ಬ್ರೇಕಿಂಗ್ ನ್ಯೂಸ್
30-12-20 11:07 am Udupi Correspondent ಕರಾವಳಿ
Photo credits : Google
ಉಡುಪಿ, ಡಿ.30: ರೂಪಾಂತರಿತ ಕೊರೋನ ವೈರಸ್ ಕಂಡುಬಂದ ಬ್ರಿಟನ್ನಿಂದ 36 ಮಂದಿ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಇವರೆಲ್ಲರ ಆರ್ಟಿ- ಪಿಸಿಆರ್ ಪರೀಕ್ಷೆ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನೆಗೆಟಿವ್ ಬಂದಿರುವ ಎಲ್ಲರನ್ನೂ 14 ದಿನಗಳ ಹೋಮ್ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಈ ಅವಧಿಯಲ್ಲಿ ಅವರನ್ನು ವೈದ್ಯರು ನಿಗಾದಲ್ಲಿ ಇರಿಸಲಿದ್ದಾರೆ ಎಂದು ಜಗದೀಶ್ ನುಡಿದರು.
36 ಮಂದಿಗೆ ಒಟ್ಟು 47 ಮಂದಿ ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದೆ. ಇವರೆಲ್ಲರನ್ನು ಸಹ ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರು ಸಹ ನೆಗೆಟಿವ್ ಬಂದಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಬ್ರಿಟನ್ನಿಂದ ಬಂದವರಿಂದ ಸೋಂಕು ಹರಡುವ ಅಪಾಯ ಇಲ್ಲ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲೀಗ ಕೇವಲ 66 ಮಂದಿ ಸಕ್ರಿಯ ಪ್ರಕರಣಗಳಿವೆ. ಇವುಗಳಲ್ಲಿ 40 ಮಂದಿ ಹೋಮ್ ಐಸೋಲೇಷನ್ನಲ್ಲಿದ್ದರೆ, 26 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದರು. ಮೊದಲೆಲ್ಲ ಶೇ.20ಕ್ಕಿಂತ ಅಧಿಕವಿದ್ದ ಪಾಸಿಟಿವ್ ರೇಟ್ ಈಗ ತೀರಾ ಕಡಿಮೆಯಾಗಿದೆ. ಹಿಂದಿನಂತೆ ಈಗಲೂ ಪ್ರತಿದಿನ ಸರಾಸರಿ 1500 ಮಂದಿ ಕೋವಿಡ್ ಪರೀಕ್ಷೆಗೊಳಗಾಗುತ್ತಿದ್ದಾರೆ. ಪಾಸಿಟಿವ್ ಸಂಖ್ಯೆ 10ರೊಳಗಿದೆ ಎಂದರು.
ಉಡುಪಿ ಜಿಲ್ಲೆಯಲ್ಲಿ ಪ್ರತಿ 10 ಲಕ್ಷ ಜನಸಂಖ್ಯೆಯಲ್ಲಿ 2,16,640 ಮಂದಿ ಕೋವಿಡ್ ಪರೀಕ್ಷೆಗೊಳಗಾದರೆ, ಭಾರತದಲ್ಲಿ ಈ ಸಂಖ್ಯೆ 1,24,983 ಹಾಗೂ ಕರ್ನಾಟಕದಲ್ಲಿ 2,09,000 ಮಂದಿಯ ಪರೀಕ್ಷೆ ನಡೆದಿದೆ ಎಂದು ಅವರು ಹೇಳಿದರು.
Britain to Udupi all passengers have been tested negative said Udupi Dc Jagadeesh.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm