ಬ್ರೇಕಿಂಗ್ ನ್ಯೂಸ್
14-12-25 05:48 pm Mangalore Correspondent ಕರಾವಳಿ
ಮಂಗಳೂರು, ಡಿ.14 : ಫೇಸ್ಬುಕ್ ಜಾಲತಾಣದಲ್ಲಿ "Suresh Psy" ಎಂಬ ಹೆಸರಿನಲ್ಲಿ ಖಾತೆ ಹೊಂದಿದ ಸುರೇಶ್ ಮತ್ತು ಹಲವು ಪ್ರಕರಣಗಳ ಆರೋಪಿ ಅಮೀರ್ ಸುಹೇಲ್ ಎಂಬವರು ತಲ್ವಾರ್ ಹಿಡಿದು ಹಾಡಿಗೆ ಡ್ಯಾನ್ಸ್ ಮಾಡಿದ ವಿಡಿಯೋ ಹಂಚಿಕೊಂಡಿದ್ದು ಈ ಬಗ್ಗೆ ಕಾವೂರು ಠಾಣೆ ಪೊಲೀಸರು ಕೇಸು ದಾಖಲಿಸಿ ಇಬ್ಬರನ್ನೂ ಬಂಧಿಸಿದ್ದಾರೆ.
ಮಂಗಳೂರು ಬಂದರು ನಿವಾಸಿ ಅಮೀರ್ ಸುಹೇಲ್ (28) ಮತ್ತು ಉರುಂದಾಡಿಗುಡ್ಡೆ ನಿವಾಸಿ ಸುರೇಶ (29) ಬಂಧಿತರು.
ವಿಡಿಯೋದಲ್ಲಿ VIBES ಮತ್ತು ಬಿಳಿ ಬಣ್ಣದ ಹಾರ್ಟ್ ಗುರುತಿನ ಚಿಹ್ನೆಯೊಂದಿಗೆ ಹಾಕಿದ್ದು ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿ ವರ್ತಿಸಿದ ಬಗ್ಗೆ ಕಾವೂರು ಠಾಣೆಯಲ್ಲಿ 188/2025 ಕಲಂ. 352(2), 25(19) ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಹಾಗೂ 66 ಐ.ಟಿ ಆಕ್ಟ್ ಯಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದಲ್ಲಿ ಒಳಗೊಂಡಿರುವ ಇಬ್ಬರು ಆರೋಪಿಗಳನ್ನು ಅವರು ರೀಲ್ಸ್ ಮಾಡಲು ಬಳಸಿದ ತಲ್ವಾರ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲು ಬಳಸಿದ ಮೊಬೈಲ್ ಫೋನ್ ಗಳ ಸಹಿತ ದಸ್ತಗಿರಿ ಮಾಡಲಾಗಿರುತ್ತದೆ.
ಆರೋಪಿತರನ್ನು ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ಮಾರ್ಗದರ್ಶನದಲ್ಲಿ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಘವೇಂದ್ರ ಎಂ. ಬೈಂದೂರು, ಪೊಲೀಸ್ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ ಹಾಗೂ ಕಾವೂರು ಠಾಣಾ ಸಿಬ್ಬಂದಿಗಳಾದ ಸಂಭಾಜಿ ಕದಂ, ಕೆಂಚನ ಗೌಡ, ಶರಣಪ್ಪ, ರಾಘವೇಂದ್ರ, ರಿಯಾಜ್, ರವರುಗಳೊಂದಿಗೆ ಆರೋಪಿತರನ್ನು ಪತ್ತೆಮಾಡಿ ದಸ್ತಗಿರಿ ಮಾಡಲಾಗಿರುತ್ತದೆ.
Kavoor police have arrested two youths for allegedly creating and sharing a video on social media in which they were seen dancing with a sword, an act that reportedly caused fear among the public.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm