ಬ್ರೇಕಿಂಗ್ ನ್ಯೂಸ್
10-12-25 11:04 pm Mangalore Correspondent ಕರಾವಳಿ
ಪುತ್ತೂರು, ಡಿ.10 : ದ್ವೇಷ ಭಾಷಣ ಪ್ರಕರಣದಲ್ಲಿ ಆರ್ ಎಸ್ ಎಸ್ ಹಿರಿಯ ಮುಖಂಡ ಪ್ರಭಾಕರ್ ಭಟ್ ಅವರಿಗೆ ನಾಲ್ಕು ತಿಂಗಳ ವಿಚಾರಣೆ ಬಳಿಕ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.
ಪುತ್ತೂರು ತಾಲ್ಲೂಕಿನ ಉಪ್ಪಳಿಗೆಯಲ್ಲಿ ಅಕ್ಟೋಬರ್ 20 ರಂದು ದೀಪಾವಳಿ ಉತ್ಸವದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಫ್ಐಆರ್ ದಾಖಲಿಸಿದ ಪೊಲೀಸರಿಗೆ ಬಂಧನ ಮಾಡದಂತೆ ಹೈಕೋರ್ಟಿನಲ್ಲಿ ತಡೆಯಾಜ್ಞೆ ತರಲಾಗಿತ್ತು.
ಆನಂತರ ನಿರೀಕ್ಷಣಾ ಜಾಮೀನು ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಅರ್ಜಿ ಸಲ್ಲಿಸಿದ್ದರು. ವಿಚಾರಣೆಯನ್ನು ಡಿ.5 ರಂದು ಪೂರ್ಣಗೊಳಿಸಿದ್ದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ನಿರೀಕ್ಷಣಾ ಜಾಮೀನು ನೀಡುವುದಕ್ಕೆ ಸರ್ಕಾರಿ ಅಭಿಯೋಜಕಿ ಜಯಂತಿ ಕೆ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಆಕ್ಷೇಪವನ್ನು ಪರಿಗಣಿಸದ ನ್ಯಾಯಾಲಯ ಪ್ರಭಾಕರ್ ಭಟ್ ಅವರ ಜಾಮೀನು ನೀಡಿದೆ. ಪ್ರಭಾಕರ್ ಭಟ್ ಅವರ ಪರವಾಗಿ ವಕೀಲ ಕೆ.ಜೆ ಮಹೇಶ್ ವಾದ ಮಂಡಿಸಿದ್ದರು.
RSS senior leader Prabhakar Bhat has been granted bail by the 5th Additional District and Sessions Court, Puttur on Wednesday, following nearly four months of legal proceedings in a hate speech case.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am