ಬ್ರೇಕಿಂಗ್ ನ್ಯೂಸ್
29-12-25 08:47 pm Mangalore Correspondent ಕರಾವಳಿ
ಮಂಗಳೂರು, ಡಿ.29: ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಪಿಲಾತಬೆಟ್ಟು ಕಟ್ಟೆಮನೆ ಎಂಬಲ್ಲಿ ಪೊಲೀಸ್ ಸಿಬಂದಿಯೊಬ್ಬರು ಚಲಾಯಿಸುತ್ತಿದ್ದ ನ್ಯಾನೋ ಕಾರು ಮತ್ತು ಬೈಕ್ ಡಿಕ್ಕಿಯಾಗಿದ್ದು, ಬೈಕ್ ಸವಾರ ಮಾರ್ನಬೈಲು ನಿವಾಸಿ ಇಮ್ರಾನ್ ಮೊಹಮ್ಮದ್ ತಾಹ ಎಂಬವರು ಸ್ಥಳದಲ್ಲೇ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ.
ಕಾರನ್ನು ಮಂಗಳೂರಿನ ಡಿಸಿಆರ್ ಇ ವಿಭಾಗದಲ್ಲಿ ಕರ್ತವ್ಯದಲ್ಲಿರುವ ಪ್ರಸನ್ನ ಎಂಬವರು ಚಲಾಯಿಸುತ್ತಿದ್ದರು. ಘಟನೆ ಸಂದರ್ಭದಲ್ಲಿ ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಕಾರಿನ ಎದುರಿನ ಗ್ಲಾಸಿಗೆ ಬಿದ್ದು ಹೊರಗಡೆ ಎಸೆಯಲ್ಪಟ್ಟಿದ್ದಾನೆ. ಈ ವೇಳೆ, ಕಾಲು ತುಂಡಾಗಿದ್ದು, ತಲೆಗೆ ತೀವ್ರ ಏಟು ಬಿದ್ದು ಮೃತಪಟ್ಟಿದ್ದಾರೆ.


ಘಟನೆ ಸಂದರ್ಭದಲ್ಲಿ ಕಾರು ಚಲಾಯಿಸುತ್ತಿದ್ದ ಪೊಲೀಸ್ ಪೇದೆ ಪ್ರಸನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ವೇಳೆ, ಸ್ಥಳದಲ್ಲಿದ್ದವರು ಕಾರಿನ ಒಳಗಡೆ ಶೇಂದಿಯನ್ನು ತುಂಬಿಸಿದ್ದ ಬಾಟಲಿ ಇರುವುದನ್ನು ಪತ್ತೆ ಮಾಡಿದ್ದು, ವಿಡಿಯೋ ಮಾಡಿ ಜಾಲತಾಣದಲ್ಲಿ ಹಾಕಿದ್ದಾರೆ. ಅಲ್ಲದೆ, ಕಾರಿನ ಒಳಗೆ ಪೊಲೀಸರು ಬಳಸುವ ಟೋಪಿ ಕಂಡುಬಂದಿದ್ದು, ಇದು ಯಾರದ್ದೋ ಪೊಲೀಸರದ್ದೇ ಕಾರು ಎನ್ನುವ ಗುಮಾನಿಯಲ್ಲಿ ಕುಡಿದು ವಾಹನ ಚಲಾಯಿಸಿದ್ದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಿಳೆಯೊಬ್ಬರು ಮಾಡಿದ್ದ ಈ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಎಸ್ಪಿ ಅರುಣ್ ಅವರು ತನಿಖೆಗೆ ಸೂಚಿಸಿದ್ದು ಸದ್ರಿ ಪೊಲೀಸ್ ಸಿಬಂದಿ ಪ್ರಸನ್ನ ಅವರನ್ನು ಆ ಮಹಿಳೆ ಮತ್ತು ಸಂತ್ರಸ್ತ ಯುವಕನ ಸಂಬಂಧಿಕರ ಸಮ್ಮುಖದಲ್ಲಿಯೇ ಪರೀಕ್ಷೆಗೆ ಒಳಪಡಿಸಿದ್ದಾರೆ. ಆಲ್ಕೋ ಮೀಟರಿನಲ್ಲಿ ತಪಾಸಣೆ ನಡೆಸಿದ ವೇಳೆ ನೆಗೆಟಿವ್ ಬಂದಿದ್ದು ರಕ್ತ ಪರೀಕ್ಷೆಯನ್ನೂ ನಡೆಸುವಂತೆ ಎಸ್ಪಿ ಸೂಚಿಸಿದ್ದಾರೆ. ಘಟನೆ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A fatal accident near Pilathabettu in Punjalkatte, Bantwal taluk, claimed the life of Imran Mohammed Taha after his bike collided head-on with a Nano car allegedly driven by police staffer Prasanna of Mangaluru DCR(E). The biker died on the spot from severe head injuries, with his leg severed in the impact.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am