ಬ್ರೇಕಿಂಗ್ ನ್ಯೂಸ್
24-12-25 12:23 pm Mangalore Correspondent ಕರಾವಳಿ
ಮಂಗಳೂರು, ಡಿ.24 : ವಿದ್ಯಾರ್ಥಿಗಳ ಕೊರತೆ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ತನ್ನ ಸಂಯೋಜನೆಯಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ವ್ಯಾಪ್ತಿಯೊಳಗಿನ 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಅನುಮೋದನೆ ನೀಡಿದೆ. ಈ ಕುರಿತು ಉಪಕುಲಪತಿ ಪ್ರೊ.ಪಿ.ಎಲ್. ಧರ್ಮ ಅಧ್ಯಕ್ಷತೆಯಲ್ಲಿ ನಡೆದ ಶೈಕ್ಷಣಿಕ ಮಂಡಳಿಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ನಿರ್ಧಾರಕ್ಕೆ ಒಳಪಟ್ಟ ಕಾಲೇಜುಗಳು ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳ ದಾಖಲಾತಿಯನ್ನು ನಿಲ್ಲಿಸಬೇಕಾಗುತ್ತದೆ. ಈಗಾಗಲೇ ಈ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಯಾವುದೇ ತಡೆಯಿಲ್ಲದೆ ಕೋರ್ಸ್ಗಳನ್ನು ಪೂರೈಸಲು ಅವಕಾಶ ಕಲ್ಪಿಸಲಾಗುವುದು ಎಂದು ವಿಶ್ವವಿದ್ಯಾನಿಲಯ ಸ್ಪಷ್ಟಪಡಿಸಿದೆ. ಪ್ರತಿ ವರ್ಷ ವಿದ್ಯಾರ್ಥಿಗಳ ಸಂಖ್ಯೆ ಕುಸಿತ ಮತ್ತು ಕನಿಷ್ಠ 30 ವಿದ್ಯಾರ್ಥಿಗಳು ಇರಬೇಕೆಂಬ ವಿವಿ ನಿಮಯದ ಕಾರಣದಿಂದ ಸಣ್ಣ ಸಣ್ಣ ಕಾಲೇಜುಗಳು ಅಸ್ತಿತ್ವ ಕಳಕೊಂಡಿವೆ.
ಮುಚ್ಚಲಿರುವ ಕಾಲೇಜುಗಳ ಪಟ್ಟಿ
ವಿವಿಯ ಸಭೆಯಲ್ಲಿ ಮತ್ತೊಂದು ಪ್ರಮುಖ ನಿರ್ಧಾರವಾಗಿ, ಅರೇಬಿಕ್ ಭಾಷೆಯ ಅಧ್ಯಯನ ಮತ್ತು ಸಂಶೋಧನೆಗಾಗಿ ‘ಅರೇಬಿಕ್ ಅಧ್ಯಯನ ಕೇಂದ್ರ’ ಸ್ಥಾಪಿಸಲು ರಾಜ್ಯಪಾಲರ ಅನುಮೋದನೆ ದೊರೆತಿದೆ ಎಂದು ಉಪಕುಲಪತಿ ಪ್ರೊ. ಪಿ.ಎಲ್. ಧರ್ಮ ತಿಳಿಸಿದ್ದಾರೆ. ಕೇಂದ್ರವು ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿನ ಪ್ರಾದೇಶಿಕ ಅರೇಬಿಕ್ ಉಪಭಾಷೆಗಳು, ಸ್ಥಳೀಯ ಸಂಸ್ಕೃತಿ ಹಾಗೂ ಸಮುದಾಯಗಳ ಅಧ್ಯಯನಕ್ಕೆ ಒತ್ತು ನೀಡಲಿದೆ ಎಂದು ಅವರು ಹೇಳಿದರು.
ಶೈಕ್ಷಣಿಕ ನವೀಕರಣಗಳಿಗೆ ಒಪ್ಪಿಗೆ
ಶೈಕ್ಷಣಿಕ ಮಂಡಳಿಯ ಸಭೆಯಲ್ಲಿ ಹಲವು ಪಠ್ಯಕ್ರಮ ಸಂಬಂಧಿತ ನಿರ್ಧಾರಗಳನ್ನೂ ಕೈಗೊಳ್ಳಲಾಗಿದೆ:
ಬಿಎ ಅರ್ಥಶಾಸ್ತ್ರ ಪದವಿಯ ನಾಲ್ಕನೇ ಸೆಮಿಸ್ಟರ್ಗೆ ಕೌಶಲ್ಯಾಧಾರಿತ ಕೋರ್ಸ್ಗಳನ್ನು ಅನುಮೋದಿಸಲಾಗಿದೆ. ಬಿಎ ಪತ್ರಿಕೋದ್ಯಮದ ಮೂರನೇ ಮತ್ತು ನಾಲ್ಕನೇ ಸೆಮಿಸ್ಟರ್ಗಳಿಗೆ ಚುನಾಯಿತ (Elective) ಕೋರ್ಸ್ಗಳಿಗೆ ಒಪ್ಪಿಗೆ ನೀಡಲಾಗಿದೆ. ಎಲ್ಲಾ ಡೀನ್ಗಳು ಸಿದ್ಧಪಡಿಸಿರುವ ಪರಿಷ್ಕೃತ ಪಿಎಚ್ಡಿ ಕಾರ್ಯಕ್ರಮ ಮಾರ್ಗಸೂಚಿಗಳನ್ನು ಹೊಸ ಡಾಕ್ಟರೇಟ್ ಕೋರ್ಸ್ಗಳ ಪ್ರಾರಂಭಕ್ಕಾಗಿ ಅನುಮೋದಿಸಲಾಗಿದೆ.
Due to a drastic decline in student admissions, Mangalore University has approved the closure of 22 private colleges under its jurisdiction in Dakshina Kannada and Udupi districts. The decision was finalized during the Academic Council meeting chaired by Vice-Chancellor Prof. P.L. Dharma.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am