ಅಜ್ರಿ ಕಾರ್ಕಳ, ಚೇಳೈರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ.ಜ್ಯೋತಿ ಚೇಳೈರು, ನಿವೃತ್ತ ಪ್ರಾಂಶುಪಾಲ ಕೃಷ್ಣಮೂರ್ತಿ ಪಿ. ಅವರು ಕೃತಿಯ ಬಗ್ಗೆ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ತುಳುವಿನಲ್ಲಿ ಹೊಸದಾಗಿ ಸಂಶೋಧನೆ ಮಾಡಲು ಹೊರಟವರಲ್ಲಿ ಕ್ಷೇತ್ರ ಕಾರ್ಯದ ಅನುಭವದ ಕೊರತೆ ಇದೆ, ತಳಸ್ಪರ್ಶಿಯಾದ ಕ್ಷೇತ್ರ ಅಧ್ಯಯನದ ಮೂಲಕ ಸಂಶೋಧನೆ ನಡೆಸುವುದಕ್ಕೆ ಇಂದಿರಾ ಹೆಗ್ಗಡೆಯವರು ನಿದರ್ಶನವಾಗಿದ್ದಾರೆ ಎಂದರು. ಅಕಾಡೆಮಿಯ ಸದಸ್ಯ ಸಂತೋಷ್ ಶೆಟ್ಟಿ ಹಿರಿಯಡ್ಕ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
The release of Dr. Indira Heggade’s latest Tulu work marks a major milestone in regional research literature. Scholars described the book as a guiding light for young researchers and a rich documentation of her field experiences in folklore studies.
30-01-26 11:55 am
HK News Desk
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm