ಬ್ರೇಕಿಂಗ್ ನ್ಯೂಸ್
03-12-25 10:35 pm Mangalore Correspondent ಕರಾವಳಿ
ಮಂಗಳೂರು, ಡಿ.3 : ಔಪಚಾರಿಕವಾಗಿ ಆಹ್ವಾನ ನೀಡದ ಹೊರತು ನವದೆಹಲಿಗೆ ತೆರಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಬುಧವಾರ ನವದೆಹಲಿಗೆ ತೆರಳಿದ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಸಿದ್ದರಾಮಯ್ಯ ಮೇಲಿನಂತೆ ಉತ್ತರ ನೀಡಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ವದಂತಿ ಹರಡಿರುವ ಮಧ್ಯೆಯೇ ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸಿದ್ದರು. ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಿದ್ದರೂ, ಡಿಸಿಎಂ ಮತ್ತೆ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ.
ಅತ್ತ ಡಿಸಿಎಂ ದೆಹಲಿಗೆ ತೆರಳಿದರೆ, ಸಿದ್ದರಾಮಯ್ಯ ಅವರು ನಾರಾಯಣ ಗುರುಗಳು ಮಹಾತ್ಮ ಗಾಂಧಿಯವರೊಂದಿಗೆ ಭೇಟಿಯಾದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ್ದರು. ಕಾರ್ಯಕ್ರಮ ಬಳಿಕ ಕಾವೇರಿ ಅತಿಥಿ ಗೃಹಕ್ಕೆ ತೆರಳುವ ಸಂದರ್ಭದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಡಿಸಿಎಂ ಯಾರದ್ದೋ ಆಹ್ವಾನದ ಮೇರೆಗೆ ಹೋಗಿರಬಹುದು. ನಾನು ಆಹ್ವಾನ ಇಲ್ಲದೆ ದೆಹಲಿಗೆ ತೆರಳಲ್ಲ ಎಂದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಜೊತೆಗೆ ಚರ್ಚೆ ನಡೆಸಿದ್ದೀರಾ ಎಂಬ ಪ್ರಶ್ನೆಗೆ, ರಾಜಕೀಯದ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ತಿಳಿಸಿದರು.
ಶಿವಕುಮಾರ್ ದೆಹಲಿಗೆ ಹೋಗುತ್ತಿದ್ದಾರೆ ಎಂದು ವರದಿಗಾರರು ಗಮನಸೆಳೆದಾಗ, 'ಅವರನ್ನು ಹೋಗಲು ಬಿಡಿ. ಯಾರಾದರೂ ಅವರಿಗೆ ಬೇಡ ಎಂದು ಹೇಳಿದ್ದಾರೆಯೇ? ಎಂದರು. ನೀವು ಹೋಗುವಿರೇ ಎಂದು ಕೇಳಿದಾಗ, 'ನನಗೆ ಆಹ್ವಾನ ಬಂದಾಗ ಮಾತ್ರ ನಾನು ಹೋಗುತ್ತೇನೆ. ನನಗೆ ಆಹ್ವಾನ ಬಂದಿಲ್ಲ, ಆದ್ದರಿಂದ ನಾನು ಹೋಗುತ್ತಿಲ್ಲ' ಎಂದರು. ದೆಹಲಿಯಲ್ಲಿ ಸಭೆ ನಡೆಸಲು ಪಕ್ಷದ ಹೈಕಮಾಂಡ್ನಿಂದ ಯಾವುದೇ ನಿರ್ದೇಶನವಿದ್ದರೆ, ಅದನ್ನು ವೇಣುಗೋಪಾಲ್ ಮೂಲಕ ತಿಳಿಸಲಾಗುವುದು ಎಂದು ಅವರು ಹೇಳಿದರು.
Karnataka Chief Minister Siddaramaiah stated that he will not travel to New Delhi without a formal invitation from the party high command. His remarks came after Deputy Chief Minister D.K. Shivakumar left for Delhi, sparking fresh curiosity amid ongoing rumours of a possible leadership change in the state.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am