ಬ್ರೇಕಿಂಗ್ ನ್ಯೂಸ್
16-12-25 01:23 pm Mangalore Correspondent ಕರಾವಳಿ
ಉಳ್ಳಾಲ, ಡಿ.16 : ಮನೆಯ ಹಿಂದಿನ ಆವರಣ ಗೋಡೆ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿದ ವಲಸೆ ಕಾರ್ಮಿಕನೋರ್ವ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲ್ಲಾಪು ಸಮೀಪದ ಸೇವಂತಿಗುತ್ತು ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಮಂಗಳೂರಿನ ಕೂಳೂರಿನಲ್ಲಿ ವಾಸವಾಗಿರುವ ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕು ಹನುಮಕಟ್ಟೆ ನಿವಾಸಿ ಬಾಳಪ್ಪ (35) ಮೃತ ವ್ಯಕ್ತಿ. ಸೇವಂತಿಗುತ್ತುವಿನ ಗೌತಮ್ ರಾಜ್ ಎಂಬವರ ಮನೆಯ ಹಿಂಭಾಗದಲ್ಲಿ ಕಳೆದ ಮಳೆಗಾಲದಲ್ಲಿ ಎತ್ತರ ಪ್ರದೇಶದ ಗುಡ್ಡದ ಮಣ್ಣು ಕುಸಿತವಾಗಿತ್ತು. ಗೌತಮ್ ರಾಜ್ ಅವರು ಕೆಲ ದಿನಗಳ ಹಿಂದಷ್ಟೆ ಮನೆಯ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿದ್ದರು.







ಮಂಗಳವಾರ ಜೆಸಿಬಿ ಸಹಿತ ವಲಸೆ ಕಾರ್ಮಿಕರಾದ ಬಾಳಪ್ಪ, ಹನುಮಂತ, ಭೀಮಪ್ಪ, ಶಿವು ಎಂಬವರು ತಡೆಗೋಡೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದರು. ಈ ವೇಳೆ ಮನೆಯ ಹಿಂಭಾಗದ ಎತ್ತರದ ಗುಡ್ಡದ ಮಣ್ಣು ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕರಾದ ಬಾಳಪ್ಪ, ಹನುಮಂತ, ಭೀಮಪ್ಪ ಮಣ್ಣಿನಡಿ ಸಿಲುಕಿದ್ದಾರೆ. ಹನುಮಂತ ಮತ್ತು ಭೀಮಪ್ಪ ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪಾರಾಗಿದ್ದು, ಮಣ್ಣಿನಡಿ ಬಿದ್ದು ಗಂಭೀರ ಗಾಯಗೊಂಡಿದ್ದ ಬಾಳಪ್ಪನನ್ನ ಸ್ಥಳೀಯರು ಹರಸಾಹಸ ಪಟ್ಟು ಹೊರ ತೆಗೆದರೂ ಅಷ್ಟರಲ್ಲೇ ಅವರು ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಎಸ್ಡಿಆರ್ ಎಫ್, ಅಗ್ನಿಶಾಮಕ ದಳ, ಎಸಿಪಿ ವಿಜಯಕ್ರಾಂತಿ, ಉಳ್ಳಾಲ ಪೊಲೀಸ್ ನಿರೀಕ್ಷರಾದ ವಿರೂಪಾಕ್ಷ ಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಬಾಳಪ್ಪ ಪತ್ನಿ ಮತ್ತು ಏಕೈಕ ಗಂಡು ಮಗುವನ್ನ ಅಗಲಿದ್ದಾರೆ.
A migrant labourer lost his life after being buried under soil when a mound collapsed during compound wall construction at Sevanthiguttu near Kallapu in Ullal on Tuesday morning. The deceased has been identified as Balappa (35), a native of Hanumakatte in Hungund taluk of Bagalkote district, who was residing in Kuloor, Mangaluru. The incident occurred while construction work was underway behind a house, where soil from an elevated mound suddenly gave way.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am