ಬ್ರೇಕಿಂಗ್ ನ್ಯೂಸ್
16-11-25 10:48 pm Mangalore Correspondent ಕರಾವಳಿ
ಉಳ್ಳಾಲ, ನ.16 : ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೋರ್ವ ತಾನು ನೆಲೆಸಿದ್ದ ಪಿಜಿಯಿಂದ ನಾಪತ್ತೆಯಾಗಿದ್ದು, ಆನ್ ಲೈನ್ ಗೇಮಿಂಗ್ ಆ್ಯಪಲ್ಲಿ ಲಕ್ಷಾಂತರ ರೂಪಾಯಿ ಕಳಕೊಂಡ ಹಿನ್ನಲೆಯಲ್ಲಿ ಮನನೊಂದು ನಾಪತ್ತೆಯಾಗಿರುವ ಬಗ್ಗೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ತಿಳಿದುಬಂದಿದೆ.
ಕೇರಳ ರಾಜ್ಯದ ಪಾಲಕ್ಕಾಡ್ ನಿವಾಸಿ ರಾಬಿಯಾ- ಅಬೂಬಕರ್ ದಂಪತಿಯ ಪುತ್ರ ಮಾಲೀಕ್ ಅಬೂಬಕರ್(19)ನಾಪತ್ತೆಯಾದ ವಿದ್ಯಾರ್ಥಿ. ಮಾಲೀಕ್ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದು, ಅಲ್ಲೇ ಸಮೀಪದ ಶರೀಫ್ ಎಂಬವರ ಪಿಜಿಯಲ್ಲಿ ವಾಸವಾಗಿದ್ದ. ನ.13ರಂದು ರಾತ್ರಿ ಡಿನ್ನರ್ ಮಾಡಿ ಬರುತ್ತೇನೆಂದು ಹೇಳಿ ಪಿಜಿಯಿಂದ ಸ್ಕೂಟರಲ್ಲಿ ತೆರಳಿದ ಮಾಲೀಕ್ ಮತ್ತೆ ಹಿಂತಿರುಗದೆ ನಾಪತ್ತೆ ಆಗಿದ್ದಾನೆ. ಈ ಬಗ್ಗೆ ಮಾಲೀಕ್ ಮಾವ (ತಾಯಿಯ ತಮ್ಮ) ಫಿಸಿಯೋಥೆರಫಿ ವೈದ್ಯ ಅಝ್ಮಲ್ ಟಿ.ಎ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಮಾಲೀಕ್ ನ ಸ್ಕೂಟರ್ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ದೆಹಲಿಗೆ ತೆರಳುವ ಮಂಗಳಾ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮಾಲೀಕ್ ಆನ್ ಲೈನ್ ಗೇಮಿಂಗ್ ಆ್ಯಪಲ್ಲಿ ಮೂರು ಲಕ್ಷ ಹಣವನ್ನು ಕಳೆದುಕೊಂಡಿದ್ದು ಆ ಕಾರಣದಿಂದಲೇ ಮನನೊಂದು ನಾಪತ್ತೆಯಾಗಿದ್ದಾನೆಂದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
A Kerala-origin student studying at a private medical college in Deralakatte has gone missing from his PG accommodation. Preliminary police investigation has revealed that he had reportedly lost several lakhs of rupees through an online gaming app and was mentally disturbed before disappearing.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm