ಬ್ರೇಕಿಂಗ್ ನ್ಯೂಸ್
29-12-20 01:11 pm Mangalore Correspondent ಕರಾವಳಿ
ಬಂಟ್ವಾಳ, ಡಿ.29 : ಬಾಯಿ ಹುಣ್ಣಿಗೆ ತೆಗೆದುಕೊಳ್ಳುತ್ತಿದ್ದ ಔಷಧಿಯ ಬದಲಾಗಿ ಖಾಲಿಯಾದ ಔಷಧಿ ಬಾಟಲಲ್ಲಿಟ್ಟಿದ್ದ ಕಳೆನಾಶಕ ಸೇವಿಸಿ ಗ್ರಾಪಂ ಚುನಾವಣೆ ಅಭ್ಯರ್ಥಿಯೊಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದಲ್ಲಿ ನಡೆದಿದೆ.
ಕಾವಳಮುಡೂರು ಗ್ರಾಮದ, ಅರ್ಗತ್ಯಾರು ನಿವಾಸಿ ಜಯಂತ ಪ್ರಭು(58) ಮೃತಪಟ್ಟವರು. ಡಿ.21ರಂದು ರಾತ್ರಿ 11 ಗಂಟೆಯ ವೇಳೆ ತನ್ನ ಬಾಯಿ ಹುಣ್ಣಿಗೆಂದು ತೆಗೆದುಕೊಳ್ಳುತ್ತಿದ್ದ ಔಷಧಿಯ ಬದಲಾಗಿ ಖಾಲಿಯಾಗಿದ್ದ ಔಷಧಿ ಬಾಟಲಿಯಲ್ಲಿ ಶೇಖರಿಸಿಟ್ಟಿದ್ದ ಟ್ರೈಕಾಟ್ ಎಂಬ ಹುಲ್ಲಿಗೆ ಸಿಂಪಡಣೆ ಮಾಡುವ ಕಳೆನಾಶಕ ಔಷಧಿಯನ್ನು ಸಿರಪ್ ಎಂದು ತಪ್ಪಾಗಿ ಭಾವಿಸಿ ಅಲ್ಪ ಪ್ರಮಾಣದಲ್ಲಿ ಸೇವಿಸಿದ್ದರು.
ಮರುದಿನ ಗ್ರಾ.ಪಂ. ಚುನಾವಣೆಯಲ್ಲಿ ಮತದಾನ ಮಾಡಿದ್ದರಲ್ಲದೆ ಮತಗಟ್ಟೆಯಲ್ಲೂ ಒಂದಷ್ಟು ಹೊತ್ತು ಕಳೆದು, ಕೊನೆಕ್ಷಣದ ವರೆಗೂ ಮತದಾರರ ಮನವೊಲಿಸುವಲ್ಲಿಯೂ ತೊಡಗಿದ್ದರು. ಬಳಿಕ ರಾತ್ರಿ ವೇಳೆಗೆ ದಿಢೀರ್ ಅಸ್ವಸ್ಥರಾಗಿದ್ದರೆನ್ನಲಾಗಿದ್ದು ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಅವರ ಪುತ್ರ ನೀಡಿರುವ ದೂರಿನಂತೆ ಪುಂಜಾಲಕಟ್ಟೆ ಪೊಲೀಸರು ಕೇಸು ದಾಖಲಿಸಿದ್ದಾರೆ. ಜಯಂತ ಪ್ರಭು ಅವರು ಡಿ.22 ರಂದು ನಡೆದ ಗ್ರಾ.ಪಂ. ಚುನಾವಣೆಗೆ ಕಾವಳಮೂಡೂರು ಪಂಚಾಯಿತಿ ವಾರ್ಡ್ 3ರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿದ್ದರು.
Jayanth Prabhu (58) from Bantwal lost his life on Monday, December 28 after mistakenly consuming insecticide meant to be sprayed on grass. He thought it to be a medicine he was taking for mouth ulcers.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm