ಬ್ರೇಕಿಂಗ್ ನ್ಯೂಸ್
15-01-26 04:01 pm Mangalore Correspondent ಕರಾವಳಿ
ಮಂಗಳೂರು, ಜ.15 : ಅಖಿಲ ಭಾರತ ಬಿಲ್ಲವರ ಯೂನಿಯನ್ ಆಶ್ರಯದಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವವು ಜ.18ರಂದು ಬೆಳಗ್ಗೆ 9 ಗಂಟೆಯಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡೋತ್ಸವದಲ್ಲಿ ಕರುನಾಡ ಚಕ್ರವರ್ತಿ ಡಾ. ಶಿವರಾಜ್ಕುಮಾರ್ ಸೇರಿದಂತೆ ಚಿತ್ರರಂಗದ ತಾರೆಯರು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 7.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ನೆಹರೂ ಮೈದಾನದ ವರೆಗೆ ಕ್ರೀಡಾ ಜ್ಯೋತಿ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು, ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ ಎಂದು ಹೇಳಿದರು. ತಾರಾ ಆಕರ್ಷಣೆಯಾಗಿ ಡಾ. ಶಿವರಾಜ್ಕುಮಾರ್, ವಿಜಯ ರಾಘವೇಂದ್ರ, ಧನ್ಯಾ ರಾಮ್ ಕುಮಾರ್, ಯುವ ರಾಜ್ ಕುಮಾರ್, ಪೃಥ್ವಿ ಅಂಬರ್ ಹಾಗೂ ಅನುಶ್ರೀ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಸಂಜೆ 5.30ಕ್ಕೆ ಪ್ರಕಾಶ್ ಮಹಾದೇವನ್ ಹಾಗೂ ತಂಡದಿಂದ ಸಂಗೀತ ರಸಮಂಜರಿ ನಡೆಯಲಿದೆ ಎಂದು ನವೀನ್ ಚಂದ್ರ ಸುವರ್ಣ ಮಾಹಿತಿ ನೀಡಿದರು.
1912ರಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮಾರ್ಗದರ್ಶನದಲ್ಲಿ ಕುದ್ರೋಳಿಯಲ್ಲಿ ಸ್ಥಾಪಿತವಾದ ಅಖಿಲ ಭಾರತ ಬಿಲ್ಲವರ ಯೂನಿಯನ್ ಸಮಾಜವನ್ನು ಶೈಕ್ಷಣಿಕ, ಸಾಮಾಜಿಕ ಹಾಗೂ ಸಂಘಟಿತವಾಗಿ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಮುಲ್ಕಿಯಲ್ಲಿ ನಡೆದ ಪ್ರಪ್ರಥಮ ಬಿಲ್ಲವ ಸಮ್ಮೇಳನ, ನಾರಾಯಣ ಗುರು ವಿದ್ಯಾಸಂಸ್ಥೆಗಳು, ಮಹಿಳಾ ಸಮ್ಮೇಳನ ಹಾಗೂ ಬಿಲ್ಲವ ಮಹಿಳಾ ಹಾಸ್ಟೆಲ್ಗಳು ಸಂಘಟನೆಯ ಪ್ರಮುಖ ಸಾಧನೆಗಳಾಗಿವೆ ಎಂದು ಹೇಳಿದರು.
ಯುವ ಸಮುದಾಯವನ್ನು ಸಂಘಟಿಸುವ ಉದ್ದೇಶದೊಂದಿಗೆ ಜಾಗತಿಕ ಕ್ರೀಡೋತ್ಸವವನ್ನು ಆಯೋಜಿಸಲಾಗಿದ್ದು, ಬೆಳಗ್ಗೆ 8 ಗಂಟೆಗೆ ವಿಶ್ವಕಪ್ ಮಹಿಳಾ ಕಬಡ್ಡಿಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಆಟಗಾರ್ತಿ ಕು. ಧನಲಕ್ಷ್ಮೀ ಪೂಜಾರಿ ನೇತೃತ್ವದಲ್ಲಿ ಕ್ರೀಡಾ ಜ್ಯೋತಿ ಮೆರವಣಿಗೆ ಕುದ್ರೋಳಿಯಿಂದ ನಾರಾಯಣ ಗುರು ವೃತ್ತ, ಲಾಲ್ಭಾಗ್, ಕೆ.ಎಸ್. ರಾವ್ ರಸ್ತೆ ಮೂಲಕ ನೆಹರೂ ಮೈದಾನ ತಲುಪಲಿದೆ.
ಬೆಳಗ್ಗೆ 9 ಗಂಟೆಗೆ ದಾಮೋದರ ಆರ್. ಸುವರ್ಣ ವೇದಿಕೆಯಲ್ಲಿ ಸಾಗರ್ ಗ್ರೂಪ್ ಆಫ್ ಹೋಟೆಲ್ಸ್ ಛೇರ್ಮ್ಯಾನ್ ಜಯರಾಮ್ ಬನಾನ್ ಹಾಗೂ ಪೂಜಾರಿ ಫಿಶ್ ಲ್ಯಾಂಡ್ನ ಮಾಲೀಕ ಎಲ್. ಸುಧಾಕರ ಪೂಜಾರಿ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಮಹಿಳೆಯರಿಗೆ ತ್ರೋಬಾಲ್ ಹಾಗೂ ಹಗ್ಗಜಗ್ಗಾಟ, ಪುರುಷರಿಗೆ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಸೇರಿದಂತೆ ಮಕ್ಕಳಿಗೂ ಮಹಿಳೆಯರಿಗೂ ವಿವಿಧ ಕ್ರೀಡಾವಳಿಗಳು ನಡೆಯಲಿವೆ ಎಂದು ನವೀನ್ ಚಂದ್ರ ಸುವರ್ಣ ವಿವರಿಸಿದರು.
ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಣೆ ನಡೆಯಲಿದ್ದು, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಕೇಂದ್ರ ಸಚಿವ ಶ್ರೀಪಾದ್ ನಾಯಕ್, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಸಚಿವ ಮಧು ಬಂಗಾರಪ್ಪ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬೃಜೇಶ್ ಚೌಟ ಸೇರಿದಂತೆ ಶಾಸಕರು ಹಾಗೂ ಚಿತ್ರರಂಗ–ಕ್ರೀಡಾ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ. ಕ್ರೀಡೋತ್ಸವಯಶಸ್ವಿಗೊಳಿಸಲು ಸಮಾಜದ ಸರ್ವರು ಸಹಕರಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ನವೀನಚಂದ್ರ ಸುವರ್ಣ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಯೂನಿಯನ್ ಸಂಚಾಲಕ ಸದಾನಂದ ಪೂಜಾರಿ, ಖಜಾಂಚಿ ಜಯಪ್ರಕಾಶ್, ಮಹಿಳಾ ವಿಭಾಗದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ಉಪಸ್ಥಿತರಿದ್ದರು.
The first-ever Global Billava Sports Festival will be held on January 18 from 9 am at the Nehru Stadium in Mangaluru under the aegis of the All India Billava Union. Kannada film superstar Dr. Shivarajkumar, along with actors Vijay Raghavendra, Dhanya Ramkumar, Yuva Rajkumar, Pruthvi Ambar and anchor Anushree, will be among the star attractions of the event.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm