ಬ್ರೇಕಿಂಗ್ ನ್ಯೂಸ್
07-11-25 02:18 pm Mangalore Correspondent ಕರಾವಳಿ
ಮಂಗಳೂರು, ನ.7 : ಕಂಬಳ ಸಂಘಟಕ, ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ, ನೆಲ್ಯಾಡಿಯಲ್ಲಿ ತಂದೆಯ ಹೊಟೇಲ್ ಉದ್ಯಮ ನೋಡಿಕೊಂಡಿದ್ದ ಅಭಿಷೇಕ್ ಆಳ್ವ(29) ಹೆಜಮಾಡಿ ಬಳಿಯ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಶುಕ್ರವಾರ ಬೆಳಗ್ಗೆ ನದ ಕಿನಾರೆಯಲ್ಲಿ ಶವ ಪತ್ತೆಯಾಗಿದೆ.
ಬುಧವಾರ ರಾತ್ರಿ ಸ್ನೇಹಿತರೊಂದಿಗೆ ಊಟ ಮುಗಿಸಿ ತನ್ನ ಕಾರಿನಲ್ಲಿ ತೆರಳಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು. ಗುರುವಾರ ಸಂಜೆ ಮೂಲ್ಕಿ ಬಪ್ಪನಾಡು ಸೇತುವೆ ಬಳಿ ಅವರ ಕಾರು ಪತ್ತೆಯಾಗಿತ್ತು. ಹೀಗಾಗಿ ತಂದೆ ನವೀನಚಂದ್ರ ಆಳ್ವ ಪುತ್ರ ನಾಪತ್ತೆಯಾದ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ದೂರು ನೀಡಿದ್ದರು. ಇದರ ಬೆನ್ನಲ್ಲೇ ಸ್ಥಳೀಯರು ಮತ್ತು ಮುಳುಗು ತಜ್ಞ ಈಶ್ವರ್ ಮಲ್ಪೆ ಶಾಂಭವಿ ನದಿಯಲ್ಲಿ ಹುಡುಕಾಟ ಆರಂಭಿಸಿದ್ದರು. ಶುಕ್ರವಾರ ಬೆಳಗ್ಗೆ ನದಿ ಮಧ್ಯದ ಕುದ್ರು ಬಳಿ ಶವ ಪತ್ತೆಯಾಗಿದ್ದು ಪೊಲೀಸರು ಅಲ್ಲಿಂದ ಹೊರ ತೆಗೆದು ಮಂಗಳೂರಿನ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಅಭಿಷೇಕ್ ಆಳ್ವ ನೆಲ್ಯಾಡಿಯಲ್ಲಿ ಚರಣ್ ಬಾರ್ ಅಂಡ್ ರೆಸ್ಟೋರೆಂಟ್ ಉದ್ಯಮವನ್ನು ನೋಡಿಕೊಳ್ಳುತ್ತಿದ್ದರು. ಘಟನೆ ಬಗ್ಗೆ ಪಡುಬಿದ್ರಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Abhishek Alva (29), son of Kambala organizer and entrepreneur Naveen Chandra Alva of Thiruvailuguttu, was found dead in the Shambhavi River near Hejamadi in a suspected case of suicide. Abhishek managed his family’s hotel business, Charan Bar & Restaurant, in Nelyadi.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm