ಬ್ರೇಕಿಂಗ್ ನ್ಯೂಸ್
31-12-20 11:21 am Mangalore Correspondent ಕರಾವಳಿ
ಮಂಗಳೂರು, ಡಿ. 31: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತರು ಅತ್ಯಧಿಕ ಸಂಖ್ಯೆಯಲ್ಲಿ ಗೆದ್ದುಕೊಂಡಿದ್ದಾರೆ. ಬುಧವಾರ ರಾತ್ರಿ ವರೆಗೂ ಮತ ಎಣಿಕೆ ನಡೆದಿದ್ದು ಮಾಹಿತಿ ಪ್ರಕಾರ 1810 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆದ್ದುಕೊಂಡರೆ, 982 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗಿದ್ದಾರೆ. ಎಸ್ ಡಿಪಿಐ 160 ಸ್ಥಾನಗಳನ್ನು ಮತ್ತು 40 ಮಂದಿ ಪಕ್ಷೇತರರು ಗೆಲುವು ಪಡೆದಿದ್ದಾರೆ.
ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಮತ್ತೆ ಬಿಜೆಪಿ ಬೆಂಬಲಿತರು ಪಾರಮ್ಯ ಕಂಡಿದ್ದಾರೆ. ಸುಳ್ಯ, ಬೆಳ್ತಂಗಡಿ, ಪುತ್ತೂರು ಹಾಗೂ ಕಡಬ ತಾಲೂಕಿನ ಬಹುತೇಕ ಭಾಗದಲ್ಲಿ ಬಿಜೆಪಿ ಬೆಂಬಲಿತರು ಅಧಿಕಾರ ಪಡೆದರೆ, ಮಂಗಳೂರು, ಬಂಟ್ವಾಳ ಮತ್ತು ಮೂಡುಬಿದ್ರೆಯಲ್ಲಿ ನೇರ ಹಣಾಹಣಿ ಏರ್ಪಟ್ಟಿದೆ. ಈ ಮೂಲಕ ನಗರ ಪ್ರದೇಶವಾದ ಈ ಮೂರು ತಾಲೂಕು ಭಾಗದಲ್ಲಿ ಹೆಚ್ಚಿನ ಕಡೆ ಕಾಂಗ್ರೆಸ್ ಬೆಂಬಲಿತರು ಅಧಿಕಾರ ಪಡೆಯುವ ಸೂಚನೆ ಲಭಿಸಿದೆ.

ಉಡುಪಿ ಜಿಲ್ಲೆಯಲ್ಲೂ ಬಿಜೆಪಿ ಬೆಂಬಲಿತರು ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಕಂಡಿದ್ದಾರೆ. 1100 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಆಯ್ಕೆಯಾದರೆ, ಕಾಂಗ್ರೆಸ್ ಕೇವಲ 450 ಸ್ಥಾನಗಳನ್ನು ಗಳಿಸಿದೆ. ಎಸ್ ಡಿಪಿಐ ಬೆಂಬಲಿತರು ಎಂಟು ಸ್ಥಾನಗಳನ್ನು ಪಡೆದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 128 ಮಂದಿ ಅವಿರೋಧ ಆಯ್ಕೆಯಾಗಿದ್ದರು.
ಹೀಗಿದ್ದರೂ, ಪೂರ್ತಿಯಾಗಿ ಫಲಿತಾಂಶ ಇನ್ನೂ ಲಭ್ಯವಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3131 ಸ್ಥಾನಗಳಿಗೆ ಚುನಾವಣೆ ನಡೆದಿದ್ದು 2863 ಸ್ಥಾನಗಳ ಫಲಿತಾಂಶ ಬಂದಿದೆ. ಉಡುಪಿಯಲ್ಲಿ 2385 ಸ್ಥಾನಗಳಲ್ಲಿ 1750 ಸ್ಥಾನಗಳ ಫಲಿತಾಂಶ ಮಾತ್ರ ಹೊರಬಿದ್ದಿದೆ.
Gram Panchayat Elections 2020 BJP Bags major Victory in Sullia, Belthangady, Puttur, Moodbidri and Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am