ಬ್ರೇಕಿಂಗ್ ನ್ಯೂಸ್
25-11-25 09:53 pm Mangalore Correspondent ಕರಾವಳಿ
ಮಂಗಳೂರು, ನ.25 : ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕ ಮಂಡಳಿಯ ಆರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳು ನಿರಾಯಾಸ ಜಯ ಸಾಧಿಸಿದ್ದಾರೆ. 13 ಸ್ಥಾನಗಳಿಗೆ ಈಗಾಗಲೇ ಅವಿರೋಧ ಆಯ್ಕೆ ಮಾಡಿಕೊಂಡಿದ್ದ ಸಹಕಾರ ಭಾರತಿಗೆ ಚುನಾವಣೆಯಲ್ಲಿ ಆರು ಸ್ಥಾನಗಳಲ್ಲೂ ಜಯ ಸಿಕ್ಕಿದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ.
ಚುನಾವಣಾ ಕಣದಲ್ಲಿದ್ದ ಎಸ್.ಆರ್ ಸತೀಶ್ಚಂದ್ರ, ದಯಾನಂದ ಹೆಗ್ಡೆ, ಮಹೇಶ್ ಚೌಟ, ಪುರುಷೋತ್ತಮ ಭಟ್, ಎವಿ ತೀರ್ಥರಾಮ ಮತ್ತು ಮುರಳಿಕೃಷ್ಣ ಚಳ್ಳಂಗಾರು ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ನ.23ರಂದು ಆರು ಸ್ಥಾನಗಳಿಗೆ ಮಂಗಳೂರಿನ ಶಾರದಾ ವಿದ್ಯಾಲಯದಲ್ಲಿ ಚುನಾವಣೆ ನಡೆದಿದ್ದು, 45 ಶೇ. ಮತದಾನ ಆಗಿತ್ತು. 25ರಂದು ನಡೆದ ಮತ ಎಣಿಕೆಯಲ್ಲಿ ಸಹಕಾರ ಭಾರತಿಯಿಂದ ಸ್ಪರ್ಧಿಸಿದ್ದ ಆರು ಮಂದಿಯೂ ನಿರಾಯಾಸ ಗೆಲುವು ಸಾಧಿಸಿದ್ದಾರೆ.
ಹೆಚ್ಚು ಕಡಿಮೆ ಅವಿರೋಧ ಆಯ್ಕೆಯಿಂದಲೇ ಕ್ಯಾಂಪ್ಕೋ ಆಡಳಿತ ಹಿಡಿಯುತ್ತಿದ್ದ ಸಹಕಾರ ಭಾರತಿ 15 ವರ್ಷಗಳ ಹಿಂದೆ ಕೆಲವು ಸ್ಥಾನಗಳಿಗೆ ಚುನಾವಣೆ ಎದುರಿಸಿತ್ತು. ಆನಂತರ, ಈ ಬಾರಿ ಆರೆಸ್ಸೆಸ್ ಅಂಗಸಂಸ್ಥೆ ಭಾರತೀಯ ಕಿಸಾನ್ ಸಂಘದ ಸದಸ್ಯರೇ ಬಂಡಾಯ ನಿಂತಿದ್ದರಿಂದ ಚುನಾವಣೆ ನಡೆದಿತ್ತು. ಕಿಸಾನ್ ಸಂಘದ ಪ್ರಮುಖರು ತಮ್ಮ ಅಭ್ಯರ್ಥಿಗಳು ಕಣದಲ್ಲಿ ಇಲ್ಲ ಎಂದು ಹೇಳಿದ್ದರೂ ಸತ್ಯನಾರಾಯಣ ಎಂ.ಜಿ ಮತ್ತು ರಾಮ್ ಪ್ರತೀಕ್ ಅವರು ಕಣಕ್ಕಿಳಿದು ಕುತೂಹಲ ಮೂಡಿಸಿದ್ದರು. ಒಟ್ಟು 19 ನಿರ್ದೇಶಕ ಸ್ಥಾನಗಳಲ್ಲಿ ಕೇರಳದ 9 ಮತ್ತು ಕರ್ನಾಟಕದ ನಾಲ್ಕು ಸೇರಿದಂತೆ 13 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು.
ಸಂಸ್ಥೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತದಾರರಿದ್ದರೂ ಕೇವಲ 5576 ಮಂದಿಗೆ ಮಾತ್ರ ಮತದಾನದ ಅವಕಾಶ ಇತ್ತು. ಮತದಾನ ಅರ್ಹತೆ ಪಡೆಯಲು ಕನಿಷ್ಠ ಮೂರು ಮಹಾಸಭೆಗೆ ಹಾಜರಾಗಿರಬೇಕು ಎಂಬ ನಿಯಮದಂತೆ ಹೆಚ್ಚಿನ ಸದಸ್ಯರಿಗೆ ಮತದಾನ ಅವಕಾಶ ಇರಲಿಲ್ಲ. ಇದರ ಪೈಕಿ 2573 ಮತಗಳು ಚಲಾವಣೆಯಾಗಿದ್ದು 33 ಮತಗಳು ಅಸಿಂಧು ಆಗಿದ್ದವು. ಮುರಳಿಕೃಷ್ಣ 2261 ಮತ, ಪುರುಷೋತ್ತಮ ಭಟ್- 2249, ಮಹೇಶ್ ಚೌಟ-2216, ಎಸ್.ಆರ್ ಸತೀಶ್ಚಂದ್ರ- 2181, ದಯಾನಂದ ಹೆಗ್ಡೆ- 2163, ಎವಿ ತೀರ್ಥರಾಮ -2052 ಮತಗಳನ್ನು ಪಡೆದಿದ್ದರು. ಎಂಜಿ ಸತ್ಯನಾರಾಯಣ 620 ಮತ್ತು ರಾಮ ಪ್ರತೀಕ್ 634 ಮತ ಪಡೆದಿದ್ದಾರೆ.
Cooperative Bharati achieved a clean sweep in the Campco administrative board elections, winning all six contested seats with a comfortable margin. With 13 members already elected unopposed, all six candidates of Cooperative Bharati secured victory in the polling held at Sharada Vidyalaya, Mangaluru. The election saw 45% voter turnout, and rebel candidates from Bharatiya Kisan Sangh were defeated by a huge margin.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm