ಬ್ರೇಕಿಂಗ್ ನ್ಯೂಸ್
11-08-20 04:59 am Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 11: ತುಂಡಾಗಿ ರಸ್ತೆಯಲ್ಲಿ ಬಿದ್ದಿದ್ದ ಹೈಟೆನ್ಶನ್ ವಿದ್ಯುತ್ ತಂತಿ ತಗಲಿ ಬೈಕ್ ಸಮೇತ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾದ ಘಟನೆ ಸುಳ್ಯ ತಾಲೂಕಿನ ಪಡ್ಪಿನಂಗಡಿಯಲ್ಲಿ ನಡೆದಿದೆ.
ಮೃತರನ್ನು ಮಂಡೆಕೋಲು ನಿವಾಸಿ ಉಮೇಶ್ ಗೌಡ (44) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಬಳಿಯ ಬಳ್ಪದಲ್ಲಿ ಆತನ ಹೆಂಡ್ತಿ ಮನೆಯಿದ್ದು ನಿನ್ನೆ ಸಂಜೆ ಬಂದಿದ್ದ ಉಮೇಶ್, ಇಂದು ನಸುಕಿನಲ್ಲಿ 4.30ಕ್ಕೆ ಮನೆಯತ್ತ ಹೊರಟಿದ್ದ. ಮನೆಯಲ್ಲಿ ಹಾಲು ಕರೆಯಲು ಇದೆಯೆಂದು ಬೈಕಿನಲ್ಲಿ ಬೇಗ ಹೊರಟಿದ್ದ ಉಮೇಶ್ ಅರ್ಧ ದಾರಿಯಲ್ಲೇ ಬಾರದ ಲೋಕಕ್ಕೆ ಹೋಗಿದ್ದಾರೆ. ನಿಂತಿಕಲ್ಲು ಬಳಿಯ ಪಡ್ಪಿನಂಗಡಿ ಎಂಬಲ್ಲಿ ರಸ್ತೆಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಮಳೆಯಿಂದ ಒದ್ದೆಯಾಗಿದ್ದ ಬೈಕಿಗೆ ಸುಲಭದಲ್ಲಿ ಪ್ರವಹಿಸಿದ್ದು ಬೆಂಕಿ ಹತ್ತಿಕೊಂಡಿದೆ. ಬೈಕ್ ಮತ್ತು ಸವಾರ ಸ್ಥಳದಲ್ಲಿಯೇ ಹೊತ್ತಿ ಉರಿದಿದ್ದು ಜೀವಂತ ದಹನವಾಗಿದ್ದಾರೆ. 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಈ ಸಮಯದಲ್ಲಿ ರಸ್ತೆಯಲ್ಲಿ ಜನರ ಸಂಚಾರ ಇಲ್ಲದೇ ಇದ್ದುದರಿಂದ 6 ಗಂಟೆ ಬಳಿಕವೇ ಘಟನೆ ಸ್ಥಳೀಯರಿಗೆ ತಿಳಿದುಬಂದಿದೆ.

ಪುತ್ತೂರು - ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ವಿದ್ಯುತ್ ತಂತಿ ಹೈವೇ ರಸ್ತೆಗೆ ಅಡ್ಡಲಾಗಿ ಬಿದ್ದಿರುವುದು ಹೇಗೆ ಎನ್ನುವುದು ತಿಳಿದುಬಂದಿಲ್ಲ. ಘಟನೆ ನೋಡಿದರೆ ಬೆಚ್ಚಿ ಬೀಳುವ ರೀತಿಯಿದೆ. ಬೈಕ್ ಮತ್ತು ಅದರಲ್ಲಿನ ಸವಾರ ಬಿದ್ದಿರುವ ಜಾಗದಲ್ಲೇ ಧಗ ಧಗನೆ ಉರಿಯುವ ದೃಶ್ಯ ಮನ ಕಲಕುವಂತಿದೆ.
Video:
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm