ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರಭಾಕರ ಭಟ್ ಗೆ ಜಾಮೀನು ಮಂಜೂರು 

10-12-25 11:04 pm       Mangalore Correspondent   ಕರಾವಳಿ

ದ್ವೇಷ ಭಾಷಣ ಪ್ರಕರಣದಲ್ಲಿ ಆರ್ ಎಸ್ ಎಸ್ ಹಿರಿಯ ಮುಖಂಡ ಪ್ರಭಾಕರ್ ಭಟ್ ಅವರಿಗೆ ನಾಲ್ಕು ತಿಂಗಳ ವಿಚಾರಣೆ ಬಳಿಕ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.

ಪುತ್ತೂರು, ಡಿ.10 : ದ್ವೇಷ ಭಾಷಣ ಪ್ರಕರಣದಲ್ಲಿ ಆರ್ ಎಸ್ ಎಸ್ ಹಿರಿಯ ಮುಖಂಡ ಪ್ರಭಾಕರ್ ಭಟ್ ಅವರಿಗೆ ನಾಲ್ಕು ತಿಂಗಳ ವಿಚಾರಣೆ ಬಳಿಕ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.

ಪುತ್ತೂರು ತಾಲ್ಲೂಕಿನ ಉಪ್ಪಳಿಗೆಯಲ್ಲಿ ಅಕ್ಟೋಬರ್ 20 ರಂದು ದೀಪಾವಳಿ ಉತ್ಸವದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಫ್ಐಆರ್ ದಾಖಲಿಸಿದ ಪೊಲೀಸರಿಗೆ ಬಂಧನ ಮಾಡದಂತೆ ಹೈಕೋರ್ಟಿನಲ್ಲಿ ತಡೆಯಾಜ್ಞೆ ತರಲಾಗಿತ್ತು. 

ಆನಂತರ ನಿರೀಕ್ಷಣಾ ಜಾಮೀನು  ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಅರ್ಜಿ ಸಲ್ಲಿಸಿದ್ದರು. ವಿಚಾರಣೆಯನ್ನು ಡಿ.5 ರಂದು ಪೂರ್ಣಗೊಳಿಸಿದ್ದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ನಿರೀಕ್ಷಣಾ ಜಾಮೀನು ನೀಡುವುದಕ್ಕೆ ಸರ್ಕಾರಿ ಅಭಿಯೋಜಕಿ ಜಯಂತಿ ಕೆ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಆಕ್ಷೇಪವನ್ನು ಪರಿಗಣಿಸದ ನ್ಯಾಯಾಲಯ ಪ್ರಭಾಕರ್ ಭಟ್ ಅವರ ಜಾಮೀನು ನೀಡಿದೆ. ಪ್ರಭಾಕರ್ ಭಟ್ ಅವರ ಪರವಾಗಿ ವಕೀಲ ಕೆ.ಜೆ ಮಹೇಶ್ ವಾದ ಮಂಡಿಸಿದ್ದರು.

RSS senior leader Prabhakar Bhat has been granted bail by the 5th Additional District and Sessions Court, Puttur on Wednesday, following nearly four months of legal proceedings in a hate speech case.