ಬ್ರೇಕಿಂಗ್ ನ್ಯೂಸ್
15-11-25 10:47 pm Mangalore Correspondent ಕರಾವಳಿ
ಬೆಳ್ತಂಗಡಿ, ನ.15 : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟ ಆರೋಪದ ಕುರಿತು ಮತ್ತು 20 ವರ್ಷಗಳಿಂದ ನಡೆದಿರುವ ಅಸಹಜ ಪ್ರಕರಣದ ತನಿಖೆಗಾಗಿ ರಚನೆಗೊಂಡಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೌಜನ್ಯಾ ಪರ ಹೋರಾಟಗಾರ ಟಿ. ಜಯಂತ್ ಅವರು ಎಸ್ಐಟಿ ಅಧಿಕಾರಿಗಳ ವಿರುದ್ಧ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ಎಸ್ಐಟಿ ಅಧಿಕಾರಿಗಳಾದ ಎಸ್ಪಿ ಜಿತೇಂದ್ರ ದಯಾಮ, ಎಸ್ಪಿ ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸ್ ಸ್ಪೆಕ್ಟರ್ ಮಂಜುನಾಥ ಗೌಡ, ಸಬ್ ಇನ್ಸ್ಪೆಕ್ಟರ್ ಗುಣಪಾಲ್ ಅವರು ಉದ್ದೇಶಿತ ತನಿಖೆ ಮಾಡುವ ಬದಲು ಹೋರಾಟಗಾರರ ಮೇಲೆ ಕಿರುಕುಳ ನೀಡಿದ್ದಾರೆ, ಸೆ.5ರಿಂದ 13ರ ವರೆಗೆ ಗಿರೀಶ್ ಮಟ್ಟೆಣ್ಣವರ್, ಅಭಿಷೇಕ್, ವಿಠಲ ಗೌಡ ಮತ್ತು ತನಗೆ 8-10 ನೋಟಿಸ್ ನೀಡಿ ಠಾಣೆಗೆ ಕರೆಸಿ ವಿನಾಕಾರಣ ಕಿರುಕುಳ ನೀಡಿದ್ದಾರೆ, ಚಿನ್ನಯ್ಯನ ಮೂಲಕ ತನ್ನ ಮೇಲೆ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ್ದಾರೆ, ಸಿಸಿಟಿವಿ ಇಲ್ಲದ ಕೋಣೆಗೆ ಕರೆದೊಯ್ದು ಬೂಟು ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾರೆ, ದೊಡ್ಡವರ ವಿರುದ್ಧ ದೂರು ಕೊಟ್ಟಿದ್ದೀಯಾ, ನಿನ್ನನ್ನು ಜೈಲಿಗೆ ಕಳಿಸದೇ ಬಿಡುವುದಿಲ್ಲ ಎಂದು ಪದೇ ಪದೇ ಹೇಳಿ ಬೆದರಿಕೆ ಹಾಕಿದ್ದಾರೆ, ರಾತ್ರಿ ವರೆಗೂ ತನ್ನ ಪತ್ನಿ, ಮಕ್ಕಳನ್ನು ಕರೆಸಿ ಠಾಣೆಯಲ್ಲಿ ಕೂರಿಸಿ ಸುಳ್ಳು ಹೇಳಿಕೆ ಪಡೆದಿದ್ದಾರೆ ಇತ್ಯಾದಿ ಆರೋಪಗಳನ್ನು ಹೊರಿಸಿ ದೂರು ನೀಡಿದ್ದಾರೆ.
ವಿಚಾರಣೆ ಸಂದರ್ಭದಲ್ಲಿ ದೈಹಿಕ ಹಲ್ಲೆ, ಪ್ರಾಣ ಬೆದರಿಕೆ, ಅಪರಾಧಿಕ ಪಿತೂರಿ, ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯ ಹೇರಿದ್ದಾಗಿ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ. ಅಲ್ಲದೆ ಕಾನೂನುಬಾಹಿರ ಕೃತ್ಯಗಳು, ಸರಕಾರಿ ಆದೇಶ ಪಾಲನೆ ಮಾಡದೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಮಾಡಿದ್ದಾರೆ.
A complaint has been filed at the Dharmasthala Police Station against officers of the Special Investigation Team (SIT), which was formed to probe the alleged burial of hundreds of bodies and the 20-year-old mysterious incidents in Dharmasthala village.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 09:30 pm
HK News Staffer
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am