ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ಅನಂತ ಹೆಗಡೆ ಭಾರತೀಯನಾಗಲು ಯೋಗ್ಯನಲ್ಲ ; ಐವನ್ ಡಿಸೋಜ ಕಿಡಿ

11-08-20 07:53 am       Mangalore Reporter   ಕರಾವಳಿ

ಬಿ ಎಸ್ ಎನ್ ಎಲ್ ನಲ್ಲಿ ಇರುವವರು ದೇಶ ದ್ರೋಹಿಗಳು ಎಂದು ಹೇಳಿರುವ ಸಂಸದ ಅನಂತ್ ಕುಮಾರ್ ಹೆಗಡೆ ಭಾರತೀಯನಾಗಲು ಯೋಗ್ಯರಲ್ಲ  ಎಂದು ಮಾಜಿ ವಿಧಾನ ಪರಿಷತ್ ಅಧ್ಯಕ್ಷ  ಐವನ್ ಡಿಸೋಜಾ ಕಿಡಿಕಾರಿದ್ದಾರೆ.

ಮಂಗಳೂರು, ಆಗಸ್ಟ್ 10: ಬಿ ಎಸ್ ಎನ ಎಲ್ ನಲ್ಲಿ ಇರುವವರೆಲ್ಲ ದೇಶ ದ್ರೋಹಿಗಳು ಎಂದು ಜರಿದಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಕೆಸರೆರೆಚಾಟ ಆರಂಭವಾಗಿದೆ. ಈ ನಡುವೆ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿ ಎಸ್ ಎನ್ ಎಲ್ ನಲ್ಲಿ ಇರುವವರು ದೇಶ ದ್ರೋಹಿಗಳು ಎಂದು ಹೇಳಿರುವ ಸಂಸದ ಅನಂತ್ ಕುಮಾರ್ ಹೆಗಡೆ ಭಾರತೀಯನಾಗಲು ಯೋಗ್ಯರಲ್ಲ  ಎಂದು ಮಾಜಿ ವಿಧಾನ ಪರಿಷತ್ ಅಧ್ಯಕ್ಷ  ಐವನ್ ಡಿಸೋಜಾ ಕಿಡಿಕಾರಿದ್ದಾರೆ

ಈ ಕುರಿತು  ಟ್ವೀಟ್ ಮಾಡಿರುವ  ಐವನ್ ಡಿಸೋಜಾ,  ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಎಸ್ ಎನ್ ಎಲ್  ಸಂಸ್ಥೆಯ  ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ ಬಿ ಎಸ್ ಎನ್ ಎಲ್  ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ಲ ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ ಎಂದು ಟೀಕಿಸಿದ್ದಾರೆ.