ಬ್ರೇಕಿಂಗ್ ನ್ಯೂಸ್
22-11-25 05:46 pm Mangalore Correspondent ಕರಾವಳಿ
ಮಂಗಳೂರು, ನ.22 : ರಾಜ್ಯ ಕಾಂಗ್ರೆಸಿನಲ್ಲಿ ಸಿಎಂ ಬದಲಾವಣೆಯ ಸುದ್ದಿ ಜೋರಾಗಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಆಪ್ತ ಶಾಸಕರು ಪ್ರತ್ಯೇಕವಾಗಿ ಸಭೆ ನಡೆಸುತ್ತಿದ್ದಾರೆ. ಡಿಕೆಶಿ ಬಣ ದೆಹಲಿಯಲ್ಲಿ ಬೀಡು ಬಿಟ್ಟಿದ್ದರೆ, ಸಿದ್ದರಾಮಯ್ಯ ಬಣ ಬೆಂಗಳೂರಿನಲ್ಲೇ ಮುಂದಿನ ನಡೆ ಬಗ್ಗೆ ಚರ್ಚಿಸುತ್ತಿದ್ದಾರೆ. ಈ ನಡುವೆ, ಮಂಗಳೂರಿಗೆ ಬಂದಿರುವ ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್, ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂದು ಹೇಳಿದ್ದಾರೆ.
ಕೋಣಾಜೆ ಮಂಗಳೂರು ವಿವಿ ಆವರಣದಲ್ಲಿ ಡಿ.3ರಂದು ನಡೆಯುವ ಗಾಂಧಿ- ನಾರಾಯಣ ಗುರು ಸಂವಾದ ಶತಾಬ್ದಿ ಕಾರ್ಯಕ್ರಮದ ನಿಮಿತ್ತ ಸುದ್ದಿಗೋಷ್ಟಿ ನಡೆಸಿದ ಹರಿಪ್ರಸಾದ್ ಅವರಲ್ಲಿ ಅಧಿಕಾರ ಹಸ್ತಾಂತರ ಜಟಾಪಟಿ ಬಗ್ಗೆ ಕೇಳಿದ ಪ್ರಶ್ನೆಗೆ, ಡಿ.3ರಂದು ಸಿದ್ದರಾಮಯ್ಯ ಸಿಎಂ ಆಗಿಯೇ ಬರಲಿದ್ದು ಸಮಾವೇಶದಲ್ಲಿ ಮುಖ್ಯ ಭಾಷಣ ಮಾಡಲಿದ್ದಾರೆ. ಅದರಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.
ಅಧಿಕಾರ ಹಸ್ತಾಂತರ ಬಗ್ಗೆ ಕೇಳಿದ್ದಕ್ಕೆ, ಆ ಬಗ್ಗೆ ನಮಗೇನೂ ಗೊತ್ತಿಲ್ಲ. ಖರ್ಗೆ ಸಾಹೇಬರು ಬೆಂಗಳೂರಿನಲ್ಲಿ ಇದ್ದಾರೆ. ಅವರಲ್ಲಿ ಕೇಳಿದರೆ ಹೇಳಬಹುದು ಎಂದರು. ರಾಜಕೀಯ ವಿಚಾರ ಮಾತನಾಡಲ್ಲ. ನಾವು ನಾರಾಯಣ ಗುರುಗಳು ಮತ್ತು ಗಾಂಧೀಜಿಯವರು ಜೊತೆಗೂಡಿ ಮಾತುಕತೆ ನಡೆಸಿದ ವಿಚಾರದಲ್ಲಿ ಶತಾಬ್ದಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಪಕ್ಷ ಭೇದ ರಹಿತ ಕಾರ್ಯಕ್ರಮ ಇದಾಗಿದ್ದು ಸ್ವಾಮೀಜಿಗಳು ಸೇರಿದಂತೆ ಎಲ್ಲ ಪಕ್ಷಗಳ ಪ್ರಮುಖರು ಪಾಲ್ಗೊಳ್ಳುತ್ತಿದ್ದಾರೆ ಎಂದರು.
ಡಿಕೆ ಶಿವಕುಮಾರ್ ತಮ್ಮ ಪರವಾಗಿರುವ ಶಾಸಕರ ಜೊತೆಗೆ ಮಾತುಕತೆ ನಡೆಸುತ್ತಿದ್ದು, ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟು ಕಸರತ್ತು ನಡೆಸುತ್ತಿದ್ದಾರೆ. ಇದಕ್ಕಾಗಿ ಜೈಲಿನಲ್ಲಿರುವ ಶಾಸಕರಾದ ವೀರೇಂದ್ರ ಪಪ್ಪಿ, ವಿನಯ ಕುಲಕರ್ಣಿ ಅವರನ್ನೂ ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ ಮೂರು ಗಂಟೆ ಕಾಲ ಚರ್ಚಿಸಿದ್ದಾರೆ. ಇದೇ ವೇಳೆ, ಡಿಕೆಶಿ ಪರವಾಗಿರುವ ಕೆಲವು ಶಾಸಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದು ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ.
Senior Congress leader BK Hariprasad clarified in Mangaluru that Chief Minister Siddaramaiah will continue in his position despite ongoing speculation about a leadership change within the Karnataka Congress. He explained that Siddaramaiah will attend the Gandhi–Narayana Guru Centenary Dialogue event at Konaje on December 3 as the Chief Minister and deliver the keynote address.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am