ಬ್ರೇಕಿಂಗ್ ನ್ಯೂಸ್
29-11-25 10:53 am Mangalore Correspondent ಕರಾವಳಿ
ಮಂಗಳೂರು, ನ.29 : ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಅಳವಡಿಸಿರುವ ಮೊಬೈಲ್ ಜಾಮರ್ ಯಂತ್ರ ಸುತ್ತಮುತ್ತ ಪ್ರದೇಶದ ಸಾರ್ವಜನಿಕರ ದೂರಸಂಪರ್ಕ ಸೇವೆಗಳಿಗೆ ಯಾವುದೇ ಪರಿಣಾಮ ಬೀರಬಾರದು. ಜಾಮರ್ ಸಿಗ್ನಲ್ ಜೈಲು ಆವರಣದೊಳಗೆ ಸೀಮಿತಗೊಳಿಸುವಂತೆ ಕೇಂದ್ರ ದೂರ ಸಂಪರ್ಕ ಸಚಿವಾಲಯ ರಾಜ್ಯ ಬಂದೀಖಾನೆ ಇಲಾಖೆ ಡಿಐಜಿಗೆ ಸ್ಪಷ್ಟ ನಿರ್ದೇಶನ ನೀಡಿದೆ.
ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಅಳವಡಿಸಲಾದ ಸೆಲ್ ಫೋನ್ ಜಾಮರ್ ಗಳಿಂದ ಉಂಟಾಗುವ ತೊಂದರೆ ಬಗ್ಗೆ ವಯರ್ ಲೆಸ್ ಮಾನಿಟರಿಂಗ್ ಸ್ಟೇಷನ್ (ಡಬ್ಲ್ಯು ಎಂಎಸ್), ಟಿಎಸ್ಪಿ, ಟಿಸಿಐಎಸ್ ಮತ್ತು ಕಾರಾಗೃಹ ಅಧಿಕಾರಿಗಳ ಸಹಯೋಗದೊಂದಿಗೆ ಅ.28, 29ರಂದು ಜಂಟಿ ಸರ್ವೆ ನಡೆಸಲಾಗಿತ್ತು. ಈ ಸರ್ವೆಯಲ್ಲಿ ಕಾರಾಗೃಹದ ಆವರಣದೊಳಗೆ ಎಲ್ಲ ಐಎಂಟಿ ಮತ್ತು ವೈ-ಫೈ ಬ್ಯಾಂಡ್ ಗಳು ಸುಮಾರು 70 ಡಿಬಿಎಂ(ಡೆಸಿಬಲ್ ಮಿಲಿವಾಟ್) ಶಕ್ತಿಯೊಂದಿಗೆ ಜಾಮರ್ ಸಿಗ್ನಲ್ನಿಂದ ಕಾರ್ಯ ನಿರ್ವಹಿಸುತ್ತಿರುವುದು ಕಂಡುಬಂದಿದೆ. ಜಾಮರ್ ಸಿಗ್ನಲ್ನ ಶಕ್ತಿ ಸುಮಾರು 80 ಡಿಬಿಎಂ ಇರುವ ಕಾರಣದಿಂದಾಗಿ, ಕಾರಾಗೃಹದ ಪ್ರವೇಶ ದ್ವಾರದಿಂದ ಸುಮಾರು 900 ಮೀಟರ್ ದೂರದ ವರೆಗೆ 1800-2100 ರೆಡಿಯೋ ಫ್ರೀಕ್ವೆನ್ಸಿ ಬ್ಯಾಂಡ್ ಹೊಂದಿರುತ್ತದೆ. ಹೊಸದಾಗಿ ಅಳವಡಿಸಿದ ಜಾಮರ್ನಿಂದಾಗಿ ಜೈಲಿನಿಂದ 2.5 ಕಿ.ಮೀ. ವರೆಗೂ ಪರಿಣಾಮ ಬೀರುತ್ತಿದ್ದು, ಇದರಿಂದ ಸಾರ್ವಜನಿಕರ ದೂರಸಂಪರ್ಕ ಸೇವೆಗಳಿಗೆ ತೊಂದರೆಯಾಗುತ್ತಿದೆ. ಉದ್ದೇಶಿತ ವ್ಯಾಪ್ತಿ ಪ್ರದೇಶವನ್ನು ಮೀರಿ ಜಾಮರ್ ಸಿಗ್ನಲ್ ಗಳು ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಹಾಗೂ ಇದರಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಬಗ್ಗೆ ಜಂಟಿ ಪರಿಶೀಲನೆಯಲ್ಲಿ ಕಂಡುಬಂದಿತ್ತು. ಈ ಬಗ್ಗೆ ಜಂಟಿ ಸಮಿತಿ ಕೇಂದ್ರ ಸಚಿವಾಲಯಕ್ಕೆ ವರದಿ ನೀಡಿತ್ತು.

