ಬ್ರೇಕಿಂಗ್ ನ್ಯೂಸ್
16-11-25 10:48 pm Mangalore Correspondent ಕರಾವಳಿ
ಉಳ್ಳಾಲ, ನ.16 : ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೋರ್ವ ತಾನು ನೆಲೆಸಿದ್ದ ಪಿಜಿಯಿಂದ ನಾಪತ್ತೆಯಾಗಿದ್ದು, ಆನ್ ಲೈನ್ ಗೇಮಿಂಗ್ ಆ್ಯಪಲ್ಲಿ ಲಕ್ಷಾಂತರ ರೂಪಾಯಿ ಕಳಕೊಂಡ ಹಿನ್ನಲೆಯಲ್ಲಿ ಮನನೊಂದು ನಾಪತ್ತೆಯಾಗಿರುವ ಬಗ್ಗೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ತಿಳಿದುಬಂದಿದೆ.
ಕೇರಳ ರಾಜ್ಯದ ಪಾಲಕ್ಕಾಡ್ ನಿವಾಸಿ ರಾಬಿಯಾ- ಅಬೂಬಕರ್ ದಂಪತಿಯ ಪುತ್ರ ಮಾಲೀಕ್ ಅಬೂಬಕರ್(19)ನಾಪತ್ತೆಯಾದ ವಿದ್ಯಾರ್ಥಿ. ಮಾಲೀಕ್ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದು, ಅಲ್ಲೇ ಸಮೀಪದ ಶರೀಫ್ ಎಂಬವರ ಪಿಜಿಯಲ್ಲಿ ವಾಸವಾಗಿದ್ದ. ನ.13ರಂದು ರಾತ್ರಿ ಡಿನ್ನರ್ ಮಾಡಿ ಬರುತ್ತೇನೆಂದು ಹೇಳಿ ಪಿಜಿಯಿಂದ ಸ್ಕೂಟರಲ್ಲಿ ತೆರಳಿದ ಮಾಲೀಕ್ ಮತ್ತೆ ಹಿಂತಿರುಗದೆ ನಾಪತ್ತೆ ಆಗಿದ್ದಾನೆ. ಈ ಬಗ್ಗೆ ಮಾಲೀಕ್ ಮಾವ (ತಾಯಿಯ ತಮ್ಮ) ಫಿಸಿಯೋಥೆರಫಿ ವೈದ್ಯ ಅಝ್ಮಲ್ ಟಿ.ಎ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಮಾಲೀಕ್ ನ ಸ್ಕೂಟರ್ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ದೆಹಲಿಗೆ ತೆರಳುವ ಮಂಗಳಾ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮಾಲೀಕ್ ಆನ್ ಲೈನ್ ಗೇಮಿಂಗ್ ಆ್ಯಪಲ್ಲಿ ಮೂರು ಲಕ್ಷ ಹಣವನ್ನು ಕಳೆದುಕೊಂಡಿದ್ದು ಆ ಕಾರಣದಿಂದಲೇ ಮನನೊಂದು ನಾಪತ್ತೆಯಾಗಿದ್ದಾನೆಂದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
A Kerala-origin student studying at a private medical college in Deralakatte has gone missing from his PG accommodation. Preliminary police investigation has revealed that he had reportedly lost several lakhs of rupees through an online gaming app and was mentally disturbed before disappearing.
16-11-25 09:15 pm
HK News Desk
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 10:48 pm
Mangalore Correspondent
Speaker U.T. Khader: ಅಶಕ್ತರಿಗೆ ಶಕ್ತಿ ನೀಡುವುದೇ...
16-11-25 08:43 pm
ಅಡಿಕೆ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕ...
16-11-25 04:40 pm
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm