ಬ್ರೇಕಿಂಗ್ ನ್ಯೂಸ್
15-11-25 07:42 pm Mangalore Correspondent ಕರಾವಳಿ
ಮಂಗಳೂರು, ನ.15 : ಉಳ್ಳಾಲ ಠಾಣೆ ವ್ಯಾಪ್ತಿಯ ಕುಂಪಲದಲ್ಲಿ ವ್ಯಕ್ತಿಯೊಬ್ಬರು ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಎಚ್ಚತ್ತುಕೊಂಡ ಮಂಗಳೂರು ಮಹಾನಗರ ಪಾಲಿಕೆಯು ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ತಮ್ಮ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ಮುಂದಿನ 5 ದಿನಗಳೊಳಗಾಗಿ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಆಯಾ ಭಾಗದ ಸ್ಥಳೀಯಾಡಳಿತಕ್ಕೆ ತಿಳಿಸಬೇಕು ಎಂದು ಸೂಚನೆ ನೀಡಿದೆ.
ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸಬೇಕು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಬಂಧಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬೇಕು. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಪುನಃ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದಲೇ ವಸೂಲಿ ಮಾಡಲಾಗುತ್ತದೆ.
ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ದ ಕಾನೂನು ಕ್ರಮ ವಹಿಸಲಾಗುತ್ತದೆ ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದಲ್ಲದೆ, ಬೀದಿ ನಾಯಿಗಳಿಗೆ ಆಹಾರ ನೀಡುವ ತಾಣ ಗುರುತಿಸುವುದು, ಸುಪ್ರೀಂ ಕೋರ್ಟ್ ಕಾನೂನು ಪಾಲನೆ ಕುರಿತಾಗಿ ಚರ್ಚಿಸಲು ಮಹಾನಗರ ಪಾಲಿಕೆಯಲ್ಲಿ ನ.23ರಂದು ಬೆಳಗ್ಗೆ 11 ಗಂಟೆಗೆ ಸಭೆ ಕರೆದಿದ್ದು ನಾಯಿಗಳಿಗೆ ಆಹಾರ ನೀಡುವವರು, ಪ್ರಾಣಿ ಪ್ರಿಯರು ಭಾಗವಹಿಸಲು ಪಾಲಿಕೆ ಆಯುಕ್ತರು ಕೋರಿದ್ದಾರೆ.
ಟ್ರಾನ್ಸ್ ಜೆಂಡರ್ ಸಮೀಕ್ಷೆ ; ಕಡ್ಡಾಯ ಮಾಹಿತಿ ಒದಗಿಸಲು ಸೂಚನೆ
ಲಿಂಗತ್ವ ಅಲ್ಪಸಂಖ್ಯಾತ (ಟ್ರಾನ್ಸ್ಜೆಂಡರ್) ಸಮೀಕ್ಷೆಗೆ ಈಗಾಗಲೇ ಚಾಲನೆ ನೀಡಿದ್ದು, ನವೆಂಬರ್ 21ರ ವರೆಗೆ (ರಜಾದಿನ ಹೊರತುಪಡಿಸಿ) ಬೆಳಗ್ಗೆ 9ರಿಂದ ಸಂಜೆ 6 ರ ವರೆಗೆ ಜಿಲ್ಲೆಯ ವೆನ್ಲಾಕ್ ಆಸ್ಪತ್ರೆ, ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರ, ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರ, ಪುತ್ತೂರು/ಬೆಳ್ತಂಗಡಿ/ಸುಳ್ಯ ತಾಲೂಕು ಆಸ್ಪತ್ರೆಗಳಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ.
ಟ್ರಾನ್ಸ್ಜೆಂಡರ್ಸ್ ಸಂಖ್ಯೆ, ಶೈಕ್ಷಣಿಕ ಮಟ್ಟ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಮಾಹಿತಿ ಅಗತ್ಯವಾಗಿರುವುದರಿಂದ ಸಮೀಕ್ಷೆ ಪೂರ್ಣಗೊಳ್ಳಲು ಕೇವಲ 9 ದಿನ ಬಾಕಿ ಉಳಿದಿರುವುದರಿಂದ ಸಮೀಕ್ಷೆಗೆ ಒಳಗಾಗದ ಲಿಂಗತ್ವ ಅಲ್ಪಸಂಖ್ಯಾತ (ಟ್ರಾನ್ಸ್ಜೆಂಡರ್) ಸಮುದಾಯದ ವ್ಯಕ್ತಿಗಳು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ನೊಂದಿಗೆ ಹಾಜರಾಗಿ ಮಾಹಿತಿಗಳನ್ನು ಒದಗಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ 9480155501 ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Following the death of a man in a street dog attack at Kumpala under Ullal Police Station limits, the Mangaluru City Corporation has issued strict directions to all private and government educational institutions, hospitals, sports complexes, bus stands, and railway stations.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm