ಬ್ರೇಕಿಂಗ್ ನ್ಯೂಸ್
13-11-25 01:44 pm HK Staffer ಕರಾವಳಿ
ಕಾಸರಗೋಡು, ನ.13: ಮಂಗಳೂರು–ಕಾಸರಗೋಡು ರಾಷ್ಟ್ರೀಯ ಹೆದ್ದಾರಿ ಮಾರ್ಗದ ಕುಂಬಳೆಯ ಆರಿಕ್ಕಾಡಿ ಟೋಲ್ ಪ್ಲಾಝಾದಲ್ಲಿ ಶುಲ್ಕ ಸಂಗ್ರಹ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಹೈಕೋರ್ಟ್ ತೀರ್ಪು ಬಂದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾಸರಗೋಡು ಜಿಲ್ಲಾಧಿಕಾರಿ ಕೆ.ಇಂಬಾಶೇಖರ್ ತಿಳಿಸಿದ್ದಾರೆ.
ನ.12ರಿಂದ ಟೋಲ್ ಸಂಗ್ರಹಿಸುವ ನಿರ್ಧಾರ ವಿರೋಧಿಸಿ ಬುಧವಾರ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಟೋಲ್ ಸಂಗ್ರಹವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಹೇಳಿದ್ದಾರೆ. ಟೋಲ್ ಸಂಗ್ರಹ ವಿರುದ್ಧ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡಲಾಗಿದ್ದು ನವೆಂಬರ್ 14 ರಂದು ವಿಚಾರಣೆಗೆ ಬರಲಿದೆ. ಅಂತಿಮ ತೀರ್ಪು ಬರುವ ವರೆಗೆ ಟೋಲ್ ಶುಲ್ಕ ಸಂಗ್ರಹಿಸದಿರಲು ಜಿಲ್ಲಾಡಳಿತ ನಿರ್ಧರಿಸಿದೆ.
ಕಾಸರಗೋಡು - ಮಂಗಳೂರು ಹೆದ್ದಾರಿ ಚತುಷ್ಪಥ ಸಲುವಾಗಿ ಕುಂಬಳೆ ಆರಿಕ್ಕಾಡಿಯಲ್ಲಿ ತಾತ್ಕಾಲಿಕವಾಗಿ ಟೋಲ್ ಪ್ಲಾಜಾವನ್ನು ನಿರ್ಮಿಸಲಾಗಿದೆ. 60 ಕಿಮೀ ನಡುವೆ ಒಂದು ಟೋಲ್ ಪ್ಲಾಜಾ ಎನ್ನುವ ನೀತಿ ಪ್ರಕಾರ ಚೆಂಗಳದಲ್ಲಿ ಟೋಲ್ ಕೇಂದ್ರ ಮಾಡಬೇಕಾಗುತ್ತದೆ. ಆದರೆ ಚೆಂಗಳದಲ್ಲಿ ಬೇರೆ ಕಂಪನಿ ಹೆದ್ದಾರಿ ಗುತ್ತಿಗೆ ಪಡೆದಿದ್ದು ಅಲ್ಲಿ ಇನ್ನೂ ಕಾಮಗಾರಿ ಪೂರ್ತಿಯಾಗಿಲ್ಲ. ಹೀಗಾಗಿ ಕಾಸರಗೋಡು- ತಲಪಾಡಿ ಮಧ್ಯೆ ಕಾಮಗಾರಿ ಪೂರ್ತಿ ಆಗಿರುವುದರಿಂದ ತಾತ್ಕಾಲಿಕ ನೆಲೆಯಲ್ಲಿ ಕುಂಬಳೆಯಲ್ಲಿ ಶುಲ್ಕ ಸಂಗ್ರಹಿಸಲು ಕಂಪನಿ ಮುಂದಾಗಿದೆ. ಕಂಪನಿಯ ಈ ಕ್ರಮಕ್ಕೆ ಹೆದ್ದಾರಿ ಪ್ರಾಧಿಕಾರವೂ ಒಪ್ಪಿಗೆ ನೀಡಿತ್ತು. ಆದರೆ ಸ್ಥಳೀಯ ಶಾಸಕರು ಮತ್ತು ಜನರು ವಿರೋಧ ವ್ಯಕ್ತಪಡಿಸಿದ್ದಾರೆ.
The process of toll collection at the newly established Kumble (Arikkadi) Toll Plaza on the Mangaluru–Kasaragod National Highway has been temporarily postponed. Kasaragod District Collector K. Imbashekar stated that a final decision will be made after the Kerala High Court delivers its verdict. Locals staged a protest on Wednesday opposing the decision to begin toll collection from November 12. Following the protest, Manjeeshwar MLA A.K.M. Ashraf announced that toll collection has been deferred temporarily. A public interest litigation (PIL) challenging the toll collection has been filed in the Kerala High Court, which is scheduled to hear the case on November 14. Until the final judgment, the district administration has decided not to permit toll collection.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm