ಬ್ರೇಕಿಂಗ್ ನ್ಯೂಸ್
31-12-20 11:21 am Mangalore Correspondent ಕರಾವಳಿ
ಮಂಗಳೂರು, ಡಿ. 31: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತರು ಅತ್ಯಧಿಕ ಸಂಖ್ಯೆಯಲ್ಲಿ ಗೆದ್ದುಕೊಂಡಿದ್ದಾರೆ. ಬುಧವಾರ ರಾತ್ರಿ ವರೆಗೂ ಮತ ಎಣಿಕೆ ನಡೆದಿದ್ದು ಮಾಹಿತಿ ಪ್ರಕಾರ 1810 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆದ್ದುಕೊಂಡರೆ, 982 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗಿದ್ದಾರೆ. ಎಸ್ ಡಿಪಿಐ 160 ಸ್ಥಾನಗಳನ್ನು ಮತ್ತು 40 ಮಂದಿ ಪಕ್ಷೇತರರು ಗೆಲುವು ಪಡೆದಿದ್ದಾರೆ.
ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಮತ್ತೆ ಬಿಜೆಪಿ ಬೆಂಬಲಿತರು ಪಾರಮ್ಯ ಕಂಡಿದ್ದಾರೆ. ಸುಳ್ಯ, ಬೆಳ್ತಂಗಡಿ, ಪುತ್ತೂರು ಹಾಗೂ ಕಡಬ ತಾಲೂಕಿನ ಬಹುತೇಕ ಭಾಗದಲ್ಲಿ ಬಿಜೆಪಿ ಬೆಂಬಲಿತರು ಅಧಿಕಾರ ಪಡೆದರೆ, ಮಂಗಳೂರು, ಬಂಟ್ವಾಳ ಮತ್ತು ಮೂಡುಬಿದ್ರೆಯಲ್ಲಿ ನೇರ ಹಣಾಹಣಿ ಏರ್ಪಟ್ಟಿದೆ. ಈ ಮೂಲಕ ನಗರ ಪ್ರದೇಶವಾದ ಈ ಮೂರು ತಾಲೂಕು ಭಾಗದಲ್ಲಿ ಹೆಚ್ಚಿನ ಕಡೆ ಕಾಂಗ್ರೆಸ್ ಬೆಂಬಲಿತರು ಅಧಿಕಾರ ಪಡೆಯುವ ಸೂಚನೆ ಲಭಿಸಿದೆ.

ಉಡುಪಿ ಜಿಲ್ಲೆಯಲ್ಲೂ ಬಿಜೆಪಿ ಬೆಂಬಲಿತರು ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಕಂಡಿದ್ದಾರೆ. 1100 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಆಯ್ಕೆಯಾದರೆ, ಕಾಂಗ್ರೆಸ್ ಕೇವಲ 450 ಸ್ಥಾನಗಳನ್ನು ಗಳಿಸಿದೆ. ಎಸ್ ಡಿಪಿಐ ಬೆಂಬಲಿತರು ಎಂಟು ಸ್ಥಾನಗಳನ್ನು ಪಡೆದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 128 ಮಂದಿ ಅವಿರೋಧ ಆಯ್ಕೆಯಾಗಿದ್ದರು.
ಹೀಗಿದ್ದರೂ, ಪೂರ್ತಿಯಾಗಿ ಫಲಿತಾಂಶ ಇನ್ನೂ ಲಭ್ಯವಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3131 ಸ್ಥಾನಗಳಿಗೆ ಚುನಾವಣೆ ನಡೆದಿದ್ದು 2863 ಸ್ಥಾನಗಳ ಫಲಿತಾಂಶ ಬಂದಿದೆ. ಉಡುಪಿಯಲ್ಲಿ 2385 ಸ್ಥಾನಗಳಲ್ಲಿ 1750 ಸ್ಥಾನಗಳ ಫಲಿತಾಂಶ ಮಾತ್ರ ಹೊರಬಿದ್ದಿದೆ.
Gram Panchayat Elections 2020 BJP Bags major Victory in Sullia, Belthangady, Puttur, Moodbidri and Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am