ಬ್ರೇಕಿಂಗ್ ನ್ಯೂಸ್
30-12-20 03:33 pm Mangalore Correspondent ಕರಾವಳಿ
ಮಂಗಳೂರು, ಡಿ.30: ಅಂಗಡಿ ಮುಂದೆ ಬೈಕ್ ನಿಲ್ಲಿಸಿದ ಕಾರಣಕ್ಕಾಗಿ ಬೈಕ್ ಸವಾರನ ಮೇಲೆ ವ್ಯಾಪಾರಿಗಳಿಬ್ಬರು ಸೇರಿ ದೊಣ್ಣೆಯಲ್ಲಿ ಹಲ್ಲೆ ನಡೆಸಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಬೈಕ್ ಪಾರ್ಕ್ ಮಾಡಿದ ವಿಚಾರದಲ್ಲಿ ವಾಗ್ವಾದ ನಡೆದಿದೆ. ಬೈಕ್ ಸವಾರ ಯಾಕೆ ಇಲ್ಲಿ ಪಾರ್ಕ್ ಮಾಡಬಾರದಾ.. ಇದು ಸರಕಾರಿ ಜಾಗ. ನಿಮ್ಮ ಖಾಸಗಿ ಜಾಗ ಅಲ್ಲ. ರಸ್ತೆ ಬದಿಯ ಸರಕಾರಿ ಜಾಗದಲ್ಲಿ ಪಾರ್ಕ್ ಮಾಡಿದರೆ ನಿಮ್ಮ ಅಡ್ಡಿಯೇನು ಎಂದು ಪ್ರಶ್ನೆ ಮಾಡಿದ್ದಾರೆ. ಇದರಿಂದ ಕ್ರುದ್ಧರಾದ ಅಂಗಡಿಯ ಮಾಲಕರಿಬ್ವರು ಉದ್ದಗಿನ ಬೆತ್ತದಲ್ಲಿ ಹಲ್ಲೆ ನಡೆಸಿದ್ದಾರೆ. ಹೀಗೆ ಹಲ್ಲೆ ನಡೆಸಿದ್ದನ್ನು ಸಾರ್ವಜನಿಕರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ]


ಘಟನೆ ನಡೆಯುತ್ತಿದ್ದಂತೆ ಜನ ಸೇರಿದ್ದು ಸಾರ್ವಜನಿಕರು ಅಂಗಡಿ ಮುಂದೆ ಜಮಾಯಿಸಿ ಹಲ್ಲೆ ನಡೆಸಿದ್ದ ವ್ಯಾಪಾರಿಗಳ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ಜಾಗದಲ್ಲಿ ಅನೇಕ ಬಾರಿ ಪಾರ್ಕ್ ವಿಚಾರದಲ್ಲಿ ಹಲ್ಲೆ ಮಾಡಲು ಮುಂದಾಗಿರುವ ಘಟನೆಗಳು ಈ ಹಿಂದೆಯೂ ನಡೆದಿದ್ದು ಬೈಕ್ ಚಾಲಕರಿಗೆ ಹಲ್ಲೆ, ನಿಲ್ಲಿಸಿದ್ದ ಬೈಕ್ ಗಳ ಚಕ್ರಕ್ಕೆ ಹಾನಿಗೊಳಿಸುವುದು, ಹಲ್ಲೆಯತ್ನ ಘಟನೆಗಳು ನಡೆದಿದೆ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಜಾಗ ಸರ್ಕಾರದಲ್ಲ. ನಮ್ಮ ಖಾಸಗಿ ಜಾಗ ಎಂದು ವ್ಯಾಪಾರಿಗಳು ವಾದಿಸುತ್ತಿದ್ದು ಹೊರಗಿನ ಯಾವುದೇ ವ್ಯಕ್ತಿಗಳು ಬಂದು ಪಾರ್ಕ್ ಮಾಡಿದ್ರೂ ತಕರಾರು ಸಾಮಾನ್ಯ ಅನ್ನುವಂತಾಗಿದೆ. ಘಟನೆ ಹಿನ್ನೆಲೆಯಲ್ಲಿ ಭಾರೀ ಜನ ಸೇರಿದ್ದು ಮೂಲ್ಕಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ದೂರು ದಾಖಲಿಸಿದ್ದಾರೆ.
ಪೆಟ್ಟು ತಿಂದ ವ್ಯಕ್ತಿ ಬಿಜೆಪಿ ಕಾರ್ಯಕರ್ತ ಎನ್ನಲಾಗುತ್ತಿದ್ದು ಮೂಲ್ಕಿ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
Video:
A BJP Member was assaulted by Duo for Parking Bike in front of the shop in Kinnigoli, Mangalore. Mulki police have registered the case. A video of this has gone viral on social media.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm