ಬ್ರೇಕಿಂಗ್ ನ್ಯೂಸ್
14-11-25 09:03 pm Mangalore Correspondent ಕರಾವಳಿ
ಉಳ್ಳಾಲ, ನ.13 : ಮುಖ್ಯೋಪಾಧ್ಯಾಯರ ಕಚೇರಿಯೊಳಗಡೆ ವಿದ್ಯಾರ್ಥಿಗಳಿಗೆ ಕ್ಲಾಸ್.. ಪ್ರತೀ ಕೊಠಡಿಗಳಲ್ಲು ಎರಡೆರಡು ತರಗತಿಯ ವಿದ್ಯಾರ್ಥಿಗಳನ್ನ ಒಟ್ಟಿಗೆ ಕೂರಿಸಿ ಶಿಕ್ಷಕರಿಂದ ಭೋದನೆ. ಇರುವ ಕೊಠಡಿಗಳನ್ನೇ ಅಡ್ಜೆಸ್ಟ್ ಮಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಲು ಹೆಣಗಾಡುತ್ತಿರುವ ನಾಲ್ಕು ಶಿಕ್ಷಕರು.. ಉಳ್ಳಾಲ ತಾಲೂಕಿನ ಮಾಡೂರಿನ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತ್ಯೇಕ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಗೊಂಡಿದ್ದರೂ ಸಹ ಕಲಿಕೆಗೆ ಬೇಕಾದ ಕೊಠಡಿ, ಶಿಕ್ಷಕರ ಕೊರತೆಯಿಂದ ಮಕ್ಕಳು ಯಾತನೆ ಅನುಭವಿಸುತ್ತಿದ್ದಾರೆ.
1979 ರಲ್ಲಿ 1ರಿಂದ 4 ನೇ ತರಗತಿ ವರೆಗೆ ಆರಂಭಗೊಂಡ ಮಾಡೂರು ಸರಕಾರಿ ಶಾಲೆ ಪ್ರಸ್ತುತ 8ನೇ ತರಗತಿ ವರೆಗೆ ಪ್ರಾಥಮಿಕ ಶಾಲೆಯಾಗಿ ಉನ್ನತೀಕರಣಗೊಂಡಿದೆ. ಆಂಗ್ಲ ಮಾಧ್ಯಮ ಶಿಕ್ಷಣದ ಪ್ರಭಾವದಿಂದ ಈ ಶಾಲೆಗೂ ಬರುವ ಮಕ್ಕಳ ಸಂಖ್ಯೆ ಕುಂಠಿತವಾಗಿತ್ತು.ಇನ್ನೇನು ಶಾಲೆ ಮುಚ್ಚುತ್ತದೆ ಎಂಬ ಭೀತಿ ಎದುರಾದಾಗ ಶಾಲೆ ಉಳಿಸಿಕೊಳ್ಳುವ ಸಲುವಾಗಿ ಸ್ಥಳೀಯ ಪ್ರನುಖರು ಸೇರಿ ಕಳೆದ ವರ್ಷ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಿದ್ದರು.








2025ರ ಸಾಲಿನಲ್ಲಿ ಎಮ್ಆರ್ ಪಿಎಲ್ ಸಂಸ್ಥೆಯ ಸಿಎಸ್ ಆರ್ ನಿಧಿ ಮತ್ತು ಕೋಟೆಕಾರು ಪ.ಪಂ ಅನುದಾನದಿಂದ ಇದ್ದ ಕಟ್ಟಡದ ಮೇಲೆ ಶೀಟ್ ಛಾವಣಿಯ ಹಾಲ್ ಒಂದನ್ನ ನಿರ್ಮಿಸಿ ಎಲ್ ಕೆಜಿ, ಯುಕೆಜಿ ಮತ್ತು ಒಂದನೇ ದರ್ಜೆಯ ಆಂಗ್ಲ ಮಾಧ್ಯಮ ತರಗತಿಗಳನ್ನ ಆರಂಭಿಸಲಾಗಿತ್ತು. ದಾನಿಗಳ ನೆರವಿನಿಂದ ತರಗತಿ ಕೊಠಡಿಗಳಿಗೆ ಸ್ಮಾರ್ಟ್ ಕ್ಲಾಸ್, ಟಿವಿ, ಸಿಸಿ ಕ್ಯಾಮೆರಾಗಳನ್ನ ಅಳವಡಿಸಿ ಹೈಟೆಕ್ ಸ್ಪರ್ಶ ನೀಡಿದ್ದಲ್ಲದೆ, ವಿದ್ಯಾರ್ಥಿಗಳಿಗೂ ಸುಂದರವಾದ ಸಮವಸ್ತ್ರಗಳನ್ನ ವಿತರಿಸಲಾಗಿತ್ತು. ಸ್ಪೀಕರ್ ಯು.ಟಿ ಖಾದರ್ ಈ ಕಾರ್ಯಕ್ಕೆ ವೈಯಕ್ತಿಕ ಒಂದು ಲಕ್ಷ ರೂಪಾಯಿ ನೆರವು ನೀಡಿದ್ದರು. ಮೂವರು ಅತಿಥಿ ಶಿಕ್ಷಕರು ಮತ್ತು ಎರಡು ಆಯಾಗಳನ್ನ ಶಾಲಾಭಿವೃದ್ಧಿ ಸಮಿತಿಯವರೇ ನೇಮಿಸಿದ್ದರು. ಸಿಬ್ಬಂದಿಗಳ ವೇತನ ಮತ್ತು ನಿರ್ವಹಣೆಗೆ ಮಾಸಿಕ 70,000 ರೂಪಾಯಿ ಖರ್ಚು ತಗಲುತ್ತಿದ್ದು ಸ್ಥಳೀಯ ಕೋಟೆಕಾರು ಪ.ಪಂ. ಸದಸ್ಯರಾದ ಸುಜಿತ್ ಮಾಡೂರು ನೇತೃತ್ವದಲ್ಲಿ ದಾನಿಗಳಿಂದ ದೇಣಿಗೆ ಸಂಗ್ರಹಿಸಿ ನಿರ್ವಹಣೆ ನಡೆಸಲಾಗುತ್ತಿದೆ. 2026 ನೇ ಶೈಕ್ಷಣಿಕ ಸಾಲಿನಲ್ಲಿ ಆಂಗ್ಲ ಮಾಧ್ಯಮದ ಎರಡನೇ ತರಗತಿ ಆರಂಭಗೊಳ್ಳಲಿದ್ದು ವಿದ್ಯಾರ್ಥಿಗಳಿಗೆ ಕೊಠಡಿಯೇ ಇಲ್ಲದಂತಾಗಿದೆ.
ಒಂದನೇ ತರಗತಿಯಿಂದ ಎಂಟನೇ ತರಗತಿ ವರೆಗಿನ ಕನ್ನಡ ಮಾಧ್ಯಮ ತರಗತಿಗಳಲ್ಲಿ 64 ವಿದ್ಯಾರ್ಥಿಗಳಿದ್ದು, ಅವರಿಗೆ ಭೋಧಿಸಲು ಮುಖ್ಯ ಶಿಕ್ಷಕಿ ಸೇರಿ ಮೂವರು ಶಿಕ್ಷಕರು ಮತ್ತು ಓರ್ವ ಅತಿಥಿ ಶಿಕ್ಷಕರಿದ್ದಾರೆ. ಕೊಠಡಿಗಳಿಲ್ಲದೆ ಪ್ರಸ್ತುತ ಮುಖ್ಯೋಪಾಧ್ಯಾಯರ ಕಚೇರಿಯಲ್ಲೇ ಆರನೇ ತರಗತಿ ನಡೆಸಲಾಗುತ್ತಿದೆ. ಉಳಿದ ಮೂರು ಕೊಠಡಿಗಳಲ್ಲಿ ಎಲ್ಲಾ ತರಗತಿಯ ಮಕ್ಕಳನ್ನ ಒಟ್ಟುಗೂಡಿಸಿ ಪಾಠ ಹೇಳಲಾಗುತ್ತಿದೆ. ಒಂದು ಅಂತಸ್ತಿನ ಕಟ್ಟಡದಲ್ಲಿ ಕನ್ನಡ, ಆಂಗ್ಲ ಮಾಧ್ಯಮ ತರಗತಿಗಳು ಸೇರಿದಂತೆ ಅಂಗನವಾಡಿಯೂ ಕಾರ್ಯಾಚರಿಸುತ್ತಿದೆ. ಫ್ರೆಂಡ್ಸ್ ಕೊಲ್ಯ ಸಂಘಟನೆ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಪ್ರತ್ಯೇಕ ಕಟ್ಟಡ ನಿರ್ಮಾಣಗೊಳ್ಳುತ್ತಿದೆ. ಆ ಕಟ್ಟಡದ ಮೇಲೆ ಕೊಠಡಿ ನಿರ್ಮಿಸಲು ಶಾಸಕ ಖಾದರ್ ಅವರು ಐದು ಲಕ್ಷ ಅನುದಾನ ನೀಡುವುದಾಗಿ ಹೇಳಿದ್ದಾರಂತೆ.
