ಬ್ರೇಕಿಂಗ್ ನ್ಯೂಸ್
06-11-25 12:51 pm Mangalore Correspondent ಕರಾವಳಿ
ಮಂಗಳೂರು, ನ.6 : ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಜಾಮರ್ ಅಳವಡಿಸಿರುವ ಹಿನ್ನೆಲೆಯಲ್ಲಿ ಸುತ್ತಲಿನ ಪ್ರದೇಶದಲ್ಲಿ ಮೊಬೈಲ್ ನೆಟ್ವರ್ಕ್ ತೊಂದರೆಯಾಗಿದೆ ಎಂಬ ವಕೀಲರ ದೂರಿಗೆ ಸಂಬಂಧಿಸಿ ಹೈಕೋರ್ಟ್, ಅಲ್ಲಿನ ಸಾಮರ್ಥ್ಯವನ್ನು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.
ಜಾಮರ್ ಅಳವಡಿಸಿರುವುದರಿಂದ ಕಳೆದ ಮಾರ್ಚ್ನಿಂದ ಮಂಗಳೂರಿನ ನ್ಯಾಯಾಲಯಗಳ ಸಂಕೀರ್ಣ ಸಹಿತ ಸುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ಉಂಟಾಗಿರುವ ಬಗ್ಗೆ ಮಂಗಳೂರಿನ ವಕೀಲರ ಸಂಘ ಹೈಕೋರ್ಟಿನಲ್ಲಿ ದಾವೆ ಹೂಡಿದ್ದು ವಿಚಾರಣೆ ಆರಂಭಗೊಂಡಿದೆ. ಸಂಘದ ಪರವಾಗಿ ಹಿರಿಯ ವಕೀಲ ಪಿ.ಪಿ. ಹೆಗ್ಡೆ ವಾದ ಮಂಡಿಸಿದರು.
ಕಾರಾಗೃಹದಲ್ಲಿರುವ ಕೈದಿಗಳು ಮೊಬೈಲ್ ಬಳಸಬಾರದೆಂಬ ಉದ್ದೇಶದಿಂದ ಜಾಮರ್ ಅಳವಡಿಸಲಾಗಿದೆ. ಆದರೆ ಕೈದಿಗಳಿಗೆ ಮೊಬೈಲ್ ನೆಟ್ವರ್ಕ್ ದೊರೆಯುತ್ತಿರುವ ಮಾಹಿತಿ ಇದೆ. ಕಾರಾಗೃಹದ ಹೊರ ಭಾಗದಲ್ಲಿ ನೆಟ್ವರ್ಕ್ ತೊಂದರೆಯಾಗುತ್ತಿದೆ ಎಂದು ವಾದಿಸಿದರು. ನೆಟ್ವರ್ಕ್ ಸಮಸ್ಯೆಯಿಂದಾಗಿ ನ್ಯಾಯವಾದಿಗಳ ಸಹಿತ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ. ಈ ಬಗ್ಗೆ ಸಂಬಂಧಿಸಿದವರಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ನ್ಯಾಯಾಲಯದ ಕಲಾಪಗಳಿಗೆ ಸಂಬಂಧಿಸಿದ ಕೆಲಸಗಳನ್ನು ಮಾಡುವ ಸಂದರ್ಭದಲ್ಲಿಯೂ ನ್ಯಾಯವಾದಿಗಳಿಗೆ ಅಡ್ಡಿಯಾಗುತ್ತದೆ ಎಂದು ವಾದಿಸಿದರು.
ವಾದ ಆಲಿಸಿದ ನ್ಯಾಯಾಧೀಶರು ಕಾರಾಗೃಹ, ನ್ಯಾಯಾಲಯ ಹಾಗೂ ಸುತ್ತಲಿನ ಪರಿಸರದಲ್ಲಿ ಇರುವ ಮೊಬೈಲ್ ನೆಟ್ವರ್ಕ್ ಸಾಮರ್ಥ್ಯದ ಬಗ್ಗೆ ಪರಿಶೀಲನೆ ನಡೆಸಿ ವಾರದೊಳಗೆ ತಾಂತ್ರಿಕ ವರದಿಯನ್ನು ಸಲ್ಲಿಸುವಂತೆ ಸರಕಾರಕ್ಕೆ ಸೂಚಿಸಿದರು. ಮುಂದಿನ ವಿಚಾರಣೆಯನ್ನು ನ.18ಕ್ಕೆ ನಿಗದಿಗೊಳಿಸಲಾಗಿದೆ. ಕಾರಾಗೃಹದ ಸುತ್ತಲಿನ ಕೊಡಿಯಾಲ್ ಬೈಲ್ ಪ್ರದೇಶದ ಒಂದು ಕಿ.ಮೀ.ಗೂ ಹೆಚ್ಚು ಪ್ರದೇಶದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ಉಂಟಾಗಿದ್ದು ಶಿಕ್ಷಣ ಸಂಸ್ಥೆಗಳು, ವಾಣಿಜ್ಯ ಸಂಸ್ಥೆಗಳು, ನ್ಯಾಯಾಲಯ ಸಹಿತ ನಗರದ ಕೇಂದ್ರ ಭಾಗದಲ್ಲಿ ದಿನನಿತ್ಯದ ವ್ಯವಹಾರ, ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಬೀರಿದೆ.
Following complaints from the Mangaluru Bar Association about poor mobile network coverage near the district jail and court complex, the Karnataka High Court has directed authorities to inspect the jammer’s functioning and submit a detailed technical report within a week.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am