ಬ್ರೇಕಿಂಗ್ ನ್ಯೂಸ್
29-12-20 01:11 pm Mangalore Correspondent ಕರಾವಳಿ
ಬಂಟ್ವಾಳ, ಡಿ.29 : ಬಾಯಿ ಹುಣ್ಣಿಗೆ ತೆಗೆದುಕೊಳ್ಳುತ್ತಿದ್ದ ಔಷಧಿಯ ಬದಲಾಗಿ ಖಾಲಿಯಾದ ಔಷಧಿ ಬಾಟಲಲ್ಲಿಟ್ಟಿದ್ದ ಕಳೆನಾಶಕ ಸೇವಿಸಿ ಗ್ರಾಪಂ ಚುನಾವಣೆ ಅಭ್ಯರ್ಥಿಯೊಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದಲ್ಲಿ ನಡೆದಿದೆ.
ಕಾವಳಮುಡೂರು ಗ್ರಾಮದ, ಅರ್ಗತ್ಯಾರು ನಿವಾಸಿ ಜಯಂತ ಪ್ರಭು(58) ಮೃತಪಟ್ಟವರು. ಡಿ.21ರಂದು ರಾತ್ರಿ 11 ಗಂಟೆಯ ವೇಳೆ ತನ್ನ ಬಾಯಿ ಹುಣ್ಣಿಗೆಂದು ತೆಗೆದುಕೊಳ್ಳುತ್ತಿದ್ದ ಔಷಧಿಯ ಬದಲಾಗಿ ಖಾಲಿಯಾಗಿದ್ದ ಔಷಧಿ ಬಾಟಲಿಯಲ್ಲಿ ಶೇಖರಿಸಿಟ್ಟಿದ್ದ ಟ್ರೈಕಾಟ್ ಎಂಬ ಹುಲ್ಲಿಗೆ ಸಿಂಪಡಣೆ ಮಾಡುವ ಕಳೆನಾಶಕ ಔಷಧಿಯನ್ನು ಸಿರಪ್ ಎಂದು ತಪ್ಪಾಗಿ ಭಾವಿಸಿ ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದರು.
ಮರುದಿನ ಗ್ರಾ.ಪಂ. ಚುನಾವಣೆಯಲ್ಲಿ ಮತದಾನ ಮಾಡಿದ್ದರಲ್ಲದೆ ಮತಗಟ್ಟೆಯಲ್ಲೂ ಒಂದಷ್ಟು ಹೊತ್ತು ಕಳೆದು, ಕೊನೆಕ್ಷಣದ ವರೆಗೂ ಮತದಾರರ ಮನವೊಲಿಸುವಲ್ಲಿಯೂ ತೊಡಗಿದ್ದರು. ಬಳಿಕ ರಾತ್ರಿ ವೇಳೆಗೆ ದಿಢೀರ್ ಅಸ್ವಸ್ಥರಾಗಿದ್ದರೆನ್ನಲಾಗಿದ್ದು ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಅವರ ಪುತ್ರ ನೀಡಿರುವ ದೂರಿನಂತೆ ಪುಂಜಾಲಕಟ್ಟೆ ಪೊಲೀಸರು ಕೇಸು ದಾಖಲಿಸಿದ್ದಾರೆ. ಜಯಂತ ಪ್ರಭು ಅವರು ಡಿ.22 ರಂದು ನಡೆದ ಗ್ರಾ.ಪಂ. ಚುನಾವಣೆಗೆ ಕಾವಳಮೂಡೂರು ಪಂಚಾಯಿತಿ ವಾರ್ಡ್ 3ರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿದ್ದರು.
Jayanth Prabhu (58) from Bantwal lost his life on Monday, December 28 after mistakenly consuming insecticide meant to be sprayed on grass. He thought it to be a medicine he was taking for mouth ulcers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am