ಬ್ರೇಕಿಂಗ್ ನ್ಯೂಸ್
07-12-25 10:45 pm Udupi Correspondent ಕರಾವಳಿ
ಉಡುಪಿ, ಡಿ.7 : ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಭೇಟಿ ನೀಡಿದ್ದು ಇತ್ತೀಚೆಗೆ ಚಿನ್ನ ಲೇಪಿತವಾದ ಕನಕನ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ.
ಪರ್ಯಾಯ ಪುತ್ತಿಗೆ ಮಠದ ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಲು ಉಡುಪಿಗೆ ಆಗಮಿಸಿರುವ ಪವನ್ ಕಲ್ಯಾಣ್ ಅವರನ್ನು ಪರ್ಯಾಯ ಪುತ್ತಿಗೆ ಮಠದಿಂದ ಭವ್ಯ ಸ್ವಾಗತ ಕೋರಲಾಯಿತು. ಬಳಿಕ ಅವರು ಕನಕನ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಮಾಡಿದರು. ಅನಂತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.



ಮಠದ ಮಧ್ವ ಸರೋವರದಲ್ಲಿ ತೀರ್ಥ ಪ್ರೋಕ್ಷಣೆ ಮಾಡಲಾಯಿತು. ಬಳಿಕ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯನ್ನು ಭೇಟಿಯಾಗಿ ಸುವರ್ಣ ತೀರ್ಥ ಮಂಟಪದಲ್ಲಿ ಕೂತು ಪ್ರಸಾದ ಸ್ವೀಕರಿಸಿದರು. ಬಳಿಕ ಮಠದ ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಿದರು. ಈ ವೇಳೆ ಕನ್ನಡದಲ್ಲೇ ಮಾತು ಪ್ರಾರಂಭಿಸಿದ ಪವನ್ ಕಲ್ಯಾಣ್ ಪುತ್ತಿಗೆ ಶ್ರೀಗಳ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ವೇಳೆ ಮಾತನಾಡಿದ ಪವನ್, ನಾನು ಮೆಕಾಲೆಯ ಇಂಗ್ಲಿಷ್ ನಲ್ಲಿ ಮಾತನಾಡುತ್ತೇನೆ, ಸನಾತನ ಧರ್ಮವನ್ನು ಇಂಗ್ಲಿಷ್ ಭಾಷೆ ನಾಶ ಮಾಡುತ್ತದೆ ಎಂದು ಮೆಕಾಲೆ ಹೇಳಿದ್ದ, ಆದರೆ ಸನಾತನ ಧರ್ಮದ ಶಕ್ತಿಯ ಮುಂದೆ ಅದು ಸಾಧ್ಯವಾಗಿಲ್ಲ. ವೇದ ಮತ್ತು ಗೀತೆಯಿಂದ ನಮ್ಮ ಸಂಸ್ಕೃತಿ ಉಳಿಸಿಕೊಂಡೆವು, ಸ್ವಾಮಿಗಳು ಆಹ್ವಾನ ನೀಡಿರುವುದು ಅಚ್ಚರಿ ಮೂಡಿದೆ, ನನಗೆ ಕರ್ಮ ಯೋಗದಲ್ಲಿ ನಂಬಿಕೆ ಇದೆ. ಫಲಗಳ ನಿರೀಕ್ಷೆ ನನಗೆ ಇಲ್ಲ, ನಾನು ವಿದ್ವಾಂಸರ ಕುಟುಂಬದಿಂದ ಬಂದವನಲ್ಲ. ಭಕ್ತರ ಕುಟುಂಬದಿಂದ ಬಂದವನು, ಹನುಮ ಭಕ್ತರ ಕುಟುಂಬ ನಮ್ಮದು. ಹರೇ ರಾಮ ಹರೇ ಕೃಷ್ಣ ಎಂದು ನಮಗೆ ತಂದೆ ಕಲಿಸಿದ್ದರು.
ತಾರಕ ಮಂತ್ರ ನನ್ನ ಜೀವನದಲ್ಲಿ ಪವಾಡ ಮಾಡಿದೆ. ಹರೇ ರಾಮ ಹರೇ ರಾಮ ಹರೇ ಕೃಷ್ಣ ಹರೇ ಕೃಷ್ಣ ಹರೇ ಹರೇ ಎಂದು ಹೇಳುತ್ತಾ ಬಂದ ಕುಟುಂಬ, ಮಾನಸಿಕವಾಗಿ ಕುಗ್ಗಿದಾಗಲೆಲ್ಲ ಈ ಮಂತ್ರ ನನ್ನನ್ನು ಮೇಲಕ್ಕೆ ಎತ್ತಿದೆ. ಉಡುಪಿ ವೈಕುಂಠವಾಗಿದ್ದು, ಆಧ್ಯಾತ್ಮದ ಸೆಳೆತ ಇಲ್ಲಿ ನಾನು ಕಂಡಿದ್ದೇನೆ. ಇದು ಆಧ್ಯಾತ್ಮದ ಪವರ್ ಹೌಸ್ ಎಂದರು.
Andhra Pradesh Deputy Chief Minister Pawan Kalyan visited Udupi Sri Krishna Math and offered prayers through the newly gold-plated Kanakana Kindi. Speaking at the Geetotsava event, he said the Taraka Mantra “Hare Rama Hare Krishna” uplifted him during tough times and praised Udupi as a “spiritual powerhouse.”
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am