ಸಮಸ್ಯೆ ಒಪ್ಪಿಕೊಂಡ ಕೇಂದ್ರ, ರಾಜ್ಯ ಸರ್ಕಾರಗಳು
ಮೊಬೈಲ್ ಜಾಮರ್ನಿಂದ ನಗರ ಪ್ರದೇಶದಲ್ಲಿ ನೆಟ್ವರ್ಕ್ ಸಮಸ್ಯೆ ಉದ್ಭವಿಸಿರುವುದನ್ನು ಹೈಕೋರ್ಟ್ನಲ್ಲಿ ವಿಚಾರಣೆ ವೇಳೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಒಪ್ಪಿಕೊಂಡಿವೆ. ಮಂಗಳೂರಿನ ವಕೀಲರ ಸಂಘ ಈ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ಸೂಚನೆ ಮೇರೆಗೆ ಟೆಲಿಕಾಂ ಕಂಪನಿಯ ಅಧಿಕಾರಿಗಳು ಮಂಗಳೂರು ಜೈಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ತೆರಳಿ ಜಾಮರ್ನಿಂದ ಉಂಟಾದ ನೆಟ್ವರ್ಕ್ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಿದ್ದರು. ಈ ಕುರಿತು ಹೈಕೋರ್ಟ್ ನಲ್ಲಿ ವಿಚಾರಣೆ ಮುಂದುವರಿದಿದ್ದು, ಈ ವೇಳೆ ಕೇಂದ್ರ ಹಾಗೂ ರಾಜ್ಯ ಸರಕಾರದ ಪರ ವಕೀಲರು ವಾದ ಮಂಡಿಸಿದ್ದಾರೆ.
ಕೇಂದ್ರ ಸರಕಾರದ ದೂರಸಂಪರ್ಕ ಇಲಾಖೆ ಈ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಬಂದೀಖಾನೆ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದಿದೆ. ಇನ್ನೊಂದೆಡೆ ರಾಜ್ಯ ಸರಕಾರದ ಬಂದಿಖಾನೆ ಇಲಾಖೆ ಅಧಿಕಾರಿಗಳು ಈ ಸಮಸ್ಯೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿ ಕೇಂದ್ರ ದೂರಸಂಪರ್ಕ ವಿಭಾಗಕ್ಕೆ ಪತ್ರ ಬರೆದಿದ್ದಾರೆ. ವಾದ- ಪ್ರತಿವಾದ ಆಲಿಸಿದ ನ್ಯಾಯಾಲಯ, ಜೈಲಿನಲ್ಲಿ ಜಾಮರ್ ಅಳವಡಿಕೆಯಿಂದ ಉಂಟಾದ ಸಮಸ್ಯೆ ನಿವಾರಣೆಗೆ ಕೈಗೊಂಡ ಕ್ರಮದ ಬಗ್ಗೆ ಡಿ.1ರಂದು ಅಧಿಕೃತವಾಗಿ ತಿಳಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಸೂಚಿಸಿದೆ.
The Union Ministry of Telecommunications has issued clear instructions to the Karnataka Prison Department (DIG) stating that the mobile jammers installed in Mangaluru District Jail must not interfere with public telecommunication services in the surrounding areas. The ministry ordered that the jammer signal must remain strictly within the prison premises.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am