ಬ್ರೇಕಿಂಗ್ ನ್ಯೂಸ್
25-11-25 10:51 pm Udupi Correspondent ಕರಾವಳಿ
ಉಡುಪಿ, ನ.25 : ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿರುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28 ರಂದು ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆ ಸಲುವಾಗಿ ಶಿಷ್ಟಾಚಾರ ಪಾಲಿಸುವ ಉದ್ದೇಶದಿಂದ ಉಡುಪಿ ನಗರ, ಮಲ್ಪೆ ಮತ್ತು ಮಣಿಪಾಲ ಠಾಣೆ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ನಿಯಮಾನುಸಾರ ಶಿಷ್ಟಾಚಾರ ಪಾಲಿಸಬೇಕಾಗುವುದರಿಂದ ಮತ್ತು ಪ್ರಧಾನ ಮಂತ್ರಿಯವರ ಭೇಟಿ ಸಂದರ್ಭದಲ್ಲಿ ಕೇಂದ್ರ ಸಚಿವರು, ಕರ್ನಾಟಕ ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜ್ಯ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗಳು ಬರುವ ಸಾಧ್ಯತೆ ಇರುವುದರಿಂದ, ಭದ್ರತೆ ಹಾಗೂ ಸೂಕ್ತ ಶಿಷ್ಟಾಚಾರ ಪಾಲಿಸಬೇಕಾಗುತ್ತದೆ.
ಹೀಗಾಗಿ ನ.28 ರಂದು ಕಾರ್ಯಕ್ರಮ ಸುಗಮವಾಗಿ ಜರುಗಲು ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಉಡುಪಿ ಪೊಲೀಸ್ ಅಧೀಕ್ಷಕರ ಕೋರಿಕೆಯಂತೆ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆಗಳಿರುವುದರಿಂದ, ಶಾಲಾ ಮಕ್ಕಳ ಸುರಕ್ಷತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಉಡುಪಿ ನಗರ ಠಾಣೆ, ಮಲ್ಪೆ ಠಾಣೆ ಮತ್ತು ಮಣಿಪಾಲ ಠಾಣೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನ.28ರಂದು ಒಂದು ದಿನದ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿದ್ದಾರೆ. ಈಗಾಗಲೇ ಪ್ರಧಾನಿ ಆಗಮಿಸುವ ಉಡುಪಿ ನಗರ ಭಾಗದ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
Ahead of Prime Minister Narendra Modi’s visit to Udupi on November 28 for the Laksha Kantha Gita Parayana at Sri Krishna Math, the district administration has declared a holiday for Anganwadis, primary and high schools in Udupi, Manipal and Malpe. Due to heavy security arrangements and possible traffic disruption, the holiday has been announced as a precaution for student safety and smooth conduct of the event.
25-11-25 09:49 pm
HK News Desk
DK Shivakumar: ಮುಖ್ಯಮಂತ್ರಿ ಬದಲಾವಣೆ ನಾಲ್ಕು ಜನರ...
25-11-25 07:58 pm
ವಿಂಜೋ ಗೇಮಿಂಗ್ ಸಂಸ್ಥೆ ಮೇಲೆ ಇಡಿ ದಾಳಿ ; 527 ಕೋಟಿ...
25-11-25 06:58 pm
ಮಂಗಳೂರಿನ ಧನಲಕ್ಷ್ಮಿ ಪೂಜಾರಿ ಪ್ರತಿನಿಧಿಸಿದ ಮಹಿಳಾ...
25-11-25 02:18 pm
ಕಾಶ್ಮೀರಿ ಪಂಡಿತರಿಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ...
25-11-25 12:19 pm
25-11-25 04:30 pm
HK News Desk
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
ಬಾಲಿವುಡ್ ಚಿತ್ರರಂಗದ ದಂತಕಥೆ, 'ಹೀ ಮ್ಯಾನ್' ಖ್ಯಾತ...
24-11-25 03:37 pm
Explosives Gelatin Sticks, High Alert in Utta...
23-11-25 09:21 pm
ದುಬೈ ಏರ್ ಶೋನಲ್ಲಿ ಭಾರತೀಯ ತೇಜಸ್ ಯುದ್ಧ ವಿಮಾನ ಪತನ...
21-11-25 06:10 pm
25-11-25 10:51 pm
Udupi Correspondent
ಪುಸ್ತಕ ಮೇಳದಲ್ಲಿ ಸಾಹಿತಿಗಳ ಗೌರವಕ್ಕಾಗಿ 25 ಸಾವಿರದ...
25-11-25 10:07 pm
ಕ್ಯಾಂಪ್ಕೋ ಆಡಳಿತ ಮಂಡಳಿಗೆ ಚುನಾವಣೆ ; ಸಹಕಾರ ಭಾರತಿ...
25-11-25 09:53 pm
ಧರ್ಮಸ್ಥಳ ಪ್ರಕರಣ ; ಮೂರು ತಿಂಗಳ ಜೈಲುವಾಸದ ಬಳಿಕ ಚಿ...
24-11-25 10:08 pm
ಪುತ್ತೂರಿನಲ್ಲಿ ಜವಾಬ್ದಾರಿ ನೀಡಿದರೆ ಅಭ್ಯರ್ಥಿ ಯಾರಾ...
24-11-25 08:41 pm
25-11-25 05:03 pm
HK News Desk
ಆನ್ಲೈನ್ನಲ್ಲಿ ಅಧಿಕ ಲಾಭದ ಆಸೆಗೆ ಬಿದ್ದ ಹೊನ್ನಾವರ...
24-11-25 08:37 pm
Bajpe Yedapadavu Crime, Mangalore: ಎಡಪದವು ಬಳಿ...
24-11-25 08:37 pm
ಹೊಸಕೋಟೆ ಪಾಳುಬಿದ್ದ ಮನೆಯಲ್ಲಿ ಸಿಕ್ಕಿತ್ತು ಕೋಟಿ ಕೋ...
23-11-25 07:17 pm
Bangalore Atm Van Robbery, Arrest: ಮೆಗಾ ದರೋಡೆ...
22-11-25 07:55 pm