ಬ್ರೇಕಿಂಗ್ ನ್ಯೂಸ್
18-12-25 10:24 pm Mangalore Correspondent ಕರಾವಳಿ
ಮಂಗಳೂರು, ಡಿ.18 : ಬಜ್ಪೆ ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಇನ್ ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಹಾಕಿದ್ದ ಪ್ರಕರಣದಲ್ಲಿ ಆರೋಪಿ ಕಾಟಿಪಳ್ಳ ನಿವಾಸಿ ಅಭಿಷೇಕ್(23) ಎಂಬಾತನನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
mr_a_titude ಎಂಬ Instagram ಪೇಜ್ ಮೂಲಕ Hotel Nisarga ಎಂಬ ಫೋಟೋವನ್ನು ಹಾಕಿ ಅದರ ಮೇಲೆ 'ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಕೊಲೆ ಪ್ರಕರಣದ ಆರೋಪಿತರಿಗೆ ಬಜಪೆ ಪೊಲೀಸರಿಂದ ರಾಜಾತಿಥ್ಯ, ದಿನವೂ ನಿಸರ್ಗ ಹೋಟೆಲ್ ಬಜಪೆ ಇಂದ ಬೀಫ್ ಊಟವನ್ನು ನೀಡುತ್ತಿದ್ದಾರೆ... ಜನರನ್ನು ರಕ್ಷಣೆ ಮಾಡಬೇಕಾದ ಪೊಲೀಸ್ ಇಲಾಖೆ ಅಪರಾಧಿಗಳೊಟ್ಟಿಗೆ ಸೇರಿಕೊಂಡು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡುತ್ತಿದ್ದಾರೆ. ಇಲ್ಲಿ ಬೇಲಿಯೇ ಎದ್ದು ಹೊಲ ಮೇಯುತ್ತಿದೆ. ಇಲ್ಲಿ ಪೊಲೀಸ್ ನವರ ಮೇಲೆ ಇಟ್ಟಿರುವ ಭರವಸೆ ಸುಳ್ಳಾಗುತ್ತಿದೆ' ಎಂಬುದಾಗಿ ಪ್ರಚೋದನಕಾರಿ ಸಂದೇಶಗಳನ್ನು ಹರಿಯಬಿಟ್ಟಿದ್ದ ಬಗ್ಗೆ ಮೇ 08ರಂದು ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಮುಂದಿನ ತನಿಖೆಯನ್ನು ಮಂಗಳೂರು ನಗರದ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕೈಗೊಳ್ಳಲಾಗಿರುತ್ತದೆ.
ಸದ್ರಿ ಆರೋಪಿತನ ವಿರುದ್ದ ಈ ಹಿಂದೆ ಕೊಲೆ, ಕೊಲೆಯತ್ನ, ಹಲ್ಲೆ, ದರೋಡೆ ಸೇರಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ -3, ಕಾಪು ಪೊಲೀಸ್ ಠಾಣೆಯಲ್ಲಿ -1 ಪ್ರಕರಣಗಳು ದಾಖಲಾಗಿರುತ್ತದೆ.
ಪ್ರಕರಣದಲ್ಲಿ mr a titude ಎಂಬ Instagram ಪೇಜ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಡುತ್ತಿದ್ದ ಆರೋಪಿತನನ್ನು ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ತಾಂತ್ರಿಕ ಸಾಕ್ಷ್ಯಗಳ ಮುಖಾಂತರ ಪತ್ತೆ ಮಾಡಿ, ದಸ್ತಗಿರಿ ಕ್ರಮ ಜರುಗಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
Mangaluru police have arrested a 23-year-old man for allegedly posting derogatory and provocative content against Bajpe police on Instagram. The accused, identified as Abhishek, a resident of Katipalla, was taken into custody by the City Crime Branch’s CEN police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am