ಬ್ರೇಕಿಂಗ್ ನ್ಯೂಸ್
11-08-20 04:59 am Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 11: ತುಂಡಾಗಿ ರಸ್ತೆಯಲ್ಲಿ ಬಿದ್ದಿದ್ದ ಹೈಟೆನ್ಶನ್ ವಿದ್ಯುತ್ ತಂತಿ ತಗಲಿ ಬೈಕ್ ಸಮೇತ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾದ ಘಟನೆ ಸುಳ್ಯ ತಾಲೂಕಿನ ಪಡ್ಪಿನಂಗಡಿಯಲ್ಲಿ ನಡೆದಿದೆ.
ಮೃತರನ್ನು ಮಂಡೆಕೋಲು ನಿವಾಸಿ ಉಮೇಶ್ ಗೌಡ (44) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಬಳಿಯ ಬಳ್ಪದಲ್ಲಿ ಆತನ ಹೆಂಡ್ತಿ ಮನೆಯಿದ್ದು ನಿನ್ನೆ ಸಂಜೆ ಬಂದಿದ್ದ ಉಮೇಶ್, ಇಂದು ನಸುಕಿನಲ್ಲಿ 4.30ಕ್ಕೆ ಮನೆಯತ್ತ ಹೊರಟಿದ್ದ. ಮನೆಯಲ್ಲಿ ಹಾಲು ಕರೆಯಲು ಇದೆಯೆಂದು ಬೈಕಿನಲ್ಲಿ ಬೇಗ ಹೊರಟಿದ್ದ ಉಮೇಶ್ ಅರ್ಧ ದಾರಿಯಲ್ಲೇ ಬಾರದ ಲೋಕಕ್ಕೆ ಹೋಗಿದ್ದಾರೆ. ನಿಂತಿಕಲ್ಲು ಬಳಿಯ ಪಡ್ಪಿನಂಗಡಿ ಎಂಬಲ್ಲಿ ರಸ್ತೆಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಮಳೆಯಿಂದ ಒದ್ದೆಯಾಗಿದ್ದ ಬೈಕಿಗೆ ಸುಲಭದಲ್ಲಿ ಪ್ರವಹಿಸಿದ್ದು ಬೆಂಕಿ ಹತ್ತಿಕೊಂಡಿದೆ. ಬೈಕ್ ಮತ್ತು ಸವಾರ ಸ್ಥಳದಲ್ಲಿಯೇ ಹೊತ್ತಿ ಉರಿದಿದ್ದು ಜೀವಂತ ದಹನವಾಗಿದ್ದಾರೆ. 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಈ ಸಮಯದಲ್ಲಿ ರಸ್ತೆಯಲ್ಲಿ ಜನರ ಸಂಚಾರ ಇಲ್ಲದೇ ಇದ್ದುದರಿಂದ 6 ಗಂಟೆ ಬಳಿಕವೇ ಘಟನೆ ಸ್ಥಳೀಯರಿಗೆ ತಿಳಿದುಬಂದಿದೆ.

ಪುತ್ತೂರು - ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ವಿದ್ಯುತ್ ತಂತಿ ಹೈವೇ ರಸ್ತೆಗೆ ಅಡ್ಡಲಾಗಿ ಬಿದ್ದಿರುವುದು ಹೇಗೆ ಎನ್ನುವುದು ತಿಳಿದುಬಂದಿಲ್ಲ. ಘಟನೆ ನೋಡಿದರೆ ಬೆಚ್ಚಿ ಬೀಳುವ ರೀತಿಯಿದೆ. ಬೈಕ್ ಮತ್ತು ಅದರಲ್ಲಿನ ಸವಾರ ಬಿದ್ದಿರುವ ಜಾಗದಲ್ಲೇ ಧಗ ಧಗನೆ ಉರಿಯುವ ದೃಶ್ಯ ಮನ ಕಲಕುವಂತಿದೆ.
Video:
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am