ಬ್ರೇಕಿಂಗ್ ನ್ಯೂಸ್
15-11-25 10:47 pm Mangalore Correspondent ಕರಾವಳಿ
ಬೆಳ್ತಂಗಡಿ, ನ.15 : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟ ಆರೋಪದ ಕುರಿತು ಮತ್ತು 20 ವರ್ಷಗಳಿಂದ ನಡೆದಿರುವ ಅಸಹಜ ಪ್ರಕರಣದ ತನಿಖೆಗಾಗಿ ರಚನೆಗೊಂಡಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೌಜನ್ಯಾ ಪರ ಹೋರಾಟಗಾರ ಟಿ. ಜಯಂತ್ ಅವರು ಎಸ್ಐಟಿ ಅಧಿಕಾರಿಗಳ ವಿರುದ್ಧ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ಎಸ್ಐಟಿ ಅಧಿಕಾರಿಗಳಾದ ಎಸ್ಪಿ ಜಿತೇಂದ್ರ ದಯಾಮ, ಎಸ್ಪಿ ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸ್ ಸ್ಪೆಕ್ಟರ್ ಮಂಜುನಾಥ ಗೌಡ, ಸಬ್ ಇನ್ಸ್ಪೆಕ್ಟರ್ ಗುಣಪಾಲ್ ಅವರು ಉದ್ದೇಶಿತ ತನಿಖೆ ಮಾಡುವ ಬದಲು ಹೋರಾಟಗಾರರ ಮೇಲೆ ಕಿರುಕುಳ ನೀಡಿದ್ದಾರೆ, ಸೆ.5ರಿಂದ 13ರ ವರೆಗೆ ಗಿರೀಶ್ ಮಟ್ಟೆಣ್ಣವರ್, ಅಭಿಷೇಕ್, ವಿಠಲ ಗೌಡ ಮತ್ತು ತನಗೆ 8-10 ನೋಟಿಸ್ ನೀಡಿ ಠಾಣೆಗೆ ಕರೆಸಿ ವಿನಾಕಾರಣ ಕಿರುಕುಳ ನೀಡಿದ್ದಾರೆ, ಚಿನ್ನಯ್ಯನ ಮೂಲಕ ತನ್ನ ಮೇಲೆ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ್ದಾರೆ, ಸಿಸಿಟಿವಿ ಇಲ್ಲದ ಕೋಣೆಗೆ ಕರೆದೊಯ್ದು ಬೂಟು ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾರೆ, ದೊಡ್ಡವರ ವಿರುದ್ಧ ದೂರು ಕೊಟ್ಟಿದ್ದೀಯಾ, ನಿನ್ನನ್ನು ಜೈಲಿಗೆ ಕಳಿಸದೇ ಬಿಡುವುದಿಲ್ಲ ಎಂದು ಪದೇ ಪದೇ ಹೇಳಿ ಬೆದರಿಕೆ ಹಾಕಿದ್ದಾರೆ, ರಾತ್ರಿ ವರೆಗೂ ತನ್ನ ಪತ್ನಿ, ಮಕ್ಕಳನ್ನು ಕರೆಸಿ ಠಾಣೆಯಲ್ಲಿ ಕೂರಿಸಿ ಸುಳ್ಳು ಹೇಳಿಕೆ ಪಡೆದಿದ್ದಾರೆ ಇತ್ಯಾದಿ ಆರೋಪಗಳನ್ನು ಹೊರಿಸಿ ದೂರು ನೀಡಿದ್ದಾರೆ.
ವಿಚಾರಣೆ ಸಂದರ್ಭದಲ್ಲಿ ದೈಹಿಕ ಹಲ್ಲೆ, ಪ್ರಾಣ ಬೆದರಿಕೆ, ಅಪರಾಧಿಕ ಪಿತೂರಿ, ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯ ಹೇರಿದ್ದಾಗಿ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಅಲ್ಲದೆ ಕಾನೂನುಬಾಹಿರ ಕೃತ್ಯಗಳು, ಸರಕಾರಿ ಆದೇಶ ಪಾಲನೆ ಮಾಡದೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಮಾಡಿದ್ದಾರೆ.
A complaint has been filed at the Dharmasthala Police Station against officers of the Special Investigation Team (SIT), which was formed to probe the alleged burial of hundreds of bodies and the 20-year-old mysterious incidents in Dharmasthala village.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm