ಬ್ರೇಕಿಂಗ್ ನ್ಯೂಸ್
29-12-20 09:36 pm Udupi Reporter ಕರಾವಳಿ
ಉಡುಪಿ, ಡಿ.29: ತಾಯಿಯಿಂದ ಥಳಿತಕ್ಕೆ ಒಳಗಾದ ಎಂಟು ವರ್ಷದ ಬಾಲಕಿಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ರಕ್ಷಿಸಿರುವ ಘಟನೆ ಬ್ರಹ್ಮಾವರದ ಹೇರೂರು ಎಂಬಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮೂಲದ ಕುಟುಂಬವೊಂದು ಬ್ರಹ್ಮಾವರದ ಹೇರೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕಳೆದ 4 ದಿನಗಳಿಂದ ಕ್ಷುಲ್ಲಕ ಕಾರಣಕ್ಕೆ ತಾಯಿ ತನ್ನ 8 ವರ್ಷದ ಮಗಳಿಗೆ ಮನಬಂದಂತೆ ಮುಖ ಮತ್ತು ತೋಳುಗಳಿಗೆ ಹೊಡೆದಿರುವುದಾಗಿ ತಿಳಿದು ಬಂದಿದೆ. ಆಕೆಯ ತಂದೆ ಕೂಲಿ ಕಾರ್ಮಿಕರಾಗಿದ್ದು, ಅಪರೂಪಕ್ಕೆ ಮನೆಗೆ ಬರುತ್ತಿದ್ದರೆನ್ನಲಾಗಿದೆ.
ಬಾಲಕಿಗೆ ತಾಯಿ ಹೊಡೆಯುವುದನ್ನು ಗಮನಿಸಿದ ಪರಿಸರದ ನಿವಾಸಿ, ಪೊಲೀಸ್ ಸಿಬ್ಬಂದಿಯಾಗಿರುವ ಸಂತೋಷ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು, ತಕ್ಷಣ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲೀಲಾವತಿ, ಅಂಗನವಾಡಿ ಮೇಲ್ವಿಚಾರಕಿ ವನಿತಾ ಹೆಗ್ಡೆ ಮನೆಗೆ ಭೇಟಿ ನೀಡಿ ಬಾಲಕಿಯನ್ನು ರಕ್ಷಿಸಿ ನಿಟ್ಟೂರಿ ನಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೊನಾಲ್ಡ್ ಫುರ್ಟಾಡೋ ಗಮನಕ್ಕೆ ತಂದರು. ನಂತರ ಸಮಿತಿಯ ನಿರ್ದೇಶನದಂತೆ ಬಾಲಕಿ ಯನ್ನು ಪುನರ್ವಸತಿಗಾಗಿ ನಿಟ್ಟೂರಿನಲ್ಲಿರುವ ಬಾಲಕಿಯರ ಬಾಲಮಂದಿರಕ್ಕೆ ದಾಖಲಿಸಲಾಗಿದೆ.
Childline department has rescued an eight-year-old girl allegedly beaten by mother in Udupi.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm