ಬ್ರೇಕಿಂಗ್ ನ್ಯೂಸ್
15-11-25 02:47 pm Mangalore Correspondent ಕರಾವಳಿ
ಮಂಗಳೂರು, ನ.15 : ಮಂಗಳೂರು ಹೊರವಲಯದ ಪಣಂಬೂರು ಜಂಕ್ಷನ್ ಬಳಿ ಸರಣಿ ಅಪಘಾತ ನಡೆದಿದ್ದು ಎರಡು ಟ್ಯಾಂಕರ್ ಗಳ ನಡುವೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿ ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಮತ್ತು ಆಟೋ ಚಾಲಕ ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ.
ಕೊಣಾಜೆ ಮೊಂಟೆಪದವಿನ ನಿವಾಸಿಗಳಾದ ಅಬುಬಕ್ಕರ್ (65), ಇಬ್ರಾಹಿಂ (68) ಮತ್ತು ಉಳ್ಳಾಲದ ಆಟೋ ಚಾಲಕ ಮೊಯ್ದೀನ್ ಕುಂಞ (25) ಮೃತರು. ಇವರು ಬೀಡಿ ಕಾರ್ಮಿಕರಾಗಿದ್ದು ಉಳ್ಳಾಲದಿಂದ ಬೈಕಂಪಾಡಿಗೆ ಬೀಡಿ ಕೊಟ್ಟು ಆಟೋದಲ್ಲಿ ಮತ್ತೆ ಉಳ್ಳಾಲದತ್ತ ಮರಳುತ್ತಿದ್ದರು.



ರಾಷ್ಟ್ರೀಯ ಹೆದ್ದಾರಿಯ ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೋ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿದೆ. ಆಟೋ ರಿಕ್ಷಾ ಒಂದು ಟ್ಯಾಂಕರಿನ ಹಿಂದೆ ನಿಂತಿತ್ತು. ಈ ವೇಳೆ, ಹಿಂದಿನಿಂದ ಮತ್ತೊಂದು ಟ್ಯಾಂಕರ್ ವೇಗವಾಗಿ ಬಂದು ಡಿಕ್ಕಿಯಾಗಿದ್ದು ನಡುವೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿದೆ. ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಕುಳಿತಲ್ಲೇ ದುರಂತ ಸಾವನ್ನಪ್ಪಿದ್ದಾರೆ. ಸುರತ್ಕಲ್ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಇಂದು ನಸುಕಿನಲ್ಲಿ ಬಿಸಿ ರೋಡ್ ಬಳಿ ಭೀಕರ ಅಪಘಾತಕ್ಕೀಡಾಗಿ ಬೆಂಗಳೂರು ಮೂಲದ ಮೂವರು ಮೃತಪಟ್ಟಿದ್ದರು. ಇದೀಗ ಮತ್ತೊಂದು ದುರಂತ ಎದುರಾಗಿದೆ.
A tragic chain collision near Panambur Junction on the outskirts of Mangaluru claimed three lives after an auto-rickshaw got sandwiched between two tanker lorries.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:39 am
HK News Staffer
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am