ಎಲ್ ಕೆಜಿಗೆ ತಲಾ ಮೂವತ್ತು ವಿದ್ಯಾರ್ಥಿಗಳಂತೆ ಎಬಿಸಿಯೆಂದು ಪ್ರತ್ಯೇಕ ಮೂರು ತರಗತಿ ಆರಂಭಿಸುವಷ್ಟು ಮಕ್ಕಳಿದ್ದಾರೆ. ಮೂರು ಅಂತಸ್ತಿನ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಿದ್ದು, ಅನುದಾನಕ್ಕಾಗಿ ಶಾಸಕ ಯು.ಟಿ ಖಾದರ್ ಮತ್ತು ಶಿಕ್ಷಣ ಇಲಾಖಾಧಿಕಾರಿಗಳಿಗೆ ಮನವಿ ನೀಡಲಾಗಿದೆ. ಕಟ್ಟಡ ನಿರ್ಮಾಣಕ್ಕೆ ಕಾರ್ಪೊರೇಟ್ ಕಂಪನಿಗಳ ಸಿಎಸ್ಆರ್ ನಿಧಿ ತೆಗೆಸಿಕೊಡುವಂತೆಯೂ ಶಾಸಕರು ಮತ್ತು ಸಂಸದ ಬ್ರಿಜೇಶ್ ಚೌಟ ಅವರಲ್ಲಿ ಮನವಿ ನೀಡಲಾಗಿದೆ. ಶಿಕ್ಷಕರ ಕೊರತೆಯನ್ನೂ ತ್ವರಿತವಾಗಿ ಸರಕಾರ ನೀಗಿಸಬೇಕಿದೆಯೆಂದು ಕೋಟೆಕಾರು ಪಟ್ಟಣ ಪಂಚಾಯತ್ ಸದಸ್ಯ ಸುಜಿತ್ ಮಾಡೂರು ವಿನಂತಿಸಿದ್ದಾರೆ.
ಮಾಡೂರು ಸರಕಾರಿ ಶಾಲೆಯಲ್ಲಿ ಈ ಬಾರಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸಿದ ಬಳಿಕ ಉತ್ತಮ ಸ್ಪಂದನೆ ದೊರಕಿದ್ದು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ. ಎಂಆರ್ ಪಿಎಲ್ ಸಂಸ್ಥೆಯವರು ಈಗಾಗಲೇ ಸಿಎಸ್ ಆರ್ ನಿಧಿಯಡಿ ಶಾಲೆಗೆ ಹತ್ತು ಲಕ್ಷ ರೂಪಾಯಿ ನೀಡಿದ್ದು, ನೂತನ ಕಟ್ಟಡ ನಿರ್ಮಾಣಕ್ಕೆ ಮತ್ತೆ ಹೆಚ್ಚಿನ ಸಹಕಾರ ನೀಡುವುದಾಗಿ ಹೇಳಿದ್ದಾರೆ. ನನ್ನ ಕ್ಷೇತ್ರಾಭಿವೃದ್ಧಿ ನಿಧಿಯಿಂದ ಶಾಲಾ ಕಟ್ಟಡ ನಿರ್ಮಾಣಕ್ಕೆ ಹೆಚ್ಚಿನ ಮೊತ್ತ ವಿನಿಯೋಗಿಸುತ್ತೇನೆಂದು ವಿದಾನಸಭೆ ಸಭಾದ್ಯಕ್ಷ ಯು.ಟಿ.ಖಾದರ್ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am