ಬ್ರೇಕಿಂಗ್ ನ್ಯೂಸ್
11-12-25 04:21 pm Mangalore Correspondent ಕರಾವಳಿ
ಮಂಗಳೂರು, ಡಿ.11 : ದೈವಾರಾಧಾನೆಯಲ್ಲಿ ನಿರತರಾಗಿರುವ ತುಳುನಾಡಿನ ಹಲವು ಸಮುದಾಯಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ಅವರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಪರಿಶಿಷ್ಟ ಜಾತಿಗೆ ಸೇರಿದ ಬಂಧುಗಳಾದ ದೈವ ನರ್ತಕರಲ್ಲಿ ನಲಿಕೆ, ಪರವ, ಪಂಬದ, ಪಾಣಾರ ಹೀಗೆ ವಿವಿಧ ವರ್ಗಗಳಿದ್ದು, ದೈವ ಪಾತ್ರಿಗಳಲ್ಲಿ ಮುಂಡಾಲ, ಆದಿ ದ್ರಾವಿಡ, ಮುಗೇರ, ಬಾಕುಡ, ಸಮಗಾರ ಅಲ್ಲದೇ ರಾಜನ್ ದೈವ ಪಾತ್ರಿಗಳಾಗಿ ಜೈನ, ಬಂಟ, ಬಿಲ್ಲವರಿದ್ದು, ದೈವದ ಚಾಕರಿ ಮಾಡುವವರಲ್ಲಿಯೂ ಅನೇಕ ವರ್ಗಗಳಿವೆ. ಸರ್ಕಾರ ಇದನ್ನು ಬಹಳ ಸೂಕ್ಷ್ಮವಾಗಿ ಅರ್ಥೈಸಿಕೊಂಡು ಆಯಾ ಹೆಸರುಗಳನ್ನೇ ಉಲ್ಲೇಖಿಸಬೇಕು ಹೊರತು ಸಾಹಿತಿಗಳು, ಕಲಾವಿದರು, ಲಲಿತ ಕಲೆ, ಶಿಲ್ಪ ಕಲೆ, ಮೊದಲಾದ ಸಾಲಿಗೆ ಸೇರಿಸಬಾರದು. 40 ವರ್ಷಕ್ಕಿಂತ ಕಡಿಮೆ ಹಾಗೂ 58 ವರ್ಷಕ್ಕಿಂತ ಮೇಲ್ಪಟ್ಟ ಅನೇಕರು ಸಹ ದೈವಾರಾಧನೆಯಲ್ಲಿ ತೊಡಗಿಕೊಂಡಿದ್ದು ಅವರಿಗೂ ಅನುಕೂಲವಾಗುವ ಮಾನದಂಡಗಳನ್ನು ರೂಪಿಸಬೇಕು ಎಂದರು.
ನಲಿಕೆ ಸಮುದಾಯದ ಕೇವಲ ಮೂರು ಜನರಿಗೆ ಮಾಶಾಸನ ನೀಡಲಾಗುತ್ತಿದೆ ಎಂದು ಸರಕಾರ ಅಧಿವೇಶನದಲ್ಲಿ ಉತ್ತರ ನೀಡಿದ್ದು, ನಮ್ಮ ಜಿಲ್ಲೆಯಲ್ಲಿ ದೈವಾರಾದನೆ ಚಾಕರಿಯಲ್ಲಿ ತೊಡಗಿರುವವರ ಸಂಖ್ಯೆ ಬಹಳಷ್ಟಿದೆ ಎಂಬುದನ್ನು ಸರ್ಕಾರ ಗಮನಿಸಬೇಕು. ಅವರಿಗೆ ಪಿಎಫ್, ಇಎಸ್ಐ, ಸೇರಿದಂತೆ ಯಾವುದೇ ಸೌಲಭ್ಯಗಳು ಇಲ್ಲವಾಗಿದ್ದು ಅವರ ಆದಾಯ ಹೆಚ್ಚುಗೊಳಿಸುವುದು, ಅವರೆಲ್ಲರಿಗೂ ಪ್ರತಿ ತಿಂಗಳು ಎರಡೂವರೆ ಸಾವಿರ ಮಾಸಾಶನ, ಬೇರೆ ರಾಜ್ಯಗಳಿಂದ ಮದುವೆಯಾಗಿ ಬಂದಾಗ ಜಾತಿ ಪ್ರಮಾಣ ಪತ್ರ ಪಡೆಯುವಲ್ಲಿ ಆಗುತ್ತಿರುವ ತಾರತಮ್ಯ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.
MLA Vedavyas Kamath urged the state government to immediately extend support to the various communities in Tulunadu who are engaged in Daiva worship and related traditional service, stating that many of them are facing severe hardships. He raised the issue during the ongoing legislative session in Belagavi.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm