ಬ್ರೇಕಿಂಗ್ ನ್ಯೂಸ್
29-12-25 11:45 am Mangalore Correspondent ಕರಾವಳಿ
ಮಂಗಳೂರು, ಡಿ.29 : ನೈರುತ್ಯ ರೈಲ್ವೇ ಮೈಸೂರು ವಿಭಾಗದ ಘಾಟ್ ಸೆಕ್ಷನ್ನಲ್ಲಿ ಸಂಪೂರ್ಣ ವಿದ್ಯುದೀಕರಣ ಸಾಧಿಸಲಾಗಿದ್ದು ಡಿ.28ರಂದು ಈ ಭಾಗದ ಸಕಲೇಶಪುರ- ಸುಬ್ರಹ್ಮಣ್ಯ ಮಧ್ಯೆ ವಿದ್ಯುತ್ ಲೋಕೊಮೋಟಿವ್ ರೈಲನ್ನು ಪ್ರಾಯೋಗಿಕವಾಗಿ ಚಾಲನೆ ಮಾಡಲಾಯಿತು.
ನೈರುತ್ಯ ರೈಲ್ವೇ ಘಾಟ್ ವಿಭಾಗವು ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಉದ್ದದ ಮಾರ್ಗವನ್ನು ಒಳಗೊಂಡಿದ್ದು, ಇದು ಭಾರತೀಯ ರೈಲ್ವೇ ಪಾಲಿನ ಅತ್ಯಂತ ತಾಂತ್ರಿಕ ಸವಾಲಿನ ವಿಭಾಗಗಳಲ್ಲಿ ಒಂದಾಗಿತ್ತು. ಈ ಮಾರ್ಗದಲ್ಲಿ 1ಕ್ಕೆ 50ರಷ್ಟು ಗ್ರೇಡಿಯಂಟ್, 57 ಸುರಂಗಗಳು, 258 ಸೇತುವೆಗಳು, 108 ಕಡಿದಾದ ತಿರುವುಗಳು ಇರುವುದಲ್ಲದೆ, ಭೂಕುಸಿತ ಸಾಧ್ಯತೆಯ ಪ್ರದೇಶವೂ ಆಗಿದೆ. ಹೀಗಾಗಿ ಈ ಭಾಗದಲ್ಲಿ ವಿದ್ಯುದೀಕರಣ ಕಾರ್ಯ ಅತ್ಯಂತ ಸಂಕೀರ್ಣವಾಗಿತ್ತು.
ಈ ಭಾಗದಲ್ಲಿ ವಿದ್ಯುದೀಕರಣ ಕಾರ್ಯವನ್ನು 2023ರ ಡಿಸೆಂಬರ್ 1ರಂದು ಆರಂಭಿಸಿದ್ದು ₹93.55 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆ. ಯೋಜನೆಯಡಿ ಈ ಮಾರ್ಗದಲ್ಲಿ ಐದು ಸ್ವಿಚಿಂಗ್ ಸ್ಟೇಷನ್ಗಳ ನಿರ್ಮಾಣ ಹಾಗೂ ಸಂಪೂರ್ಣ ವಿಭಾಗದಲ್ಲಿ ಮೇಲ್ಮೈ ವಿದ್ಯುದೀಕರಣ ಕಾರ್ಯ ಕೈಗೊಳ್ಳಲಾಗಿದೆ. ಮೇಲ್ಮೈ ವಿದ್ಯುತ್ ವ್ಯವಸ್ಥೆಯನ್ನು ಗರಿಷ್ಠ 120 ಕಿಮೀ ಪ್ರತಿ ಗಂಟೆ ವೇಗಕ್ಕೆ ಅನುಗುಣವಾಗಿ ವಿನ್ಯಾಸಗೊಳಿಸಿದ್ದು, ಎರಡು ವಿದ್ಯುತ್ ಕಂಬಗಳ ನಡುವಿನ ಗರಿಷ್ಠ ಅಂತರವನ್ನು 67.5 ಮೀಟರ್ಗೆ ಮಿತಿಗೊಳಿಸಲಾಗಿದೆ.
ಈ ಭಾಗದಲ್ಲಿರುವ 57 ಸುರಂಗಗಳಲ್ಲಿ, ಮೇಲ್ಮೈ ವಿದ್ಯುತ್ ಸಾಧನಗಳ ಅಳವಡಿಕೆಗೆ 419 ಮುಖ್ಯ ಬ್ರಾಕೆಟ್ಗಳು ಮತ್ತು 419 ಹೆಚ್ಚುವರಿ ಬ್ರಾಕೆಟ್ಗಳನ್ನು ಒದಗಿಸಲಾಗಿದೆ. ಸುರಂಗಗಳ ಲೈನ್ಡ್ ಹಾಗೂ ಅನ್ಲೈನ್ಡ್ ಭಾಗಗಳಿಗೆ ಸಂಬಂಧಿಸಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ಮತ್ತು ಬೆಂಗಳೂರು ವಿಶ್ವವಿದ್ಯಾಲಯದಿಂದ ಭೌಗೋಳಿಕ ಸಮೀಕ್ಷೆಗಳನ್ನು ನಡೆಸಲಾಗಿದೆ.
ವಿದ್ಯುದೀಕರಣ ಕಾರ್ಯ ಮತ್ತು ವಿದ್ಯುತ್ ಲೋಕೊಮೋಟಿವ್ ಚಾಲನೆ ಯಶಸ್ವಿಯಾಗಿ ನಡೆದಿರುವುದರಿಂದ, ಸಂಪೂರ್ಣ ಘಾಟ್ ಭಾಗವು ಈಗ ವಿದ್ಯುತ್ ಚಾಲನೆಗೆ ಪೂರ್ಣವಾಗಿ ಸಿದ್ಧವಾಗಿದೆ. ಭಾರತೀಯ ರೈಲ್ವೆಯ ಶೇಕಡಾ 100 ವಿದ್ಯುದೀಕರಣ ಗುರಿಯತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ರೈಲ್ವೇ ಪ್ರಕಟಣೆ ತಿಳಿಸಿದೆ.
The South Western Railway’s Mysuru Division has successfully completed the full electrification of the challenging 55-km Sakleshpur–Subrahmanya Road ghat section, marking a major milestone toward launching the Mangaluru–Bengaluru Vande Bharat Express. A trial run of an electric locomotive was conducted on December 28, proving the section’s readiness for electric traction.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am