ಬ್ರೇಕಿಂಗ್ ನ್ಯೂಸ್
24-11-25 10:08 pm Mangalore Correspondent ಕರಾವಳಿ
ಮಂಗಳೂರು, ನ.24 : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟಿರುವುದಾಗಿ ಹೇಳಿ ಆರೋಪಿಸಿ ದೂರು ನೀಡಿ ಸ್ವತಃ ಬಂಧನಕ್ಕೊಳಗಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಕಡೆಗೂ ಜಾಮೀನು ಸಿಕ್ಕಿದೆ.
ಅನಾಮಿಕನಾಗಿ ಬಂದಿದ್ದ ಚಿನ್ನಯ್ಯನ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ಆತ ತೋರಿಸಿದ್ದ ಜಾಗದಲ್ಲಿ ಅಗೆದು ಎಸ್ಐಟಿ ತಂಡ ಶೋಧ ಕಾರ್ಯ ನಡೆಸಿತ್ತು. ಬಳಿಕ ಇದು ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರ ಎಂಬ ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬಂಧಿಸಿ ಜೈಲಿಗಟ್ಟಿದ್ದರು.
ಕಳೆದ ಆಗಸ್ಟ್ ನಲ್ಲಿ ಬಂಧನವಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಮೂರು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ಚಿನ್ನಯ್ಯನಿಗೆ ಷರತ್ತಿನ ಜಾಮೀನು ನೀಡಿದೆ. ದೂರುದಾರನಾಗಿ ಬಂದಿದ್ದ ಚಿನ್ನಯ್ಯನನ್ನ ಪೊಲೀಸರು ಉಲ್ಟಾ ಕೇಸು ಹಾಕಿ, ಅರೆಸ್ಟ್ ಮಾಡಿದ್ದರು. ಇದೀಗ ಮೂರು ತಿಂಗಳ ಜೈಲು ವಾಸದ ಬಳಿಕ ಜಾಮೀನು ನೀಡಲಾಗಿದೆ. ಜಾಮೀನು ಪಡೆದು ತಪ್ಪಿಸಿಕೊಳ್ಳುವಂತಿಲ್ಲ, ಯಾವುದೇ ಕ್ಷಣದಲ್ಲಿ ಕರೆದಾಗ ಹಾಜರಾಗಬೇಕು, ಒಂದು ಲಕ್ಷ ಬಾಂಡ್ ಇಡೋದು ಸೇರಿ ಒಟ್ಟು 12 ಷರತ್ತುಗಳನ್ನು ವಿಧಿಸಿ ಚಿನ್ನಯ್ಯನಿಗೆ ಜಾಮೀನು ಮಂಜೂರು ಮಾಡಿದೆ. ಚಿನ್ನಯ್ಯ ಈಗ ಶಿವಮೊಗ್ಗ ಜೈಲಿನಲ್ಲಿದ್ದಾನೆ.
Chinnayya, popularly known as the “Mask Man,” who was arrested after filing a complaint alleging that hundreds of bodies were buried in Dharmasthala village, has finally been granted bail.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm