ಬ್ರೇಕಿಂಗ್ ನ್ಯೂಸ್
29-12-25 08:47 pm Mangalore Correspondent ಕರಾವಳಿ
ಮಂಗಳೂರು, ಡಿ.29: ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಪಿಲಾತಬೆಟ್ಟು ಕಟ್ಟೆಮನೆ ಎಂಬಲ್ಲಿ ಪೊಲೀಸ್ ಸಿಬಂದಿಯೊಬ್ಬರು ಚಲಾಯಿಸುತ್ತಿದ್ದ ನ್ಯಾನೋ ಕಾರು ಮತ್ತು ಬೈಕ್ ಡಿಕ್ಕಿಯಾಗಿದ್ದು, ಬೈಕ್ ಸವಾರ ಮಾರ್ನಬೈಲು ನಿವಾಸಿ ಇಮ್ರಾನ್ ಮೊಹಮ್ಮದ್ ತಾಹ ಎಂಬವರು ಸ್ಥಳದಲ್ಲೇ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ.
ಕಾರನ್ನು ಮಂಗಳೂರಿನ ಡಿಸಿಆರ್ ಇ ವಿಭಾಗದಲ್ಲಿ ಕರ್ತವ್ಯದಲ್ಲಿರುವ ಪ್ರಸನ್ನ ಎಂಬವರು ಚಲಾಯಿಸುತ್ತಿದ್ದರು. ಘಟನೆ ಸಂದರ್ಭದಲ್ಲಿ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಕಾರಿನ ಎದುರಿನ ಗ್ಲಾಸಿಗೆ ಬಿದ್ದು ಹೊರಗಡೆ ಎಸೆಯಲ್ಪಟ್ಟಿದ್ದಾನೆ. ಈ ವೇಳೆ, ಕಾಲು ತುಂಡಾಗಿದ್ದು, ತಲೆಗೆ ತೀವ್ರ ಏಟು ಬಿದ್ದು ಮೃತಪಟ್ಟಿದ್ದಾರೆ.


ಘಟನೆ ಸಂದರ್ಭದಲ್ಲಿ ಕಾರು ಚಲಾಯಿಸುತ್ತಿದ್ದ ಪೊಲೀಸ್ ಪೇದೆ ಪ್ರಸನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ವೇಳೆ, ಸ್ಥಳದಲ್ಲಿದ್ದವರು ಕಾರಿನ ಒಳಗಡೆ ಶೇಂದಿಯನ್ನು ತುಂಬಿಸಿದ್ದ ಬಾಟಲಿ ಇರುವುದನ್ನು ಪತ್ತೆ ಮಾಡಿದ್ದು, ವಿಡಿಯೋ ಮಾಡಿ ಜಾಲತಾಣದಲ್ಲಿ ಹಾಕಿದ್ದಾರೆ. ಅಲ್ಲದೆ, ಕಾರಿನ ಒಳಗೆ ಪೊಲೀಸರು ಬಳಸುವ ಟೋಪಿ ಕಂಡುಬಂದಿದ್ದು, ಇದು ಯಾರದ್ದೋ ಪೊಲೀಸರದ್ದೇ ಕಾರು ಎನ್ನುವ ಗುಮಾನಿಯಲ್ಲಿ ಕುಡಿದು ವಾಹನ ಚಲಾಯಿಸಿದ್ದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಿಳೆಯೊಬ್ಬರು ಮಾಡಿದ್ದ ಈ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಎಸ್ಪಿ ಅರುಣ್ ಅವರು ತನಿಖೆಗೆ ಸೂಚಿಸಿದ್ದು ಸದ್ರಿ ಪೊಲೀಸ್ ಸಿಬಂದಿ ಪ್ರಸನ್ನ ಅವರನ್ನು ಆ ಮಹಿಳೆ ಮತ್ತು ಸಂತ್ರಸ್ತ ಯುವಕನ ಸಂಬಂಧಿಕರ ಸಮ್ಮುಖದಲ್ಲಿಯೇ ಪರೀಕ್ಷೆಗೆ ಒಳಪಡಿಸಿದ್ದಾರೆ. ಆಲ್ಕೋ ಮೀಟರಿನಲ್ಲಿ ತಪಾಸಣೆ ನಡೆಸಿದ ವೇಳೆ ನೆಗೆಟಿವ್ ಬಂದಿದ್ದು ರಕ್ತ ಪರೀಕ್ಷೆಯನ್ನೂ ನಡೆಸುವಂತೆ ಎಸ್ಪಿ ಸೂಚಿಸಿದ್ದಾರೆ. ಘಟನೆ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A fatal accident near Pilathabettu in Punjalkatte, Bantwal taluk, claimed the life of Imran Mohammed Taha after his bike collided head-on with a Nano car allegedly driven by police staffer Prasanna of Mangaluru DCR(E). The biker died on the spot from severe head injuries, with his leg severed in the impact.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm