ಬ್ರೇಕಿಂಗ್ ನ್ಯೂಸ್
23-12-25 10:51 pm Mangalore Correspondent ಕರಾವಳಿ
ಮಂಗಳೂರು, ಡಿ23: ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿಪಾರ್ಕ್, ಲೇಡಿಹಿಲ್ ಸೇರಿದಂತೆ ಬಹುತೇಕ ಭಾಗದಲ್ಲಿ ಕಾಂಗ್ರೆಸ್ ನಾಯಕರ ಸೂಚನೆಯಂತೆ ಕೆಲವು ಕಡೆಗಳಲ್ಲಿ ಮಾತ್ರ ಗೂಡಂಗಡಿ ತೆರವು ಮಾಡಿದ್ದಾರೆ. ಹಾಗೆಯೇ, ಕಾಂಗ್ರೆಸ್ ನಾಯಕರು ಫ್ಲೆಕ್ಸ್ ಹಾಕಿದರೆ ತೆಗೆಯಲ್ಲ. ಇತರೇ ದೇವಸ್ಥಾನ ಕಮಿಟಿಯವರು, ಬಿಜೆಪಿಗರ ಫ್ಲೆಕ್ಸ್ ತೆರವು ಮಾಡುತ್ತಿದ್ದಾರೆ. ಪಾಲಿಕೆ ಅಧಿಕಾರಿಗಳು ಒಂದು ಕಣ್ಣಿಗೆ ಸುಣ್ಣ, ಇನ್ನೊಂದಕ್ಕೆ ಬೆಣ್ಣೆ ಅನ್ನುವ ರೀತಿ ಮಾಡುತ್ತಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಟಿ ನಡೆಸಿದ ಅವರು, ಫ್ಲೆಕ್ಸ್, ಗೂಡಂಗಡಿ ತೆರವು ಮಾಡವುದಿದ್ದರೆ ಎಲ್ಲವನ್ನೂ ತೆರವುಗೊಳಿಸಿ. ಅದು ಬಿಟ್ಟು ದುಡಿದು ತಿನ್ನುವ ಬಡ ವ್ಯಾಪಾರಿಗಳ ಮಧ್ಯೆಯೂ ಯಾಕೆ ತಾರತಮ್ಯ? ರಾಜ್ಯ ಕಾಂಗ್ರೆಸ್ ಸರ್ಕಾರದ ಮೂಲಕ ಆಡಳಿತ ನಡೆಯುತ್ತಿದ್ದು ಪಕ್ಷದ ನಾಯಕರ ಅಣತಿಯ ವರ್ತಿಸುತ್ತಿದ್ದಾರೆ. ಮೊನ್ನೆ ಮುಖ್ಯಮಂತ್ರಿ ಬಂದಾಗ ಎಲ್ಲ ಕಡೆ ಫ್ಲೆಕ್ಸ್ ರಾರಾಜಿಸಿದ್ದವು. ಪಾಲಿಕೆ ನಿಷೇಧ ವಿಧಿಸಿದ ಬಳಿಕ ಬಿಜೆಪಿ ವತಿಯಿಂದ ಫ್ಲೆಕ್ಸ್ ಹಾಕಿಯೇ ಇಲ್ಲ. ಈಗ ಉರ್ವ ದೇವಸ್ಥಾನದಲ್ಲಿ ದೊಡ್ಡ ಕಾರ್ಯಕ್ರಮ ಆಗುತ್ತಿದ್ದು ಅವರು ಹಾಕಿದ್ದ ಫ್ಲೆಕ್ಸ್ ಕಿತ್ತುಕೊಂಡು ಹೋಗಿದ್ದಾರೆ. ಇದೇ ವೇಳೆ, ಜನರ ವಿರೋಧದ ಮಧ್ಯೆಯೂ ಕದ್ರಿ ಪಾರ್ಕ್ ನಲ್ಲಿ ಪಾರ್ಕಿಂಗ್ ಶುಲ್ಕ ಆರಂಭಿಸಲಾಗಿದೆ. ಎಲ್ಲ ಜನವಿರೋಧಿ ನಡೆಯ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಕಾಮತ್ ಹೇಳಿದರು.
ಬೈರತಿ ಸುರೇಶ್ ಕರಾವಳಿಗೆ ಬೆಂಕಿ ಹಚ್ಚಿದವರು ಎಂದು ಜರೆದರೂ ಇಲ್ಲಿನವರೇ ಆದ ಸ್ಪೀಕರ್ ಖಾದರ್ ಸುಮ್ಮನೆ ಉಳಿದಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಮಂಗಳೂರಿನ ಜನರಿಗೆ ಅಪಮಾನ ಮಾಡಿದ್ರೂ ಮೌನ ತಾಳಿದ್ದು ತಪ್ಪು. ಅವರು ತಮ್ಮ ಪಕ್ಷದವರು ಅಂತ ಮೃದು ಧೋರಣೆ ತೋರಿದ್ದಾರೆ. ದ್ವೇಷ ಭಾಷಣ ಮಸೂದೆ ಮಾಡಿದವರಿಗೆ ವಿಧಾನಸಭೆ ಒಳಗಡೆಯೇ ಇಂಥ ದ್ವೇಷ ಭಾಷಣ ಮಾಡಿದ್ದು ಕಾಣಲ್ಲ ಎಂದು ಟೀಕಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಂಡಲದ ಬಿಜೆಪಿ ಅಧ್ಯಕ್ಷ ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಭಾಸ್ಕರಚಂದ್ರ ಶೆಟ್ಟಿ, ಉಪಸ್ಥಿತರಿದ್ದರು.
MLA Vedavyas Kamath on Monday accused the Mangaluru City Corporation of functioning as a “puppet of the Congress party” and adopting a discriminatory approach in the removal of flex banners and roadside stalls across the city.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm