ಬ್ರೇಕಿಂಗ್ ನ್ಯೂಸ್
11-12-25 04:21 pm Mangalore Correspondent ಕರಾವಳಿ
ಮಂಗಳೂರು, ಡಿ.11 : ದೈವಾರಾಧಾನೆಯಲ್ಲಿ ನಿರತರಾಗಿರುವ ತುಳುನಾಡಿನ ಹಲವು ಸಮುದಾಯಗಳು ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ಅವರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಪರಿಶಿಷ್ಟ ಜಾತಿಗೆ ಸೇರಿದ ಬಂಧುಗಳಾದ ದೈವ ನರ್ತಕರಲ್ಲಿ ನಲಿಕೆ, ಪರವ, ಪಂಬದ, ಪಾಣಾರ ಹೀಗೆ ವಿವಿಧ ವರ್ಗಗಳಿದ್ದು, ದೈವ ಪಾತ್ರಿಗಳಲ್ಲಿ ಮುಂಡಾಲ, ಆದಿ ದ್ರಾವಿಡ, ಮುಗೇರ, ಬಾಕುಡ, ಸಮಗಾರ ಅಲ್ಲದೇ ರಾಜನ್ ದೈವ ಪಾತ್ರಿಗಳಾಗಿ ಜೈನ, ಬಂಟ, ಬಿಲ್ಲವರಿದ್ದು, ದೈವದ ಚಾಕರಿ ಮಾಡುವವರಲ್ಲಿಯೂ ಅನೇಕ ವರ್ಗಗಳಿವೆ. ಸರ್ಕಾರ ಇದನ್ನು ಬಹಳ ಸೂಕ್ಷ್ಮವಾಗಿ ಅರ್ಥೈಸಿಕೊಂಡು ಆಯಾ ಹೆಸರುಗಳನ್ನೇ ಉಲ್ಲೇಖಿಸಬೇಕು ಹೊರತು ಸಾಹಿತಿಗಳು, ಕಲಾವಿದರು, ಲಲಿತ ಕಲೆ, ಶಿಲ್ಪ ಕಲೆ, ಮೊದಲಾದ ಸಾಲಿಗೆ ಸೇರಿಸಬಾರದು. 40 ವರ್ಷಕ್ಕಿಂತ ಕಡಿಮೆ ಹಾಗೂ 58 ವರ್ಷಕ್ಕಿಂತ ಮೇಲ್ಪಟ್ಟ ಅನೇಕರು ಸಹ ದೈವಾರಾಧನೆಯಲ್ಲಿ ತೊಡಗಿಕೊಂಡಿದ್ದು ಅವರಿಗೂ ಅನುಕೂಲವಾಗುವ ಮಾನದಂಡಗಳನ್ನು ರೂಪಿಸಬೇಕು ಎಂದರು.
ನಲಿಕೆ ಸಮುದಾಯದ ಕೇವಲ ಮೂರು ಜನರಿಗೆ ಮಾಶಾಸನ ನೀಡಲಾಗುತ್ತಿದೆ ಎಂದು ಸರಕಾರ ಅಧಿವೇಶನದಲ್ಲಿ ಉತ್ತರ ನೀಡಿದ್ದು, ನಮ್ಮ ಜಿಲ್ಲೆಯಲ್ಲಿ ದೈವಾರಾದನೆ ಚಾಕರಿಯಲ್ಲಿ ತೊಡಗಿರುವವರ ಸಂಖ್ಯೆ ಬಹಳಷ್ಟಿದೆ ಎಂಬುದನ್ನು ಸರ್ಕಾರ ಗಮನಿಸಬೇಕು. ಅವರಿಗೆ ಪಿಎಫ್, ಇಎಸ್ಐ, ಸೇರಿದಂತೆ ಯಾವುದೇ ಸೌಲಭ್ಯಗಳು ಇಲ್ಲವಾಗಿದ್ದು ಅವರ ಆದಾಯ ಹೆಚ್ಚುಗೊಳಿಸುವುದು, ಅವರೆಲ್ಲರಿಗೂ ಪ್ರತಿ ತಿಂಗಳು ಎರಡೂವರೆ ಸಾವಿರ ಮಾಸಾಶನ, ಬೇರೆ ರಾಜ್ಯಗಳಿಂದ ಮದುವೆಯಾಗಿ ಬಂದಾಗ ಜಾತಿ ಪ್ರಮಾಣ ಪತ್ರ ಪಡೆಯುವಲ್ಲಿ ಆಗುತ್ತಿರುವ ತಾರತಮ್ಯ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.
MLA Vedavyas Kamath urged the state government to immediately extend support to the various communities in Tulunadu who are engaged in Daiva worship and related traditional service, stating that many of them are facing severe hardships. He raised the issue during the ongoing legislative session in Belagavi.
11-12-25 10:57 pm
Bangalore Correspondent
Kalaburgi Accident, Three Killed: ರಾಜ್ಯದಲ್ಲಿ...
11-12-25 10:47 pm
ಗಾಂಜಾಕ್ಕಾಗಿ ಕಾರವಾರ ಜೈಲಿನಲ್ಲಿ ಕೈದಿಗಳ ಗಲಾಟೆ ; ಜ...
11-12-25 08:03 pm
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 10:55 pm
Mangalore Correspondent
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am