ಬ್ರೇಕಿಂಗ್ ನ್ಯೂಸ್
17-12-25 05:05 pm Mangalore Correspondent ಕರಾವಳಿ
ಮಂಗಳೂರು, ಡಿ.17 : ಮಂಗಳೂರು ಜೈಲಿನಲ್ಲಿ ಹಿಂದು- ಮುಸ್ಲಿಂ ಕೈದಿಗಳ ಮಧ್ಯೆ ವಾಗ್ವಾದ- ಸಂಘರ್ಷ- ಗದ್ದಲ ನಡೆದಿದ್ದು, ಸಿಸಿಬಿ ಪೊಲೀಸರು ರಾತ್ರೋರಾತ್ರಿ ದಾಳಿ ನಡೆಸಿ ಎರಡೂ ಕಡೆಯ ಗುಂಪುಗಳಿಗೆ ಥಳಿಸಿ ಚೆನ್ನಾಗಿ ಬೆಂಡೆತ್ತಿದ್ದಾರೆ.
ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಸೋಮವಾರ ಸಂಜೆ ಕೋಕಾ ಆಕ್ಟಿನಡಿ ಬಂಧಿತನಾಗಿರುವ ಭರತ್ ಕುಮ್ಡೇಲ್ ಜೊತೆಗೆ ಮಾತನಾಡಲು ಸಂಬಂಧಿಕರು ಬಂದಿದ್ದರು. ಆತ ಮಾತನಾಡಲು ಹೊರಗಡೆ ಬಂದು ಹಿಂದೆ ತೆರಳುವ ಸಂದರ್ಭದಲ್ಲಿ ಎ ಬ್ಯಾರಕ್ ನಲ್ಲಿರುವ ಕೈದಿಗಳು ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನಲಾಗಿದೆ.
ಆನಂತರ, ಈ ವಿಷಯ ತಿಳಿದ ಬಿ ಬ್ಯಾರಕಿನ ಹಿಂದು ಕೈದಿಗಳು ರಂಪ ಮಾಡಿದ್ದು ಎರಡೂ ಕಡೆಯಿಂದ ಅವಾಚ್ಯ ನಿಂದನೆ, ಜೋರು ಗದ್ದಲ ಎಬ್ಬಿಸಿದ್ದಾರೆ. ವಿಷಯ ತಿಳಿದ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ರಾತ್ರಿ ವೇಳೆ ಸಿಸಿಬಿ ತಂಡದೊಂದಿಗೆ ಜೈಲಿಗೆ ಬಂದಿದ್ದು, ಗಲಾಟೆ ನಡೆಸಿದ ಎರಡೂ ಕಡೆಯವರಿಗೆ ಲಾಠಿ ರುಚಿ ನೀಡಿದ್ದಾರೆ.
ಘಟನೆ ಬಗ್ಗೆ ಜೈಲು ಸುಪರಿಡೆಂಟ್ ಶರಣಬಸಪ್ಪ ಬರ್ಕೆ ಠಾಣೆಗೆ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ. ಎ ಬ್ಯಾರಕಿನ ಮೊಯ್ದೀನ್ ಪರಾದ್, ಸರ್ಫರಾಜ್, ಮಹಮ್ಮದ್ ಅಲ್ತಾಫ್, ಇಮ್ತಿಯಾಜ್, ಅಬ್ದುಲ್ ನೌಶಾದ್, ಮಹಮ್ಮದ್ ಸಾಹಿಲ್, ಮಹಮ್ಮದ್ ಹನೀಫ್ ಮತ್ತು ಬಿ ಬ್ಯಾರಕಿನ ಲತೀಶ್ ಜೋಗಿ, ಮಂಜುನಾಥ್, ಮುರುಗನ್, ಸಚಿನ್ ತಲಪಾಡಿ, ತುಷಾರ್ ಅಮೀನ್, ಶಬರೀಶ್, ಗುರುರಾಜ್, ಸುಮಂತ್ ಎಂಬ ಕೈದಿಗಳ ಮೇಲೆ ಕೇಸು ದಾಖಲಾಗಿದೆ.
ಇದೇ ವೇಳೆ, ಪೊಲೀಸರು ಜೈಲಿನ ಒಳಗಡೆ ತಪಾಸಣೆ ನಡೆಸಿದ್ದು ಮೂರು ಆಂಡ್ರಾಯ್ಡ್ ಮೊಬೈಲ್ ಮತ್ತು ಇನ್ನೊಂದು ಸಣ್ಣ ಕೀಪ್ಯಾಡ್ ಮೊಬೈಲ್ ಪತ್ತೆಯಾಗಿದೆ.
A tense situation erupted at Mangaluru Jail following a clash between Hindu and Muslim inmates, prompting the City Crime Branch (CCB) police to conduct an overnight crackdown inside the prison.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm