ಬ್ರೇಕಿಂಗ್ ನ್ಯೂಸ್
24-11-25 11:13 am Mangalore Correspondent ಕರಾವಳಿ
ಮಂಗಳೂರು, ನ.24 : ಗಡಿನಾಡು, ಕನ್ನಡಿಗರೇ ಹೆಚ್ಚಿರುವ ಕಾಸರಗೋಡು ಜಿಲ್ಲೆಯಲ್ಲಿ ಮಲಯಾಳೀಕರಣದ ವ್ಯವಸ್ಥಿತ ಕಾರ್ಯತಂತ್ರ ನಡೆಯುತ್ತಿದ್ದು, ಅದನ್ನು ವಿರೋಧಿಸಿ ಡಿಸೆಂಬರ್ ಮೂರನೇ ವಾರದಲ್ಲಿ ಮಂಗಳೂರು-ಕಾಸರಗೋಡು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಸತ್ಯಾಗ್ರಹ ನಡೆಸಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಡಿಸೆಂಬರ್ 2ನೇ ವಾರದಲ್ಲಿ ಬೆಂಗಳೂರಿನಲ್ಲಿ ಕಾಸರಗೋಡು ಸಮ್ಮೇಳನ ನಡೆಯಲಿದೆ. ಅಲ್ಲಿ ಸೂಕ್ತ ನಿರ್ಣಯ ಕೈಗೊಂಡು ಮೂರನೇ ವಾರದಲ್ಲಿ ಮಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಸತ್ಯಾಗ್ರಹ ನಡೆಸಲಾಗುವುದು ಎಂದರು.
"ಕಾಸರಗೋಡನ್ನು ಕರ್ನಾಟಕ ರಾಜ್ಯಕ್ಕೆ ಸೇರಿಸುವ ನಿಟ್ಟಿನಲ್ಲಿ ಕಯ್ಯಾರ ಕಿಂಞ್ಞಣ್ಣರೈ, ಮಂಜೇಶ್ವರ ಗೋವಿಂದ ಪೈ ಬಳಿಕ ಹೋರಾಟದ ಮುಖಂಡತ್ವ ಬದಿಗೆ ಸರಿದಿದೆ. ವಿಧಾನಸಭೆ, ವಿಧಾನ ಪರಿಷತ್ ಅಥವಾ ಸಂಸತ್ ನಲ್ಲಿ ಈ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಈ ನಡುವೆ ಕಾಸರಗೋಡನ್ನು ಮಲಯಾಳೀಕರಣಗೊಳಿಸುವ ಮೂಲಕ ಕನ್ನಡ ಸಂಸ್ಕೃತಿ ನಾಶ ಪಡಿಸಲಾಗುತ್ತಿದೆ. ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಕನ್ನಡ ಶಾಲೆಗಳಲ್ಲಿ ಮಲಯಾಳಿ ಶಿಕ್ಷಕರನ್ನು ನೇಮಕ ಮಾಡಿ ದಬ್ಬಾಳಿಕೆ ಮಾಡಲಾಗುತ್ತಿದೆ. ಇದನ್ನು ಕರ್ನಾಟಕ ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು ಎಂದರು.
ಸಿದ್ದು ಕೈಬಿಟ್ಟರೆ ರಾಜ್ಯದಲ್ಲಿ ದೊಡ್ಡ ಕ್ರಾಂತಿ
ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ, ಮುಖ್ಯಮಂತ್ರಿ ಯಾರು ಬೇಕಾದರೂ ಆಗಬಹುದು. ಆದರೆ ಸಿದ್ದರಾಮಯ್ಯ ಅವರನ್ನು ಈಗ ಯಾಕೆ ಬದಲಿಸಬೇಕು ಎಂಬುದಕ್ಕೆ ಉತ್ತರ ಇಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ಸದ್ಯದ ಪರಿಸ್ಥಿತಿಯಲ್ಲಿ ಅವರಿಗೆ ತಕ್ಕುದಾದ ವ್ಯಕ್ತಿ ಕಾಂಗ್ರೆಸ್ ಸೇರಿದಂತೆ ಯಾವ ಪಕ್ಷದಲ್ಲೂ ಇಲ್ಲ. ಅವರ ಸ್ಥಾನಕ್ಕೆ ರಾಜಕೀಯವಾಗಿ ಬೇರೆ ಯಾರನ್ನೇ ತಂದರೂ ದೊಡ್ಡ ಕ್ರಾಂತಿ ಆಗಲಿದೆ. ಸಿದ್ದರಾಮಯ್ಯ ಅವರು 7 ವರ್ಷ ಮುಖ್ಯಮಂತ್ರಿಯಾಗಿ, 14 ಬಾರಿ ಬಜೆಟ್ ಮಂಡಿಸಿದ್ದಾರೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆಯುವುದು ಸಾಧುವಲ್ಲ. ಹೈಕಮಾಂಡ್ ಈ ಕಾರ್ಯಕ್ಕೆ ಕೈಹಾಕಿದರೆ ಬೆಂಕಿ ಜತೆ ಸರಸವಾಡಿದಂತೆ ಎಂದು ವಾಟಾಳ್ ನಾಗರಾಜ್ ಹೇಳಿದರು.
ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು, ಕಾರ್ಯದರ್ಶಿ ಕುಶಲ ಕುಮಾರ ಕೆ., ಕರ್ನಾಟಕ ಸಮಿತಿ ಕಾಸರಗೋಡು ಅಧ್ಯಕ್ಷ ಕೆ.ಎಂ.ಬಳ್ಳುಕ್ಕುರಾಯ, ಕಾಸರಗೋಡು ಕನ್ನಡ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಕೆ.ಗುರುಪ್ರಸಾದ್ ಕೋಟೆಕಣಿ, ಕಾಸರಗೋಡು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಜಗದೀಶ್ ಕೂಡ್ಲು, ಕನ್ನಡ ಜಾಗೃತಿ ಸಮಿತಿ ಕಾರ್ಯದರ್ಶಿ ಶ್ರೀಕಾಂತ ಕಾಸರಗೋಡು, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ಅಧ್ಯಕ್ಷ ಸುಕೇಶ್ ಎ. ಉಪಸ್ಥಿತರಿದ್ದರು.
A systematic attempt to “Malayalise” Kasaragod — a border district with a majority Kannada-speaking population — is underway, alleged Kannada Chaluvali Vatal Paksha President Vatal Nagaraj. He warned that in protest, a National Highway bandh and satyagraha will be staged between Mangaluru and Kasaragod in the third week of December.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 09:30 pm
HK News Staffer
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am