ಬ್ರೇಕಿಂಗ್ ನ್ಯೂಸ್
09-12-25 11:55 am Udupi Correspondent ಕರಾವಳಿ
ಉಡುಪಿ, ಡಿ.9 : ಉದ್ಯಾವರದಲ್ಲಿ ಅಸ್ವಸ್ಥಗೊಂಡ ರೋಗಿಯೊಬ್ಬರಿಗೆ ರಾತ್ರಿ 7 ಗಂಟೆಯಿಂದ 9.30ರ ವರೆಗು ಯಾವುದೇ ಆಂಬ್ಯುಲೆನ್ಸ್ ಸಿಗದೆ ಬೇಸತ್ತ ಸಾಮಾಜಿಕ ಕಾರ್ಯಕರ್ತರೊಬ್ಬರು ತನ್ನ ಗೂಡ್ಸ್ ಟೆಂಪೋದಲ್ಲಿ ಮಂಚ ಇಟ್ಟು ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ.
ರೋಗಿಯ ಸಂಬಂಧಪಟ್ಟವರು 108 ಆಂಬ್ಯು ಲೆನ್ಸ್ಗೆ ಕರೆ ಮಾಡಿದಾಗ ಆಂಬ್ಯುಲೆನ್ಸ್ ಲಭ್ಯವಿರಲಿಲ್ಲ. ಖಾಸಗಿ ಆಂಬ್ಯುಲೆನ್ಸ್ಗಳು ಕೂಡ ಲಭ್ಯವಿಲ್ಲದಿರುವುದರಿಂದ ರೋಗಿಯ ಕಡೆಯವರು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಸಂಪರ್ಕಿಸಿದ್ದರು. .
ವಿಶು ಶೆಟ್ಟಿ ಕೂಡ ಖಾಸಗಿ ಆಂಬ್ಯುಲೆನ್ಸ್ ಸಂಪರ್ಕಿಸಿದ್ದು, ಆಂಬ್ಯುಲೆನ್ಸ್ ಸಿಗದೇ ಇರುವುದರಿಂದ ರೋಗಿ ತೀರಾ ಚಿಂತಾಜನಕ ಸ್ಥಿತಿಗೆ ತಲುಪಿದ್ದರು. ಬೇರೆ ದಾರಿ ಕಾಣದೇ ತನ್ನ ಗೂಡ್ಸ್ ಟೆಂಪೋಗೆ ಮಂಚ ಇಟ್ಟು ಅದರಲ್ಲಿ ರೋಗಿಯನ್ನು ಮಲಗಿಸಿ ಜಿಲ್ಲಾಸ್ಪತ್ರೆಗೆ ತಲುಪಿಸಿದ್ದಾರೆ.
ಕಳೆದೊಂದು ವರ್ಷದಿಂದ 108 ಆಂಬ್ಯುಲೆನ್ಸ್ ಸರಿಯಾಗಿ ಲಭ್ಯ ಇಲ್ಲದಿರುವುದರಿಂದ ನೂರಾರು ರೋಗಿಗಳು ಸರಿಯಾದ ಸಮಯದಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಳೆದ ಒಂದು ವರ್ಷದಿಂದ ಸರಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಈ ಘಟನೆಯಲ್ಲಿ ಎರಡೂವರೆ ಗಂಟೆ ಆಂಬ್ಯುಲೆನ್ಸ್ ಸಿಗದೆ ರೋಗಿ ಚಿಂತಾಜನಕ ಪರಿಸ್ಥಿತಿ ತಲುಪಿದ್ದು, ವಿಧಿ ಇಲ್ಲದೇ ಗೂಡ್ಸ್ ಟೆಂಪೋದಲ್ಲಿ ರೋಗಿಯನ್ನು ಕರೆದುಕೊಂಡು ಹೋಗಬೇಕಾಯಿತು. ಇನ್ನಾದರೂ ಜಿಲ್ಲಾಡಳಿತ ಈ ಬಗ್ಗೆ ತುರ್ತು ಕ್ರಮ ತೆಗೆದುಕೊಳ್ಳಬೇಕು ಎಂದು ವಿಶು ಶೆಟ್ಟಿ ಅಂಬಲಪಾಡಿ ಆಗ್ರಹಿಸಿದ್ದಾರೆ.
A shocking incident unfolded in Udyavara, Udupi, where a critically ill patient had to be transported to the hospital in a goods tempo fitted with a cot, after waiting two and a half hours for an ambulance that never arrived.
08-12-25 10:39 pm
Bangalore Correspondent
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
09-12-25 11:55 am
Udupi Correspondent
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
09-12-25 11:58 am
Mangalore Correspondent
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm